ಬ್ರೇಕಿಂಗ್ ನ್ಯೂಸ್
03-12-20 11:41 am Mangalore Correspondent ಕ್ರೈಂ
ಮಂಗಳೂರು, ಡಿ.3: ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಕಂಡುಬಂದ ಪ್ರಕರಣಕ್ಕೆ ಸಂಬಂಧಿಸಿ ಕದ್ರಿ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ತೀರ್ಥಹಳ್ಳಿ ಮೂಲದ ನಜೀರ್ ಅಹ್ಮದ್ ಬಂಧಿತ ಯುವಕ.
ನಜೀರ್, ಮಂಗಳೂರು ನಗರದಲ್ಲಿ ಝೊಮೆಟೋ ಕಂಪನಿಯಲ್ಲಿ ಆನ್ ಲೈನ್ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದ ಎನ್ನಲಾಗುತ್ತಿದೆ. ಮಂಗಳೂರಿನ ಬಿಜೈ ಬಳಿಯ ಅಪಾರ್ಟ್ಮೆಂಟ್ ಒಂದರ ಆವರಣ ಗೋಡೆಯಲ್ಲಿ ನ.27ರಂದು ಗೋಡೆ ಬರಹ ಕಂಡುಬಂದಿತ್ತು. ಉಗ್ರರ ಪರವಾದ ಗೋಡೆ ಬರಹ ಮಂಗಳೂರಿನಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿತ್ತು. ಸಂಘಿಗಳನ್ನು ನಿಯಂತ್ರಣ ಮಾಡೋಕೆ ಲಷ್ಕರ್ ಮತ್ತು ತಾಲಿಬಾನ್ ಉಗ್ರರನ್ನು ಕರೆಸಬೇಕಾದೀತು ಎಂದು ಎಚ್ಚರಿಕೆ ನೀಡಲಾಗಿತ್ತು. ಅಲ್ಲದೆ, ಲಷ್ಕರ್ ಜಿಂದಾಬಾದ್ ಘೋಷಣೆಯ ಬರಹವನ್ನೂ ಹಾಕಿದ್ದರು.


ಸಿಸಿಟಿವಿ ಪರಿಶೀಲನೆ ವೇಳೆ ಬೈಕಿನಲ್ಲಿ ಬಂದು ಗೋಡೆ ಬರಹ ಬರೆದು ಪರಾರಿಯಾಗಿದ್ದು ಕಂಡುಬಂದಿತ್ತು. ಈಗ ಖಚಿತ ಮೊಬೈಲ್ ಲೋಕೇಶನ್ ಆಧರಿಸಿ ಪೊಲೀಸರು ಒಬ್ಬನನ್ನು ಅರೆಸ್ಟ್ ಮಾಡಿದ್ದಾರೆ. ಮತ್ತೋರ್ವನ ಪತ್ತೆಗೆ ಬಲೆ ಬೀಸಿರುವ ಪೊಲೀಸರು ಬಲೆ ಬೀಸಿದ್ದಾರೆ.
ಆರೋಪಿಗಳ ಪತ್ತೆಗೆ ಮಂಗಳೂರು ಕಮಿಷನರ್ ವಿಶೇಷ ತಂಡವನ್ನು ನೇಮಕ ಮಾಡಿದ್ದರು. ವಾರದ ನಂತರ ಆರೋಪಿಯ ಪತ್ತೆಗೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ನಜೀರ್ ಗೆ ಲಷ್ಕರ್ ಇ ತೊಯ್ಬಾ ಜೊತೆ ಸಂಬಂಧ ಇದೆಯೇ ಅಥವಾ ಕಿಡಿಗೇಡಿ ಕೃತ್ಯವೇ ಎನ್ನುವ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Video:
A Zamato Delivery Boy has been arrested in connection to Pro-Terror Graffiti in Mangalore by Kadri Police. The arrested is been identified as Nazir Ahmed from Thirthahalli.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm