ಬ್ರೇಕಿಂಗ್ ನ್ಯೂಸ್
25-04-24 10:18 pm Mangalore Correspondent ಕ್ರೈಂ
ಮಂಗಳೂರು, ಎ.25: ಮಂಗಳೂರಿನಲ್ಲಿ ಷೇರು ಮಾರುಕಟ್ಟೆ ವಹಿವಾಟು ನಡೆಸುತ್ತಿದ್ದು, ಹಲವರಿಂದ ಹಣ ಪಡೆದು ವಂಚಿಸಿದ್ದ ಕೃಷ್ಣಪ್ರಸಾದ್ ಶೆಟ್ಟಿ (42) ಎಂಬ ವ್ಯಕ್ತಿ 2023ರ ನವೆಂಬರ್ ತಿಂಗಳಲ್ಲಿ ನಾಪತ್ತೆಯಾಗಿದ್ದು, ಈವರೆಗೂ ಪತ್ತೆಯಾಗಿಲ್ಲ.
ಕೃಷ್ಣಪ್ರಸಾದ್ ಶೆಟ್ಟಿ ಮೂಲತಃ ಹೆಬ್ರಿ ನಿವಾಸಿಯಾಗಿದ್ದು, ಹಲವು ವರ್ಷಗಳಿಂದ ಮಂಗಳೂರಿನಲ್ಲಿ ಕುಟುಂಬದ ಜೊತೆಗೆ ನೆಲೆಸಿದ್ದರು. ಇದೇ ವೇಳೆ, ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಡಬಲ್ ಆಗುತ್ತದೆಯೆಂದು ಸ್ನೇಹಿತರು, ಸಂಬಂಧಿಕರನ್ನು ನಂಬಿಸಿ ಹಣ ಪಡೆದಿದ್ದರು. ಎರಡು ಕೋಟಿ ವರೆಗೂ ಹಣ ಪಡೆದು ವಂಚಿಸಿದ್ದಾರೆಂದು ಹಣ ಕಳಕೊಂಡವರು ಮಂಗಳೂರಿನ ಸೈಬರ್ ಠಾಣೆಗೆ ದೂರು ನೀಡಿದ್ದರು.
ಇದರ ಬೆನ್ನಲ್ಲೇ ನವೆಂಬರ್ 16ರಂದು ಪತ್ನಿಯ ಜೊತೆಗೆ ಕಾರಿನಲ್ಲಿ ಬಂಟ್ಸ್ ಹಾಸ್ಟೆಲ್ ಬಳಿಯ ಏಕ್ಸಿಸ್ ಬ್ಯಾಂಕಿಗೆ ಬಂದಿದ್ದರು. ಪತ್ನಿಯನ್ನು ಕಾರಿನಲ್ಲಿ ಕುಳ್ಳಿರಿಸಿ, ಬ್ಯಾಂಕಿಗೆ ಹೋಗಿ ಬರುತ್ತೇನೆಂದು ಹೋದವರು ಮರಳಿರಲಿಲ್ಲ. ಮರುದಿನ ಸ್ನೇಹಿತರಿಗೆ ಬೆಂಗಳೂರಿಗೆ ತೆರಳಿದ್ದೇನೆ ಎಂದು ಹೇಳಿದ್ದರು. ಪತಿ ಬರದೇ ಇರುವುದರಿಂದ ಪತ್ನಿ ಮಂಗಳೂರಿನ ಬಂದರು ಠಾಣೆಗೆ ನಾಪತ್ತೆ ದೂರು ನೀಡಿದ್ದರು.
ಇದಲ್ಲದೆ, ಸೈಬರ್ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದ್ದರಿಂದ ಹಣ ವಂಚಿತರು ಪೊಲೀಸರಿಗೆ ಒತ್ತಡ ಹೇರಿ ತನಿಖೆಗೆ ಆಗ್ರಹ ಮಾಡಿದ್ದರು. ಪೊಲೀಸರು ಕೃಷ್ಣಪ್ರಸಾದ್ ಶೆಟ್ಟಿಯ ಬಗ್ಗೆ ಹುಡುಕಾಟವನ್ನೂ ನಡೆಸಿದ್ದರು. ಆರೋಪಿ ಕೃಷ್ಣಪ್ರಸಾದ್ ತಲೆಮರೆಸಿಕೊಂಡಿದ್ದಾನೆಯೇ, ಏನಾದ್ರೂ ಮಾಡಿಕೊಂಡಿದ್ದಾನೆಯೇ ತಿಳಿದಿಲ್ಲ. ಈ ವ್ಯಕ್ತಿ ಎಲ್ಲಿಯಾದರೂ ಕಂಡುಬಂದಲ್ಲಿ ಮಂಗಳೂರು ಪೊಲೀಸರಿಗೆ ತಿಳಿಸುವಂತೆ ಕೋರಿದ್ದಾರೆ.
Mangalore Fraud of crores in the name of share market, Krishnaprasad Shetty native of Hebri goes missing since six months. Police have requested to call them if they find him anywhere.
18-07-25 08:01 pm
HK News Desk
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
Dharmasthala Case, SIT, CM Siddaramaiah: ಧರ್ಮ...
18-07-25 04:48 pm
Mangalore South ACP Vijayakranti: ಮಂಗಳೂರು ದಕ್...
18-07-25 03:38 pm
Minister Dinesh Gundu Rao, Dharmasthala: ಧರ್ಮ...
17-07-25 07:45 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 03:19 pm
Mangalore Correspondent
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm