ಬ್ರೇಕಿಂಗ್ ನ್ಯೂಸ್
25-04-24 10:18 pm Mangalore Correspondent ಕ್ರೈಂ
ಮಂಗಳೂರು, ಎ.25: ಮಂಗಳೂರಿನಲ್ಲಿ ಷೇರು ಮಾರುಕಟ್ಟೆ ವಹಿವಾಟು ನಡೆಸುತ್ತಿದ್ದು, ಹಲವರಿಂದ ಹಣ ಪಡೆದು ವಂಚಿಸಿದ್ದ ಕೃಷ್ಣಪ್ರಸಾದ್ ಶೆಟ್ಟಿ (42) ಎಂಬ ವ್ಯಕ್ತಿ 2023ರ ನವೆಂಬರ್ ತಿಂಗಳಲ್ಲಿ ನಾಪತ್ತೆಯಾಗಿದ್ದು, ಈವರೆಗೂ ಪತ್ತೆಯಾಗಿಲ್ಲ.
ಕೃಷ್ಣಪ್ರಸಾದ್ ಶೆಟ್ಟಿ ಮೂಲತಃ ಹೆಬ್ರಿ ನಿವಾಸಿಯಾಗಿದ್ದು, ಹಲವು ವರ್ಷಗಳಿಂದ ಮಂಗಳೂರಿನಲ್ಲಿ ಕುಟುಂಬದ ಜೊತೆಗೆ ನೆಲೆಸಿದ್ದರು. ಇದೇ ವೇಳೆ, ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಡಬಲ್ ಆಗುತ್ತದೆಯೆಂದು ಸ್ನೇಹಿತರು, ಸಂಬಂಧಿಕರನ್ನು ನಂಬಿಸಿ ಹಣ ಪಡೆದಿದ್ದರು. ಎರಡು ಕೋಟಿ ವರೆಗೂ ಹಣ ಪಡೆದು ವಂಚಿಸಿದ್ದಾರೆಂದು ಹಣ ಕಳಕೊಂಡವರು ಮಂಗಳೂರಿನ ಸೈಬರ್ ಠಾಣೆಗೆ ದೂರು ನೀಡಿದ್ದರು.
ಇದರ ಬೆನ್ನಲ್ಲೇ ನವೆಂಬರ್ 16ರಂದು ಪತ್ನಿಯ ಜೊತೆಗೆ ಕಾರಿನಲ್ಲಿ ಬಂಟ್ಸ್ ಹಾಸ್ಟೆಲ್ ಬಳಿಯ ಏಕ್ಸಿಸ್ ಬ್ಯಾಂಕಿಗೆ ಬಂದಿದ್ದರು. ಪತ್ನಿಯನ್ನು ಕಾರಿನಲ್ಲಿ ಕುಳ್ಳಿರಿಸಿ, ಬ್ಯಾಂಕಿಗೆ ಹೋಗಿ ಬರುತ್ತೇನೆಂದು ಹೋದವರು ಮರಳಿರಲಿಲ್ಲ. ಮರುದಿನ ಸ್ನೇಹಿತರಿಗೆ ಬೆಂಗಳೂರಿಗೆ ತೆರಳಿದ್ದೇನೆ ಎಂದು ಹೇಳಿದ್ದರು. ಪತಿ ಬರದೇ ಇರುವುದರಿಂದ ಪತ್ನಿ ಮಂಗಳೂರಿನ ಬಂದರು ಠಾಣೆಗೆ ನಾಪತ್ತೆ ದೂರು ನೀಡಿದ್ದರು.
ಇದಲ್ಲದೆ, ಸೈಬರ್ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದ್ದರಿಂದ ಹಣ ವಂಚಿತರು ಪೊಲೀಸರಿಗೆ ಒತ್ತಡ ಹೇರಿ ತನಿಖೆಗೆ ಆಗ್ರಹ ಮಾಡಿದ್ದರು. ಪೊಲೀಸರು ಕೃಷ್ಣಪ್ರಸಾದ್ ಶೆಟ್ಟಿಯ ಬಗ್ಗೆ ಹುಡುಕಾಟವನ್ನೂ ನಡೆಸಿದ್ದರು. ಆರೋಪಿ ಕೃಷ್ಣಪ್ರಸಾದ್ ತಲೆಮರೆಸಿಕೊಂಡಿದ್ದಾನೆಯೇ, ಏನಾದ್ರೂ ಮಾಡಿಕೊಂಡಿದ್ದಾನೆಯೇ ತಿಳಿದಿಲ್ಲ. ಈ ವ್ಯಕ್ತಿ ಎಲ್ಲಿಯಾದರೂ ಕಂಡುಬಂದಲ್ಲಿ ಮಂಗಳೂರು ಪೊಲೀಸರಿಗೆ ತಿಳಿಸುವಂತೆ ಕೋರಿದ್ದಾರೆ.
Mangalore Fraud of crores in the name of share market, Krishnaprasad Shetty native of Hebri goes missing since six months. Police have requested to call them if they find him anywhere.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
24-01-26 11:18 pm
Mangaluru Staffer
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm