ಬ್ರೇಕಿಂಗ್ ನ್ಯೂಸ್
18-04-24 10:03 pm Bangalore Correspondent ಕ್ರೈಂ
ಬೆಂಗಳೂರು, ಏ 18: ಹಾಡಹಗಲೇ ಬೆಂಗಳೂರಿನಲ್ಲಿ ರಕ್ತದೋಕುಳಿ ನಡೆದಿದೆ. ಜನನಿಬಡ ಪ್ರದೇಶದಲ್ಲಿ ಯುವಕ -ಯುವತಿಯ ಬರ್ಬರ ಹತ್ಯೆ ನಡೆದಿದೆ.
ತನ್ನ ಪ್ರೀತಿಯನ್ನು ಮುಂದುವರಿಸಲು ಒಪ್ಪದ ಯುವತಿಯನ್ನ ವಿವಾಹಿತ ವ್ಯಕ್ತಿ ಸುರೇಶ್ ಬರ್ಬರವಾಗಿ ಹತ್ಯೆಗೈದಿದ್ದಾನೆ. ಈ ವೇಳೆ ತನ್ನ ಕಣ್ಣೆದುರೆ ಮಗಳ ಮೇಲೆ ಹಲ್ಲೆ ತಡೆಯಲು ಬಂದ ಯುವತಿಯ ತಾಯಿ, ಸುರೇಶನ ಮೇಲೆ ಸಿಮೆಂಟ್ ಇಟ್ಟಿಗೆಯಿಂದ ತಲೆಗೆ ಹೊಡೆದಿದ್ದಾಳೆ. ಇದರಿಂದ ಆರೋಪಿ ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸಾರಕ್ಕಿ ಮಾರ್ಕೆಟ್ ಬಳಿಯ ಪಾರ್ಕ್ ನಲ್ಲಿ ಈ ಜೋಡಿ ಕೊಲೆ ನಡೆದಿವೆ.
ಅನುಷಾ ಎಂಬ ಯುವತಿಯನ್ನ ಸುರೇಶ್ ಚಾಕುವಿನಿಂದ ಹಿರಿದು ಕೊಂದಿದ್ದಾನೆ. ಗೊರಗುಂಟೆಪಾಳ್ಯ ಮೂಲದ ಸುರೇಶ್ ಸಾರಕ್ಕಿಯ ಶಾಕಾಂಬರಿ ನಗರ ನಿವಾಸಿ ಅನುಷಾಳನ್ನ ಕೊಲೆ ಮಾಡಿದ್ದಾನೆ. ಈ ವೇಳೆ ಸಂತ್ರಸ್ತೆ ತಾಯಿ ಕಲ್ಲಿನಿಂದ ಹೊಡೆದು ಸುರೇಶ್ ಹತ್ಯೆಗೈದಿದ್ದಾಳೆ.
ಸಂಬಂಧ ಮುರಿದುಕೊಳ್ಳಲು ಬಂದಿದ್ದಾಗ ಘಟನೆ ;
ಪೊಲೀಸರ ವರದಿಯ ಪ್ರಕಾರ, ಹಲವಾರು ವರ್ಷಗಳಿಂದ ಇಬ್ಬರಿಗೂ ಪರಿಚಯ ಇತ್ತು ಎಂದು ತಿಳಿದುಬಂದಿದೆ. ಸುರೇಶ್ಗೆ ಮದುವೆಯಾಗಿತ್ತು. ಆದರೂ ಅನುಷಾ ಜೊತೆ ಮದುವೆಯಾಗಿಲ್ಲ ಎಂದು ಸುಳ್ಳು ಹೇಳಿ ಪ್ರೇಮ ಸಂಬಂಧ ಹೊಂದಿದ್ದ. ಆದರೆ ಅನುಷಾಗೆ ಸಂಬಂಧ ಮುಂದುವರೆಸುವುದು ಇಷ್ಟ ಇರಲಿಲ್ಲ. ಇಂದು ಭೇಟಿಯಾಗಿ ಸಂಪರ್ಕ ಕಡಿತ ಮಾಡಿಕೊಳ್ಳುವ ತೀರ್ಮಾನ ಮಾಡಿದ್ದರು. ಆದರೆ ಅನುಷಾ ಕೈ ತಪ್ಪಿ ಹೋಗ್ತಾಳೆ ಎಂದು ಕೋಪಗೊಂಡಿದ್ದ ಸುರೇಶ್, ಕೋಪದಲ್ಲಿ ಚಾಕುವಿನಿಂದ ಇರಿದು ಕೊಂದಿದ್ದಾನೆ.
ಸುರೇಶ್ ಮತ್ತು ಅನುಷಾ ಐದು ವರ್ಷಗಳಿಂದ ಒಟ್ಟಿಗೆ ಕೆಲಸ ಮಾಡ್ತಿದ್ರು. ಸುರೇಶ ನನಗೆ ಮದುವೆಯಾಗಿಲ್ಲಾ ಎಂದು ಅನುಷಾಳನ್ನ ಪ್ರೀತಿಸುತ್ತಿದ್ದ. ಆದರೆ ಒಂದು ವರ್ಷದ ಹಿಂದೆ ಅನುಷಾಗೆ ಸುರೇಶ್ ಬಗ್ಗೆ ಅಸಲಿ ವಿಚಾರ ಗೊತ್ತಾಗಿದೆ. ಸುರೇಶ್ಗೆ ಮದುವೆಯಾಗಿ ಮಕ್ಕಳಿವೆ ಅನ್ನೋ ವಿಚಾರ ಗೊತ್ತಾಗುತ್ತಿದ್ದಂತೆ, ಇವೆಂಟ್ ಮ್ಯಾನೇಜ್ಮೆಂಟ್ ಬಿಟ್ಟು ನರ್ಸಿಂಗ್ ಹೋಮ್ನಲ್ಲಿ ಕೆಲಸಕ್ಕೆ ಸೇರಿದ್ದ ಅನುಷಾ. ಇದಾಗಿಯೂ ಸುರೇಶ್ ಅನುಷಾಳನ್ನ ಬಿಡಲು ಒಪ್ಪಿರಲಿಲ್ಲಾ ಎಂದು ತಿಳಿದುಬಂದಿದೆ.
ಪ್ರೀತಿ ನಿರಾಕರಿಸಿದರೂ ಹಿಂದೆ ಬಿದ್ದು, ಪೀಡಿಸುತ್ತಿದ್ದಾನೆ ಎಂದು ಇಂದು ಬೆಳಗ್ಗೆ ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಅನುಷಾ ದೂರು ನೀಡಿದ್ದರು. ಸುರೇಶ್ ಎಂಬಾತ ತನಗೆ ಪರಿಚಯ ಇದ್ದು, ತನ್ನನ್ನ ಪೀಡಿಸುತಿದ್ದಾನೆ ಎಂದು ತಿಳಿಸಿದ್ದಳು. ಪೊಲೀಸರು, ಇಬ್ಬರನ್ನು ಕರೆದು ಸುರೇಶ್ಗೆ ವಾರ್ನ್ ಮಾಡಿದ್ದರು. ಇನ್ಮುಂದೆ ಯುವತಿ ತಂಟೆಗೆ ಬಾರದಂತೆ ಎಚ್ಚರಿಕೆ ನೀಡಿದ್ದರು. ಜೊತೆಗೆ ಸುರೇಶ್ ನಿಂದ ಮುಚ್ಚಳಿಕೆ ಪತ್ರ ಬರೆಸಿಕೊಂಡಿದ್ದರು.
Double murder in Bangalore park, accused killed by daughter mother. Married man was behind a girl asking her to marry but when she denied for marriage he killed her after which her mother took a cement stone and killed the accused in the park.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 09:25 pm
Mangalore Correspondent
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm