ಬ್ರೇಕಿಂಗ್ ನ್ಯೂಸ್
10-04-24 01:33 pm Mangalore Correspondent ಕ್ರೈಂ
ಮಂಗಳೂರು, ಎ.10: ಸರ್ಕಾರಿ ಅಧಿಕಾರಿಯೊಬ್ಬರನ್ನು ಖದೀಮರ ತಂಡವೊಂದು ಲೋಕಾಯುಕ್ತ ಪೊಲೀಸರ ಸೋಗಿನಲ್ಲಿ ಕರೆ ಮಾಡಿ ಲಂಚದ ಬೇಡಿಕೆ ಇಟ್ಟು ಪ್ರಕರಣ ದಾಖಲಿಸುವ ಬೆದರಿಕೆಯೊಡ್ಡಿ ವಂಚಿಸಲು ಯತ್ನಿಸಿದ ಘಟನೆ ನಡೆದಿದ್ದು ಕಂದಾಯ ಅಧಿಕಾರಿ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಸೋಮೇಶ್ವರ ಪುರಸಭೆಯ ಕಂದಾಯ ಅಧಿಕಾರಿಯಾಗಿರುವ ಪುರುಷೋತ್ತಮ ಅವರು ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆ ನಿಮಿತ್ತ ಸಂಚಾರ ತಂಡದಲ್ಲಿ (ಫ್ಲೈಯಿಂಗ್ ಸ್ಕ್ವಾಡ್) ಕರ್ತವ್ಯ ನಿರ್ವಹಿಸುತ್ತಿದ್ದರು. ಎ. 5ರಂದು ಮಧ್ಯಾಹ್ನ 2 ರಿಂದ ರಾತ್ರಿ 10 ಗಂಟೆಯ ವರೆಗೆ ಫ್ಲೈಯಿಂಗ್ ಸ್ಕ್ವಾಡ್ 1 ರಲ್ಲಿ ಅವರು ಕರ್ತವ್ಯ ನಿರ್ವಹಿಸಬೇಕಿತ್ತು. ಅಂದು ಮಧ್ಯಾಹ್ನದ ವರೆಗೆ ಎಂದಿನಂತೆ ಸೋಮೇಶ್ವರ ಪುರಸಭೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಅದೇ ದಿನ ಮಧ್ಯಾಹ್ನ ವಾಟ್ಸ್ಆ್ಯಪ್ ಕರೆ ಮಾಡಿದ್ದ ವ್ಯಕ್ತಿಯೋರ್ವ, ‘ಲೋಕಾಯುಕ್ತದಿಂದ ಮಾತನಾಡುತ್ತಿದ್ದೇವೆ. ನಿಮ್ಮ ವಿರುದ್ಧ ದೂರು ಬಂದಿದೆ. ಸಾಹೇಬರು ಮಾತನಾಡುತ್ತಾರೆ ಎಂದು ಬೇರೊಬ್ಬ ವ್ಯಕ್ತಿಗೆ ಫೋನ್ ಕೊಟ್ಟಿದ್ದು, ಆ ವ್ಯಕ್ತಿ ನಿಮ್ಮ ಕಚೇರಿಗೆ ಬರುವ ಮೊದಲು ಈ ವಿಚಾರವನ್ನು ಇಲ್ಲಿಗೆ ಸರಿ ಮಾಡೋದಾದರೆ ಮಾಡೋಣ ಎಂದು ಹೇಳಿ ಮೊದಲು ಮಾತನಾಡಿದ್ದ ವ್ಯಕ್ತಿಗೆ ಫೋನ್ ಕೊಟ್ಟಿದ್ದ. ಅಲ್ಲದೇ 80 ಸಾವಿರ ರೂ. ಫೋನ್ ಪೇ ಮೂಲಕ ಕಳುಹಿಸಲು ಹೇಳಿದ್ದರು ಎನ್ನಲಾಗಿದೆ.
ಈ ಕುರಿತಂತೆ ಪ್ರತಿಕ್ರಿಯಿಸಿದ ಕಂದಾಯ ಅಧಿಕಾರಿ, ‘ತನಗೆ 9 ತಿಂಗಳಿನಿಂದ ಸಂಬಳ ಆಗಿಲ್ಲ ಎಂದು ತಿಳಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಕರೆ ಮಾಡಿದ ವ್ಯಕ್ತಿ 50 ಸಾವಿರ ರೂ. ಫೋನ್ ಪೇ ಮೂಲಕ ಕಳುಹಿಸಬೇಕು. ಇಲ್ಲದಿದ್ದರೆ ತೊಂದರೆ ಆಗುತ್ತದೆ ಎಂದು ಬೆದರಿಸಿದ್ದರು. ಈ ವೇಳೆ ಪುರುಷೋತ್ತಮ ಅವರು ಕರೆ ಕಟ್ ಮಾಡಿದ್ದಾರೆ. ಬಳಿಕ ಕರೆ ಬಂದ ಮೊಬೈಲ್ ನಂಬರ್ ಟ್ರೂ ಕಾಲರ್ ಆ್ಯಪ್ನಲ್ಲಿ ಪರಿಶೀಲಿಸಿದಾಗ ‘ಡಿ. ಪ್ರಭಾಕರ, ಲೋಕಾಯುಕ್ತ ಪಿ.ಐ’ ಎಂದು ತೋರಿಸಿತ್ತು. ಕೂಡಲೇ ಲೋಕಾಯುಕ್ತ ಪೊಲೀಸರ ಮಂಗಳೂರು ಕಚೇರಿಯ ಅಧಿಕಾರಿಗಳಲ್ಲಿ ಈ ಬಗ್ಗೆ ವಿಚಾರಿಸಿದ್ದಾರೆ. ಅಂತಹ ಹೆಸರಿನ ಯಾವುದೇ ಅಧಿಕಾರಿ ಅಥವಾ ಸಿಬ್ಬಂದಿ ತಮ್ಮ ಕಚೇರಿಯಲ್ಲಿ ಇಲ್ಲ ಎಂದು ಲೋಕಾಯುಕ್ತ ಕಚೇರಿಯಿಂದ ತಿಳಿಸಿದ ಮೇರೆಗೆ, ಕಂದಾಯ ಅಧಿಕಾರಿ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.
Mangalore Someshwara Town Municipal officer gets fake Lokayukta call, Fraudsters demand money or else will file case. A case has been booked at Ullal police station.
28-05-26 03:24 pm
HK News Staffer
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm