ಬ್ರೇಕಿಂಗ್ ನ್ಯೂಸ್
25-04-24 10:18 pm Mangalore Correspondent ಕ್ರೈಂ
ಮಂಗಳೂರು, ಎ.25: ಮಂಗಳೂರಿನಲ್ಲಿ ಷೇರು ಮಾರುಕಟ್ಟೆ ವಹಿವಾಟು ನಡೆಸುತ್ತಿದ್ದು, ಹಲವರಿಂದ ಹಣ ಪಡೆದು ವಂಚಿಸಿದ್ದ ಕೃಷ್ಣಪ್ರಸಾದ್ ಶೆಟ್ಟಿ (42) ಎಂಬ ವ್ಯಕ್ತಿ 2023ರ ನವೆಂಬರ್ ತಿಂಗಳಲ್ಲಿ ನಾಪತ್ತೆಯಾಗಿದ್ದು, ಈವರೆಗೂ ಪತ್ತೆಯಾಗಿಲ್ಲ.
ಕೃಷ್ಣಪ್ರಸಾದ್ ಶೆಟ್ಟಿ ಮೂಲತಃ ಹೆಬ್ರಿ ನಿವಾಸಿಯಾಗಿದ್ದು, ಹಲವು ವರ್ಷಗಳಿಂದ ಮಂಗಳೂರಿನಲ್ಲಿ ಕುಟುಂಬದ ಜೊತೆಗೆ ನೆಲೆಸಿದ್ದರು. ಇದೇ ವೇಳೆ, ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಡಬಲ್ ಆಗುತ್ತದೆಯೆಂದು ಸ್ನೇಹಿತರು, ಸಂಬಂಧಿಕರನ್ನು ನಂಬಿಸಿ ಹಣ ಪಡೆದಿದ್ದರು. ಎರಡು ಕೋಟಿ ವರೆಗೂ ಹಣ ಪಡೆದು ವಂಚಿಸಿದ್ದಾರೆಂದು ಹಣ ಕಳಕೊಂಡವರು ಮಂಗಳೂರಿನ ಸೈಬರ್ ಠಾಣೆಗೆ ದೂರು ನೀಡಿದ್ದರು.
ಇದರ ಬೆನ್ನಲ್ಲೇ ನವೆಂಬರ್ 16ರಂದು ಪತ್ನಿಯ ಜೊತೆಗೆ ಕಾರಿನಲ್ಲಿ ಬಂಟ್ಸ್ ಹಾಸ್ಟೆಲ್ ಬಳಿಯ ಏಕ್ಸಿಸ್ ಬ್ಯಾಂಕಿಗೆ ಬಂದಿದ್ದರು. ಪತ್ನಿಯನ್ನು ಕಾರಿನಲ್ಲಿ ಕುಳ್ಳಿರಿಸಿ, ಬ್ಯಾಂಕಿಗೆ ಹೋಗಿ ಬರುತ್ತೇನೆಂದು ಹೋದವರು ಮರಳಿರಲಿಲ್ಲ. ಮರುದಿನ ಸ್ನೇಹಿತರಿಗೆ ಬೆಂಗಳೂರಿಗೆ ತೆರಳಿದ್ದೇನೆ ಎಂದು ಹೇಳಿದ್ದರು. ಪತಿ ಬರದೇ ಇರುವುದರಿಂದ ಪತ್ನಿ ಮಂಗಳೂರಿನ ಬಂದರು ಠಾಣೆಗೆ ನಾಪತ್ತೆ ದೂರು ನೀಡಿದ್ದರು.
ಇದಲ್ಲದೆ, ಸೈಬರ್ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದ್ದರಿಂದ ಹಣ ವಂಚಿತರು ಪೊಲೀಸರಿಗೆ ಒತ್ತಡ ಹೇರಿ ತನಿಖೆಗೆ ಆಗ್ರಹ ಮಾಡಿದ್ದರು. ಪೊಲೀಸರು ಕೃಷ್ಣಪ್ರಸಾದ್ ಶೆಟ್ಟಿಯ ಬಗ್ಗೆ ಹುಡುಕಾಟವನ್ನೂ ನಡೆಸಿದ್ದರು. ಆರೋಪಿ ಕೃಷ್ಣಪ್ರಸಾದ್ ತಲೆಮರೆಸಿಕೊಂಡಿದ್ದಾನೆಯೇ, ಏನಾದ್ರೂ ಮಾಡಿಕೊಂಡಿದ್ದಾನೆಯೇ ತಿಳಿದಿಲ್ಲ. ಈ ವ್ಯಕ್ತಿ ಎಲ್ಲಿಯಾದರೂ ಕಂಡುಬಂದಲ್ಲಿ ಮಂಗಳೂರು ಪೊಲೀಸರಿಗೆ ತಿಳಿಸುವಂತೆ ಕೋರಿದ್ದಾರೆ.
Mangalore Fraud of crores in the name of share market, Krishnaprasad Shetty native of Hebri goes missing since six months. Police have requested to call them if they find him anywhere.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm