ಬ್ರೇಕಿಂಗ್ ನ್ಯೂಸ್
27-04-24 01:37 pm Bangalore Correspondent ಕ್ರೈಂ
ಬೆಂಗಳೂರು, ಏ 27: ಡೈವೋರ್ಸ್ ಕೊಡು ಇಲ್ಲದಿದ್ರೆ ನಮ್ಮ ಖಾಸಗಿ ಫೋಟೋ ಹಾಗೂ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಪತ್ನಿಗೆ ಬೆದರಿಸಿದ್ದ ಪತಿಯ ವಿರುದ್ಧ ಪೂರ್ವ ವಿಭಾಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ
ಹೆಣ್ಣೂರಿನ ನಿವಾಸಿ 43 ವರ್ಷದ ಸಂತ್ರಸ್ತೆ ಕೊಟ್ಟ ದೂರಿನ ಆಧಾರದ ಮೇಲೆ ಆಕೆಯ ಪತಿ ರಘುಪತಿ (49) ಹಾಗೂ ಆತನ ಲವರ್ ವಿರುದ್ಧ ಕೇಸ್ ದಾಖಲಾಗಿದೆ.
ಸಂತ್ರಸ್ತೆ ಹಾಗೂ ಆಕೆಯ ಪತಿ ರಘುಪತಿ ಖಾಸಗಿ ಕಂಪನಿ ಉದ್ಯೋಗಿಗಳಾಗಿದ್ದಾರೆ. 2007ರಲ್ಲಿ ಹಿರಿಯರ ಸಮ್ಮುಖದಲ್ಲಿ ಇಬ್ಬರೂ ಮದುವೆಯಾಗಿ ಹೆಣ್ಣೂರಿನಲ್ಲಿ ವಾಸಿಸುತ್ತಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ವಿವಾಹವಾದ ಆರಂಭದಲ್ಲಿ ದಂಪತಿ ಚೆನ್ನಾಗಿದ್ದರು. ನಂತರ ಪತಿ ಡ್ರಿಂಕ್ಸ್ ಮಾಡಿ ಪತ್ನಿಗೆ ಬೆದರಿಸಿ ದೈಹಿಕ, ಮಾನಸಿಕ ಹಿಂಸೆ ನೀಡುತ್ತಿದ್ದ. ಈ ನಡುವೆ 2011ರಲ್ಲಿ ಸಂತ್ರಸ್ತೆ ಕೆಲಸದ ನಿಮಿತ್ತ ಲಂಡನ್ಗೆ ತೆರಳಿದಾಗ ದುಡ್ಡಿಗೆ ಬೇಡಿಕೆಯಿಟ್ಟಿದ್ದ. ದುಡ್ಡು ಕೊಡದಿದ್ದರೆ ತಮ್ಮಿಬ್ಬರ ಖಾಸಗಿ ದೃಶ್ಯಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಸಿದ್ದ. 2021ರಿಂದ ಮಹಿಳೆಯೊಬ್ಬರ ಜೊತೆಗೆ ರಘುಪತಿ ಅನೈತಿಕ ಸಂಬಂಧ ಹೊಂದಿದ್ದ.
ಇತ್ತೀಚೆಗೆ ಈ ವಿಚಾರ ಸಂತ್ರಸ್ತೆಯ ಗಮನಕ್ಕೆ ಬಂದು ಪತಿಯನ್ನು ಈ ಬಗ್ಗೆ ಪ್ರಶ್ನಿಸಿದ್ದಳು. “ನೀನು ದಪ್ಪವಾಗಿದ್ದಿಯಾ, ಹೀಗಾಗಿ ನನಗೆ ಅವಳೇ ಬೇಕು ಎಂದು ಪಟ್ಟು ಹಿಡಿದಿದ್ದ . ಡೈವೋರ್ಸ್ ನೀಡದಿದ್ದರೆ ತಮ್ಮ ನಡುವಿನ ಖಾಸಗಿ ದೃಶ್ಯಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುವುದಾಗಿ’ ಪತಿ ಮತ್ತೆ ಬೆದರಿಸುತ್ತಿದ್ದಾನೆ. ಕೆಲ ದಿನಗಳ ಹಿಂದೆ ನಾನು ಕೆಲಸಕ್ಕೆ ಹೊಗುತ್ತಿದ್ದಾಗ ಅಡ್ಡಗಟ್ಟಿ ವಿಚ್ಛೇದನ ಡೈವೋರ್ಸ್ ಪೀಡಿಸಿದ್ದ. ಇಲ್ಲದಿದ್ದರೆ ನಿನ್ನ ತಲೆಯನ್ನು ಕಡೆದು
ಕುಕ್ಕರ್ನಲ್ಲಿ ಬೇಯಿಸ್ತೀನಿ ಎಂದು ಧಮ್ಕಿ ಹಾಕಿದ್ದಾನೆ . ಮನೆಯ ಗ್ಯಾಸ್ ಸಿಲಿಂಡರ್ ಅನ್ನು ಬ್ಲಾಸ್ಟ್ ಮಾಡಿ ಸಾಯಿಸುವುದಾಗಿ ರಘುಪತಿ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಸಂತ್ರಸ್ತೆ ಹೆಂಡತಿ ಉಲ್ಲೇಖೀಸಿದ್ದಾಳೆ.
Bangalore Woman files complaint against husband for threating her to give divorce or killing her by chopping her head and making it fry in the cooker or sharing the intimate videos or pictures on social media.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm