ಬ್ರೇಕಿಂಗ್ ನ್ಯೂಸ್
03-05-24 03:21 pm Bangalore Correspondent ಕ್ರೈಂ
ಬೆಂಗಳೂರು, ಮೇ.03: ವಿವಾಹಿತ ಮಹಿಳೆಯನ್ನು ಮದುವೆಯಾಗುವಂತೆ ಪೀಡಿಸಿದಲ್ಲದೆ, ಅದನ್ನು ನಿರಾಕರಿಸಿದಕ್ಕೆ ಆಕೆಯ ಮನೆಗೆ ಬೆಂಕಿ ಇಟ್ಟ ಆರೋಪಿಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೆ.ಜಿ.ಹಳ್ಳಿ ನಿವಾಸಿ ಅಬಾರ್ಜ್ (24) ಬಂಧಿತ ಆರೋಪಿ. ಕೆ.ಜಿ.ಹಳ್ಳಿಯಲ್ಲಿ ಸಣ್ಣ- ಪುಟ್ಟ ಕೆಲಸ ಮಾಡಿಕೊಂಡಿದ್ದ ಆರೋಪಿ ಹಾಗೂ ದೂರುದಾರ ವಿವಾಹಿತ ಮಹಿಳೆ ದೂರದ ಸಂಬಂಧಿಗಳಾಗಿದ್ದಾರೆ. ಮಹಿಳೆಗೆ ಈಗಾಗಲೇ ಮದುವೆಯಾಗಿದ್ದು, ಟೈಲರಿಂಗ್ ಕೆಲಸ ಮಾಡುತ್ತಿರುವ ಪತಿ ಹಾಗೂ ಮೂವರು ಮಕ್ಕಳ ಜತೆ ಸಾರಾಯಿಪಾಳ್ಯದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ.
ಈ ಮಧ್ಯೆ ಆರೋಪಿ, ಕೆಲ ತಿಂಗಳಿಂದ ದೂರುದಾರ ಮಹಿಳೆಗೆ ಪತಿಯಿಂದ ವಿಚ್ಛೇದನ ಪಡೆದುಕೊಂಡು ತನ್ನೊಂದಿಗೆ ಮದುವೆಯಾಗುವಂತೆ ಪೀಡಿಸುತ್ತಿದ್ದ. ಈ ವಿಚಾರವನ್ನು ತನ್ನ ಗಂಡನಿಗೂ ತಿಳಿಸಿದ್ದರು. ಹೀಗಾಗಿ ಹಿರಿಯರ ಸಮ್ಮುಖದಲ್ಲಿ ಮಹಿಳೆಗೆ ಮತ್ತೂಮ್ಮೆ ತೊಂದರೆ ಕೊಡದಂತೆ ಎಚ್ಚರಿಕೆ ನೀಡಿ ಸಂಧಾನ ಮಾಡಲಾಗಿತ್ತು. ಹಳೇ ಚಾಳಿ ಮುಂದುವರಿಸಿದ್ದ ಆರೋಪಿ, ಮಹಿಳೆಯನ್ನು ಹಿಂಬಾಲಿಸಲಾರಂಭಿಸಿದ್ದ. ಮದುವೆಯಾಗುವಂತೆ ಪುನಃ ಪೀಡಿಸಲಾರಂಭಿಸಿದ್ದ. ದೂರುದಾರ ಮಹಿಳೆ ಹಾಗೂ ಕುಟುಂಬದವರು, ಏಪ್ರಿಲ್ 10ರಂದು ರಾತ್ರಿ ಸಂಬಂಧಿಕರ ಮನೆಗೆ ಹೋಗಿದ್ದರು. ಮನೆಯಲ್ಲಿ ಯಾರೂ ಇರಲಿಲ್ಲ. ಏಪ್ರಿಲ್ 11ರಂದು ನಸುಕಿನಲ್ಲಿ ಮನೆಗೆ ಬಂದಿದ್ದ ಆರೋಪಿ, ಬೆಂಕಿ ಹಚ್ಚಿ ಪರಾರಿಯಾಗಿದ್ದ. ಬೆಂಕಿ ನೋಡಿದ್ದ ಅಕ್ಕ–ಪಕ್ಕದ ಮನೆಯವರು ದೂರುದಾರ ಮಹಿಳೆಗೆ ವಿಷಯ ತಿಳಿಸಿದ್ದರು. ಅವರು ಮನೆಗೆ ಬರುವಷ್ಟರಲ್ಲಿ ಎಲೆಕ್ಟ್ರಾನಿಕ್ ವಸ್ತುಗಳು ಹಾಗೂ ಪೀಠೋಪಕರಣ ಸುಟ್ಟುಹೋಗಿದ್ದವು.
The Sampigehalli police have arrested a 25-year-old man for allegedly burning down a woman’s house after she spurned his wedding proposal.The fire, which occurred on April 11 when no one was at home near Saraipalya in northeast Bengaluru, was initially suspected to have been caused by a short circuit. Later, a fire report was filed at the Sampigehalli police station.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm