ಬ್ರೇಕಿಂಗ್ ನ್ಯೂಸ್
10-04-24 12:16 pm Bangalore Correspondent ಕ್ರೈಂ
ಬೆಂಗಳೂರು, ಏ 10: ತಾಯಿಯಿಂದಲೇ ಇಬ್ಬರು ಮಕ್ಕಳು ಹತ್ಯೆಗೀಡಾದ ದಾರುಣ ಘಟನೆ ಮಂಗಳವಾರ ತಡರಾತ್ರಿ ಜಾಲಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಲಕ್ಷ್ಮೀ (9) ಹಾಗೂ ಗೌತಮ್ (7) ಕೊಲೆಯಾದ ಮಕ್ಕಳು ಎಂದು ತಿಳಿದು ಬಂದಿದೆ. ಕೊಲೆ ಬಳಿಕ ಮಹಿಳೆಯೇ ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ತಿಳಿಸಿದ್ದಾಳೆ.
ಗಂಗಾದೇವಿ ಕೊಲೆ ಮಾಡಿರುವ ಆರೋಪಿ ತಾಯಿಯಾಗಿದ್ದು, ದಿಂಬಿನಿಂದ ಉಸಿರುಗಟ್ಟಿಸಿ ಕೊಂದಿದ್ದಾಳೆ ಎನ್ನಲಾಗಿದೆ. ದಿಂಬಿನಿಂದ ಉಸಿರುಗಟ್ಟಿಸಿ ಮಕ್ಕಳನ್ನು ಕೊಂದಿರುವ ಆರೋಪದ ಮೇಲೆ ತಾಯಿ ಗಂಗಾದೇವಿಯನ್ನು ಜಾಲಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೂಲತಃ ಆಂಧ್ರಪ್ರದೇಶದವರಾದ ಗಂಗಾದೇವಿ ಕುಟುಂಬ ಬೆಂಗಳೂರಿನಲ್ಲಿ ನೆಲೆಸಿತ್ತು. ಆರೋಪಿ ಗಂಗಾದೇವಿ ಖಾಸಗಿ ಕಂಪನಿಯೊಂದರ ಮಾರ್ಕೆಟಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರೆ, ಆಕೆಯ ಪತಿ ಬಿಬಿಎಂಪಿಯ ಗುತ್ತಿಗೆ ಆಧಾರದ ಪೌರ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಮಾರ್ಚ್ ತಿಂಗಳಿನಲ್ಲಿ ಗಂಡನ ವಿರುದ್ಧ ಗಂಗಾದೇವಿಯೇ ನೀಡಿದ್ದ ದೂರಿನ ಅನ್ವಯ ಪೋಕ್ಸೊ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆತನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಮಂಗಳವಾರ ಇಬ್ಬರು ಮಕ್ಕಳೊಂದಿಗೆ ಯುಗಾದಿ ಹಬ್ಬ ಆಚರಿಸಿದ್ದ ಗಂಗಾದೇವಿ, ತಡರಾತ್ರಿ ಮಕ್ಕಳಿಬ್ಬರನ್ನೂ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ಬಳಿಕ ರಾತ್ರಿ 1 ಗಂಟೆ ಸುಮಾರಿಗೆ ತಾನೇ ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ, ಗಲಾಟೆಯಾಗಿದೆ ಎಂದು ಪೊಲೀಸರ ನೆರವು ಕೇಳಿದ್ದಾರೆ. ತಕ್ಷಣ ಸ್ಥಳಕ್ಕೆ ತೆರಳಿದ ಪೊಲೀಸರ ಎದುರು ತಾನೇ ಮಕ್ಕಳನ್ನು ಕೊಲೆ ಮಾಡಿರುವುದಾಗಿ ಗಂಗಾದೇವಿ ಒಪ್ಪಿಕೊಂಡಿದ್ದಾರೆ ಎಂದು ಬೆಂಗಳೂರು ಉತ್ತರ ವಿಭಾಗದ ಡಿಸಿಪಿ ಸೈದುಲು ಅಡಾವತ್ ತಿಳಿಸಿದ್ದಾರೆ.
ಕುಟುಂಬ ನಿರ್ವಹಣೆಗೆ ಕಷ್ಟ ಆಗುತ್ತಿದ್ದುದರಿಂದ ಮಾನಸಿಕ ಒತ್ತಡಕ್ಕೊಳಪಟ್ಟು ಆರೋಪಿಯೇ ಕೃತ್ಯ ಎಸಗಿರುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಸದ್ಯ ಆರೋಪಿಯನ್ನ ಜಾಲಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ಕೈಗೊಂಡಿದ್ದಾರೆ ಎಂದು ಡಿಸಿಪಿ ಅಡಾವತ್ ಮಾಹಿತಿ ನೀಡಿದ್ದಾರೆ.
Mother kills two of her children using pillow in Bangalore and later calls police to her house and confesses the crime she has commit. Recently her husband was arrested on POSCO charges and she was mentally disturbed.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am