ಬ್ರೇಕಿಂಗ್ ನ್ಯೂಸ್
25-04-24 12:19 pm Bangalore Correspondent ಕ್ರೈಂ
ಬೆಂಗಳೂರು, ಏ.25: ಲೋಕಸಭೆ ಚುನಾವಣೆಗೂ ಮುನ್ನ ರಾಜಧಾನಿ ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯವೊಂದು ನಡೆದಿದ್ದು, 23 ವರ್ಷದ ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ.
ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವತಿಯನ್ನ ಕಿಡ್ನ್ಯಾಪ್ ಮಾಡಿ ನಿರ್ಜನ ಪ್ರದೇಶದಲ್ಲಿ ಐವರು ಕಾಮುಕರು ಅತ್ಯಾಚಾರವೆಸಗಿದ್ದಾರೆ.
23 ವರ್ಷದ ಯುವತಿ ಮೇಲೆ ಎರಗಿ ಅತ್ಯಾಚಾರ ಮಾಡಿ ಕ್ರೂರವಾಗಿ ಹಿಂಸೆ ನೀಡಿದ್ದಾರೆ. ಸದ್ಯ ಸಂತ್ರಸ್ತೆ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಹೈಗ್ರೌಂಡ್ಸ್ ಪೊಲೀಸರು ಐದು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಸಂಬಂಧ ತನಿಖೆಯನ್ನ ನಡೆಸಲಾಗುತ್ತಿದೆ.
6 ವರ್ಷದ ಬಾಲಕಿ ಮೇಲೂ ಅತ್ಯಾಚಾರ ;
ಇನ್ನೊಂದು ಪ್ರಕರಣದಲ್ಲಿ ಕಾಮುಕನೊಬ್ಬ 6 ವರ್ಷದ ಬಾಲಕಿ ಮೇಲೆ ದೌರ್ಜನ್ಯವನ್ನ ನಡೆಸಿದ್ದಾನೆ. ಬೆಂಗಳೂರಿನ ಕೆಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಮೇಡಹಳ್ಳಿಯಲ್ಲಿ ಪೈಶಾಚಿಕ ಕೃತ್ಯ ನಡೆದಿದೆ.
ಪಶ್ಚಿಮ ಬಂಗಾಳ ಮೂಲದ ಮಮಜನ್ ಎಂಬಾತನಿಂದ ಈ ಕೃತ್ಯ ನಡೆದಿದೆ. ಸಂತ್ರಸ್ತ ಬಾಲಕಿ ಕುಟುಂಬ ಹಾಗೂ ಆರೋಪಿ ಒಂದೇ ಏರಿಯಾದಲ್ಲಿ ವಾಸವಾಗಿದ್ದರು. ಬಾಲಕಿ ತಂದೆ ಹಾಲು ತರಲು ಹೊರಗೆ ಹೋಗಿದ್ದರು. ಈ ವೇಳೆ ಬಾಲಕಿ ಮನೆಯಲ್ಲಿ ಒಬ್ಬಂಟಿಯಾಗಿದ್ದಳು. ಯಾರು ಇಲ್ಲದಿರುವುದು ತಿಳಿಯುತ್ತಿದ್ದಂತೆ ದುಷ್ಟ ಮಮಜನ್ ಮನೆಯೊಳಗೆ ನುಗ್ಗಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.
ಪೋಷಕರು ಮನೆಗೆ ವಾಪಸ್ ಬಂದಾಗ ಕಾಮುಕನ ಪೈಶಾಚಿಕ ಕೃತ್ಯದಿಂದ ಅಸ್ವಸ್ಥಗೊಂಡಿದ್ದ ಬಾಲಕಿಯನ್ನು ಕಂಡು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆಗ ಕೃತ್ಯ ಬೆಳಕಿಗೆ ಬಂದಿದೆ. ಕೂಡಲೇ ಸಂತ್ರಸ್ತೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪೋಕ್ಸೋ ಪ್ರಕರಣವನ್ನು ದಾಖಲಿಸಿಕೊಂಡಿರುವ ಕೆ.ಆರ್. ಪುರಂ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.
Ahead of the Lok Sabha elections, a 23-year-old woman was allegedly abducted and gang-raped in bengaluru.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm