ಬ್ರೇಕಿಂಗ್ ನ್ಯೂಸ್
25-04-24 10:18 pm Mangalore Correspondent ಕ್ರೈಂ
ಮಂಗಳೂರು, ಎ.25: ಮಂಗಳೂರಿನಲ್ಲಿ ಷೇರು ಮಾರುಕಟ್ಟೆ ವಹಿವಾಟು ನಡೆಸುತ್ತಿದ್ದು, ಹಲವರಿಂದ ಹಣ ಪಡೆದು ವಂಚಿಸಿದ್ದ ಕೃಷ್ಣಪ್ರಸಾದ್ ಶೆಟ್ಟಿ (42) ಎಂಬ ವ್ಯಕ್ತಿ 2023ರ ನವೆಂಬರ್ ತಿಂಗಳಲ್ಲಿ ನಾಪತ್ತೆಯಾಗಿದ್ದು, ಈವರೆಗೂ ಪತ್ತೆಯಾಗಿಲ್ಲ.
ಕೃಷ್ಣಪ್ರಸಾದ್ ಶೆಟ್ಟಿ ಮೂಲತಃ ಹೆಬ್ರಿ ನಿವಾಸಿಯಾಗಿದ್ದು, ಹಲವು ವರ್ಷಗಳಿಂದ ಮಂಗಳೂರಿನಲ್ಲಿ ಕುಟುಂಬದ ಜೊತೆಗೆ ನೆಲೆಸಿದ್ದರು. ಇದೇ ವೇಳೆ, ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಡಬಲ್ ಆಗುತ್ತದೆಯೆಂದು ಸ್ನೇಹಿತರು, ಸಂಬಂಧಿಕರನ್ನು ನಂಬಿಸಿ ಹಣ ಪಡೆದಿದ್ದರು. ಎರಡು ಕೋಟಿ ವರೆಗೂ ಹಣ ಪಡೆದು ವಂಚಿಸಿದ್ದಾರೆಂದು ಹಣ ಕಳಕೊಂಡವರು ಮಂಗಳೂರಿನ ಸೈಬರ್ ಠಾಣೆಗೆ ದೂರು ನೀಡಿದ್ದರು.
ಇದರ ಬೆನ್ನಲ್ಲೇ ನವೆಂಬರ್ 16ರಂದು ಪತ್ನಿಯ ಜೊತೆಗೆ ಕಾರಿನಲ್ಲಿ ಬಂಟ್ಸ್ ಹಾಸ್ಟೆಲ್ ಬಳಿಯ ಏಕ್ಸಿಸ್ ಬ್ಯಾಂಕಿಗೆ ಬಂದಿದ್ದರು. ಪತ್ನಿಯನ್ನು ಕಾರಿನಲ್ಲಿ ಕುಳ್ಳಿರಿಸಿ, ಬ್ಯಾಂಕಿಗೆ ಹೋಗಿ ಬರುತ್ತೇನೆಂದು ಹೋದವರು ಮರಳಿರಲಿಲ್ಲ. ಮರುದಿನ ಸ್ನೇಹಿತರಿಗೆ ಬೆಂಗಳೂರಿಗೆ ತೆರಳಿದ್ದೇನೆ ಎಂದು ಹೇಳಿದ್ದರು. ಪತಿ ಬರದೇ ಇರುವುದರಿಂದ ಪತ್ನಿ ಮಂಗಳೂರಿನ ಬಂದರು ಠಾಣೆಗೆ ನಾಪತ್ತೆ ದೂರು ನೀಡಿದ್ದರು.
ಇದಲ್ಲದೆ, ಸೈಬರ್ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದ್ದರಿಂದ ಹಣ ವಂಚಿತರು ಪೊಲೀಸರಿಗೆ ಒತ್ತಡ ಹೇರಿ ತನಿಖೆಗೆ ಆಗ್ರಹ ಮಾಡಿದ್ದರು. ಪೊಲೀಸರು ಕೃಷ್ಣಪ್ರಸಾದ್ ಶೆಟ್ಟಿಯ ಬಗ್ಗೆ ಹುಡುಕಾಟವನ್ನೂ ನಡೆಸಿದ್ದರು. ಆರೋಪಿ ಕೃಷ್ಣಪ್ರಸಾದ್ ತಲೆಮರೆಸಿಕೊಂಡಿದ್ದಾನೆಯೇ, ಏನಾದ್ರೂ ಮಾಡಿಕೊಂಡಿದ್ದಾನೆಯೇ ತಿಳಿದಿಲ್ಲ. ಈ ವ್ಯಕ್ತಿ ಎಲ್ಲಿಯಾದರೂ ಕಂಡುಬಂದಲ್ಲಿ ಮಂಗಳೂರು ಪೊಲೀಸರಿಗೆ ತಿಳಿಸುವಂತೆ ಕೋರಿದ್ದಾರೆ.
Mangalore Fraud of crores in the name of share market, Krishnaprasad Shetty native of Hebri goes missing since six months. Police have requested to call them if they find him anywhere.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm