ಬ್ರೇಕಿಂಗ್ ನ್ಯೂಸ್
25-04-24 10:18 pm Mangalore Correspondent ಕ್ರೈಂ
ಮಂಗಳೂರು, ಎ.25: ಮಂಗಳೂರಿನಲ್ಲಿ ಷೇರು ಮಾರುಕಟ್ಟೆ ವಹಿವಾಟು ನಡೆಸುತ್ತಿದ್ದು, ಹಲವರಿಂದ ಹಣ ಪಡೆದು ವಂಚಿಸಿದ್ದ ಕೃಷ್ಣಪ್ರಸಾದ್ ಶೆಟ್ಟಿ (42) ಎಂಬ ವ್ಯಕ್ತಿ 2023ರ ನವೆಂಬರ್ ತಿಂಗಳಲ್ಲಿ ನಾಪತ್ತೆಯಾಗಿದ್ದು, ಈವರೆಗೂ ಪತ್ತೆಯಾಗಿಲ್ಲ.
ಕೃಷ್ಣಪ್ರಸಾದ್ ಶೆಟ್ಟಿ ಮೂಲತಃ ಹೆಬ್ರಿ ನಿವಾಸಿಯಾಗಿದ್ದು, ಹಲವು ವರ್ಷಗಳಿಂದ ಮಂಗಳೂರಿನಲ್ಲಿ ಕುಟುಂಬದ ಜೊತೆಗೆ ನೆಲೆಸಿದ್ದರು. ಇದೇ ವೇಳೆ, ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಡಬಲ್ ಆಗುತ್ತದೆಯೆಂದು ಸ್ನೇಹಿತರು, ಸಂಬಂಧಿಕರನ್ನು ನಂಬಿಸಿ ಹಣ ಪಡೆದಿದ್ದರು. ಎರಡು ಕೋಟಿ ವರೆಗೂ ಹಣ ಪಡೆದು ವಂಚಿಸಿದ್ದಾರೆಂದು ಹಣ ಕಳಕೊಂಡವರು ಮಂಗಳೂರಿನ ಸೈಬರ್ ಠಾಣೆಗೆ ದೂರು ನೀಡಿದ್ದರು.
ಇದರ ಬೆನ್ನಲ್ಲೇ ನವೆಂಬರ್ 16ರಂದು ಪತ್ನಿಯ ಜೊತೆಗೆ ಕಾರಿನಲ್ಲಿ ಬಂಟ್ಸ್ ಹಾಸ್ಟೆಲ್ ಬಳಿಯ ಏಕ್ಸಿಸ್ ಬ್ಯಾಂಕಿಗೆ ಬಂದಿದ್ದರು. ಪತ್ನಿಯನ್ನು ಕಾರಿನಲ್ಲಿ ಕುಳ್ಳಿರಿಸಿ, ಬ್ಯಾಂಕಿಗೆ ಹೋಗಿ ಬರುತ್ತೇನೆಂದು ಹೋದವರು ಮರಳಿರಲಿಲ್ಲ. ಮರುದಿನ ಸ್ನೇಹಿತರಿಗೆ ಬೆಂಗಳೂರಿಗೆ ತೆರಳಿದ್ದೇನೆ ಎಂದು ಹೇಳಿದ್ದರು. ಪತಿ ಬರದೇ ಇರುವುದರಿಂದ ಪತ್ನಿ ಮಂಗಳೂರಿನ ಬಂದರು ಠಾಣೆಗೆ ನಾಪತ್ತೆ ದೂರು ನೀಡಿದ್ದರು.
ಇದಲ್ಲದೆ, ಸೈಬರ್ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದ್ದರಿಂದ ಹಣ ವಂಚಿತರು ಪೊಲೀಸರಿಗೆ ಒತ್ತಡ ಹೇರಿ ತನಿಖೆಗೆ ಆಗ್ರಹ ಮಾಡಿದ್ದರು. ಪೊಲೀಸರು ಕೃಷ್ಣಪ್ರಸಾದ್ ಶೆಟ್ಟಿಯ ಬಗ್ಗೆ ಹುಡುಕಾಟವನ್ನೂ ನಡೆಸಿದ್ದರು. ಆರೋಪಿ ಕೃಷ್ಣಪ್ರಸಾದ್ ತಲೆಮರೆಸಿಕೊಂಡಿದ್ದಾನೆಯೇ, ಏನಾದ್ರೂ ಮಾಡಿಕೊಂಡಿದ್ದಾನೆಯೇ ತಿಳಿದಿಲ್ಲ. ಈ ವ್ಯಕ್ತಿ ಎಲ್ಲಿಯಾದರೂ ಕಂಡುಬಂದಲ್ಲಿ ಮಂಗಳೂರು ಪೊಲೀಸರಿಗೆ ತಿಳಿಸುವಂತೆ ಕೋರಿದ್ದಾರೆ.
Mangalore Fraud of crores in the name of share market, Krishnaprasad Shetty native of Hebri goes missing since six months. Police have requested to call them if they find him anywhere.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm