ಬ್ರೇಕಿಂಗ್ ನ್ಯೂಸ್
29-04-24 11:50 am Bangalore Correspondent ಕ್ರೈಂ
ಬೆಂಗಳೂರು, ಎ.28: ಫ್ಲ್ಯಾಟ್ ಮೇಲೆ ಲಕ್ಷಾಂತರ ರೂ. ಸಾಲ ಮಾಡಿದ್ದಲ್ಲದೆ, ಮರುಪಾವತಿ ಮಾಡದೆ ವಂಚಿಸಿದ್ದ ಮಾಲೀಕ, ಅದೇ ಫ್ಲ್ಯಾಟನ್ನು ಮತ್ತೊಬ್ಬರಿಗೆ 40 ಲಕ್ಷ ರೂ. ಬೆಲೆಗೆ ಲೀಸಿಗೆ ನೀಡಿ ಮತ್ತೊಂದು ವಂಚನೆ ಎಸಗಿದ ಬಗ್ಗೆ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಂಚನೆಗೀಡಾದ ಲ್ಯಾಂಗ್ಫೋರ್ಡ್ ರಸ್ತೆಯ ರೋಹನ್ ಎಂಬವರು ವಂಚನೆಗೆ ಸಂಬಂಧಿಸಿ ನ್ಯಾಯಾಲಯದಲ್ಲಿ ಖಾಸಗಿ ಮೊಕದ್ದಮೆ ಹೂಡಿದ್ದರು. ಕೋರ್ಟ್ ನಿರ್ದೇಶನದಂತೆ, ಫ್ಲ್ಯಾಟ್ ಮಾಲೀಕ ಆರೋಪಿ ಮೊಹಮ್ಮದ್ ಅಲೀಮುದ್ದೀನ್ (32) ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಹೈದರಾಬಾದ್ ಮೂಲದ ಉದ್ಯಮಿಯಾಗಿರುವ ಆರೋಪಿ ಅಲೀಮುದ್ದೀನ್, ಲ್ಯಾಂಗ್ಫೋರ್ಡ್ ರಸ್ತೆಯ ಬೈಡ್ ಸ್ಟ್ರೀಟ್ನಲ್ಲಿ ವಸತಿ ಸಮುಚ್ಚಯದಲ್ಲಿ ಮನೆ ಹೊಂದಿದ್ದರು. ಬಳಿಕ ಅದೇ ಫ್ಲ್ಯಾಟ್ ಅನ್ನು ಎಸ್ ಬಿಐ ಬ್ಯಾಂಕಿಗೆ ಅಡವಿಟ್ಟು ಸಾಲ ಪಡೆದಿದ್ದರು. ಸಾಲದ ಕಂತನ್ನು ಸರಿಯಾಗಿ ಪಾವತಿ ಮಾಡುತ್ತಿರಲಿಲ್ಲ. ಇದರ ನಡುವಲ್ಲೇ ಫ್ಲ್ಯಾಟ್ ಅನ್ನು ರೋಹನ್ ಹಾಗೂ ಅವರ ಪತ್ನಿ ಹೆಸರಿಗೆ ಭೋಗ್ಯಕ್ಕೆ ನೀಡಿದ್ದರು. ಅವರಿಂದ ₹40 ಲಕ್ಷ ಪಡೆದಿದ್ದು ಈಗ ಬ್ಯಾಂಕ್ ನೋಟಿಸ್ ಬರುತ್ತಿದ್ದಂತೆ ಫ್ಲಾಟಿನ ನಿಜ ವಿಚಾರ ಗೊತ್ತಾಗಿದೆ.
ಭೋಗ್ಯದ ಹಣ ಪಡೆದಿರುವ ಅಲೀಮುದ್ದೀನ್, ಬೆಂಗಳೂರು ನಗರ ಬಿಟ್ಟು ಪರಾರಿಯಾಗಿದ್ದಾರೆ. ಅವರು ಎಲ್ಲಿದ್ದಾರೆ ಎಂಬ ಮಾಹಿತಿ ಇಲ್ಲ. ಬ್ಯಾಂಕ್ ಅಧಿಕಾರಿಗಳು, ಫ್ಲ್ಯಾಟ್ ಜಪ್ತಿ ಮಾಡಲು ಹಲವು ಬಾರಿ ನೋಟಿಸ್ ನೀಡಿದ್ದು ಅದಕ್ಕೆ ಅಲೀಮುದ್ದೀನ್ ಉತ್ತರ ನೀಡಿರಲಿಲ್ಲ. ಹೀಗಾಗಿ, ಆಸ್ತಿ ಜಪ್ತಿ ಮಾಡಲು ಬ್ಯಾಂಕ್ ಅಧಿಕಾರಿಗಳು ನ್ಯಾಯಾಲಯದಿಂದ ಆದೇಶ ಪಡೆದಿರುವುದಾಗಿ ಗೊತ್ತಾಗಿದೆ.
ಮನೆಗೆ ಲಕ್ಷಾಂತರ ರೂ. ಸಾಲ ಬಾಕಿ ಇರುವ ಮಾಹಿತಿಯನ್ನು ಮುಚ್ಚಿಟ್ಟಿದ್ದ ಅಲೀಮುದ್ದೀನ್, ಭೋಗ್ಯದ ಹೆಸರಿನಲ್ಲಿ ಮತ್ತೆ ವಂಚಿಸಿರುವುದಾಗಿ ದೂರುದಾರರು ಆರೋಪಿಸಿದ್ದಾರೆ.
Businessman cheats couple by giving house on lease after cheating Bank of 40 lakhs loan in Bangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm