ಬ್ರೇಕಿಂಗ್ ನ್ಯೂಸ್
30-11-20 06:31 pm Mangalore Correspondent ಕ್ರೈಂ
ಮಂಗಳೂರು, ನ.30: ಮಹಿಳೆಯೊಬ್ಬರ ಮನೆಗೆ ನುಗ್ಗಿ, ಅಸಭ್ಯವಾಗಿ ವರ್ತಿಸಿದ್ದಲ್ಲದೆ ಪೊಲೀಸ್ ವಾರ್ತೆ ಪತ್ರಿಕೆ ಹೆಸರಲ್ಲಿ ಬ್ಲಾಕ್ ಮೇಲ್ ಮಾಡಿರುವ ಬಗ್ಗೆ ಬಜ್ಪೆ ಠಾಣೆಯಲ್ಲಿ ಮೂರು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಘಟನೆ ಬಗ್ಗೆ ಪೊಲೀಸ್ ವಾರ್ತೆ ಪತ್ರಿಕೆಯ ಸುಭಾಸ್ ಶೆಟ್ಟಿ, ಮನೋಜ್ ಉಳ್ಳಾಲ್ ಮತ್ತು ನಿತಿನ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ನ.26ರಂದು ಈ ಮೂವರು ಮರವೂರಿನ ಮನೆಗೆ ಐ ಟ್ವೆಂಟಿ ಕಾರಿನಲ್ಲಿ ತೆರಳಿದ್ದು, ಅಲ್ಲಿ ದಿವ್ಯ ಎಂಬ ಹುಡುಗಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ. ಆಬಳಿಕ ಮೊಬೈಲಿನಲ್ಲಿ ಫೋಟೊ ತೆಗೆದು, ನಾವು ಮೀಡಿಯಾದವರು. ನಿಮ್ಮಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿದೆ. ಈ ಬಗ್ಗೆ ನಾವು ಪೊಲೀಸ್ ವಾರ್ತೆ ಪತ್ರಿಕೆಯಲ್ಲಿ ಮತ್ತು ಸ್ಟೇಟ್ ಚಾನಲಿನಲ್ಲಿ ಹಾಕುವುದಾಗಿ ಬೆದರಿಸಿದ್ದಾರೆ. ಆಬಳಿಕ ಒಂದು ಲಕ್ಷ ರೂ. ಕೊಟ್ಟರೆ ಸುದ್ದಿ ಹಾಕುವುದಿಲ್ಲ ಎಂದು ಹೇಳಿ ಹಣದ ಬೇಡಿಕೆ ಮುಂದಿಟ್ಟಿದ್ದಾರೆ.



ಕೊನೆಗೆ, 15 ಸಾವಿರ ರೂ.ವನ್ನು ಮನೆಯವರು ಕೊಟ್ಟಿದ್ದಾರೆ. ಉಳಿದ ಹಣವನ್ನು ಆಮೇಲೆ ಕೊಡುವುದಾಗಿ ಹೇಳಿದ್ದಾರೆ. ಆದರೆ, ಮರುದಿನ ಮನೋಜ್ ಮತ್ತು ನಿತಿನ್ ಮನೆಯವರಿಗೆ ಫೋನ್ ಮಾಡಿ, ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದರು. ಈ ಬಗ್ಗೆ ಮಹಿಳೆ, ಫೋನ್ ಮಾಡಿ ಹಣ ಕೇಳುತ್ತಿರುವ ಬಗ್ಗೆ ಕರೆಯನ್ನು ರೆಕಾರ್ಡ್ ಮಾಡಿದ್ದರು. ಹಣ ಕೊಡದಿದ್ದರೆ ಚಾನೆಲ್ನಲ್ಲಿ ಸುದ್ದಿ ಹಾಕಿಸುತ್ತೇನೆ ಎಂದು ಬೆದರಿಕೆ ಒಡ್ಡಿದ್ದರಿಂದ ಮಹಿಳೆ ಹೆದರಿದ್ದರು.
ಆಬಳಿಕ ಮಹಿಳೆ ಮತ್ತು ಪತಿ ಚಂದ್ರಶೇಖರ್ ಬಜ್ಪೆ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನಲ್ಲಿ ಮೂವರ ಹೆಸರು ನಮೂದಿಸಿದ್ದು, ಬ್ಲಾಕ್ ಮೇಲ್ ವಿಚಾರದಲ್ಲಿ ವಿವರವಾಗಿ ದೂರು ತಿಳಿಸಿದ್ದಾರೆ. ಸುಭಾಸ್ ಶೆಟ್ಟಿ ಮತ್ತು ಆತನ ಮೂವರು ಸಹಚರರು ಈಗ ತಲೆಮರೆಸಿಕೊಂಡಿದ್ದಾರೆ. ಬಜ್ಪೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.
The Bajpe Police have registered Blackmail and Extortion case against Journalist Police Varthe Subhas Shetty, Manoj Ullal and Nitin.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am