ಬ್ರೇಕಿಂಗ್ ನ್ಯೂಸ್
30-11-20 06:31 pm Mangalore Correspondent ಕ್ರೈಂ
ಮಂಗಳೂರು, ನ.30: ಮಹಿಳೆಯೊಬ್ಬರ ಮನೆಗೆ ನುಗ್ಗಿ, ಅಸಭ್ಯವಾಗಿ ವರ್ತಿಸಿದ್ದಲ್ಲದೆ ಪೊಲೀಸ್ ವಾರ್ತೆ ಪತ್ರಿಕೆ ಹೆಸರಲ್ಲಿ ಬ್ಲಾಕ್ ಮೇಲ್ ಮಾಡಿರುವ ಬಗ್ಗೆ ಬಜ್ಪೆ ಠಾಣೆಯಲ್ಲಿ ಮೂರು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಘಟನೆ ಬಗ್ಗೆ ಪೊಲೀಸ್ ವಾರ್ತೆ ಪತ್ರಿಕೆಯ ಸುಭಾಸ್ ಶೆಟ್ಟಿ, ಮನೋಜ್ ಉಳ್ಳಾಲ್ ಮತ್ತು ನಿತಿನ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ನ.26ರಂದು ಈ ಮೂವರು ಮರವೂರಿನ ಮನೆಗೆ ಐ ಟ್ವೆಂಟಿ ಕಾರಿನಲ್ಲಿ ತೆರಳಿದ್ದು, ಅಲ್ಲಿ ದಿವ್ಯ ಎಂಬ ಹುಡುಗಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ. ಆಬಳಿಕ ಮೊಬೈಲಿನಲ್ಲಿ ಫೋಟೊ ತೆಗೆದು, ನಾವು ಮೀಡಿಯಾದವರು. ನಿಮ್ಮಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿದೆ. ಈ ಬಗ್ಗೆ ನಾವು ಪೊಲೀಸ್ ವಾರ್ತೆ ಪತ್ರಿಕೆಯಲ್ಲಿ ಮತ್ತು ಸ್ಟೇಟ್ ಚಾನಲಿನಲ್ಲಿ ಹಾಕುವುದಾಗಿ ಬೆದರಿಸಿದ್ದಾರೆ. ಆಬಳಿಕ ಒಂದು ಲಕ್ಷ ರೂ. ಕೊಟ್ಟರೆ ಸುದ್ದಿ ಹಾಕುವುದಿಲ್ಲ ಎಂದು ಹೇಳಿ ಹಣದ ಬೇಡಿಕೆ ಮುಂದಿಟ್ಟಿದ್ದಾರೆ.
ಕೊನೆಗೆ, 15 ಸಾವಿರ ರೂ.ವನ್ನು ಮನೆಯವರು ಕೊಟ್ಟಿದ್ದಾರೆ. ಉಳಿದ ಹಣವನ್ನು ಆಮೇಲೆ ಕೊಡುವುದಾಗಿ ಹೇಳಿದ್ದಾರೆ. ಆದರೆ, ಮರುದಿನ ಮನೋಜ್ ಮತ್ತು ನಿತಿನ್ ಮನೆಯವರಿಗೆ ಫೋನ್ ಮಾಡಿ, ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದರು. ಈ ಬಗ್ಗೆ ಮಹಿಳೆ, ಫೋನ್ ಮಾಡಿ ಹಣ ಕೇಳುತ್ತಿರುವ ಬಗ್ಗೆ ಕರೆಯನ್ನು ರೆಕಾರ್ಡ್ ಮಾಡಿದ್ದರು. ಹಣ ಕೊಡದಿದ್ದರೆ ಚಾನೆಲ್ನಲ್ಲಿ ಸುದ್ದಿ ಹಾಕಿಸುತ್ತೇನೆ ಎಂದು ಬೆದರಿಕೆ ಒಡ್ಡಿದ್ದರಿಂದ ಮಹಿಳೆ ಹೆದರಿದ್ದರು.
ಆಬಳಿಕ ಮಹಿಳೆ ಮತ್ತು ಪತಿ ಚಂದ್ರಶೇಖರ್ ಬಜ್ಪೆ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನಲ್ಲಿ ಮೂವರ ಹೆಸರು ನಮೂದಿಸಿದ್ದು, ಬ್ಲಾಕ್ ಮೇಲ್ ವಿಚಾರದಲ್ಲಿ ವಿವರವಾಗಿ ದೂರು ತಿಳಿಸಿದ್ದಾರೆ. ಸುಭಾಸ್ ಶೆಟ್ಟಿ ಮತ್ತು ಆತನ ಮೂವರು ಸಹಚರರು ಈಗ ತಲೆಮರೆಸಿಕೊಂಡಿದ್ದಾರೆ. ಬಜ್ಪೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.
The Bajpe Police have registered Blackmail and Extortion case against Journalist Police Varthe Subhas Shetty, Manoj Ullal and Nitin.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 03:33 pm
Mangalore Correspondent
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
15-05-25 06:02 pm
Bangalore Correspondent
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm