ಬ್ರೇಕಿಂಗ್ ನ್ಯೂಸ್
01-05-24 10:18 pm Mangaluru Correspondent ಕ್ರೈಂ
ಮಂಗಳೂರು, ಮೇ 1: ಮಂಗಳೂರು ನಗರದ ಕೋಟೆಕಾರ್ ಬೀರಿ ಬಳಿಯ ಮನೆಯೊಂದರಲ್ಲಿ ಬೃಹತ್ ಪ್ರಮಾಣದಲ್ಲಿ ಅಕ್ರಮವಾಗಿ MDMA ಮಾದಕ ವಸ್ತುವನ್ನಿರಿಸಿ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಆಧರಿಸಿ ದಾಳಿ ನಡೆಸಿದ ಸಿಸಿಬಿ ಪೊಲೀಸರು ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.
ಉಳ್ಳಾಲ ಬಸ್ತಿಪಡ್ಪು ನಿವಾಸಿ ಮೊಹಮ್ಮದ್ ಇಶಾನ್ (35), ಉಳ್ಳಾಲ ನಿವಾಸಿ ಜಾಫರ್ ಸಾಧಿಕ್ (35) ಬಂಧಿತರು. ಆರೋಪಿಗಳು ಬೆಂಗಳೂರಿನಿಂದ ಮಾದಕ ವಸ್ತುಗಳನ್ನು ತಂದು ಮಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡಿ ಹಣ ಸಂಪಾದನೆ ಮಾಡುತ್ತಿದ್ದರು. 9,00,000/- ರೂ. ಮೌಲ್ಯದ 407 ಗ್ರಾಂ ನಿಷೇಧಿತ MDMA ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್ ಗಳು ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಂಡಿದ್ದಾರೆ.

407 ಗ್ರಾಂ MDMA ಮಾದಕ ವಸ್ತು-(9,00,000/-), ಕಪ್ಪು ಬಣ್ಣದ ಟೊಯೋಟಾ ಕಂಪೆನಿಯ ಕ್ಯಾಂಬ್ರಿ ಕಾರು-1 (6,00,000/-), ನೀಲಿ ಬಣ್ಣದ TECNO ಕಂಪೆನಿಯ ಮೊಬೈಲ್ ಫೋನ್ -1 (10,000/-), ಬಿಳಿ ಬಣ್ಣದ REALME ಕಂಪೆನಿಯ REALME 11PRO ಮೊಬೈಲ್ ಫೋನ್ -1 (30,000/-), ನೀಲಿ ಬಣ್ಣದ I PHONE ಕಂಪೆನಿಯ I PHONE 13 pro ಮೊಬೈಲ್ ಫೋನ್ -1 (40,000/-), ಕಡು ನೀಲಿ ಬಣ್ಣದ NOKIA ಕಂಪೆನಿಯ ಮೊಬೈಲ್ ಫೋನ್ -1 (1,000/-), ಡಿಜಿಟಲ್ ತೂಕ ಮಾಪನ -1, ನಗದು ರೂ. ಹಣ 32,800/- ವಶಕ್ಕೆ ಪಡೆಯಲಾಗಿದೆ. ಸೊತ್ತುಗಳ ಒಟ್ಟು ಮೌಲ್ಯ- 16,13,800/- ರೂ. ಆಗಬಹುದು.
ಈ ಹಿಂದೆ ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ, ಹಲ್ಲೆ, ಕೊಲೆಯತ್ನ ಹಾಗೂ ಕೊಡಗು ಜಿಲ್ಲೆಯ ಕುಶಾಲನಗರ ಠಾಣೆಯಲ್ಲಿ ದರೋಡೆ ಪ್ರಕರಣ ಸೇರಿದಂತೆ ಒಟ್ಟು 9 ಪ್ರಕರಣಗಳು ಇವರ ಮೇಲೆ ದಾಖಲಾಗಿರುತ್ತವೆ. ಮೊಹಮ್ಮದ್ ಇಶಾನ್ ಮೇಲೆ ಈ ಹಿಂದೆ ಮಂಗಳೂರು ನಗರದ ಕೊಣಾಜೆ ಪೊಲೀಸ್ ಠಾಣೆಯಲ್ಲಿ MDMA ಮಾರಾಟ ಪ್ರಕರಣ ದಾಖಲಾಗಿರುತ್ತದೆ.
Acting on information received, the CCB police raided a house near Kotekar Beeri on May 1, leading to the arrest of two individuals who were allegedly selling large quantities of banned MDMA drug to college students and the public. The accused had been procuring the drug from Bengaluru with the intention of making profits by selling it in Mangaluru.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm