ಬ್ರೇಕಿಂಗ್ ನ್ಯೂಸ್
03-05-24 03:21 pm Bangalore Correspondent ಕ್ರೈಂ
ಬೆಂಗಳೂರು, ಮೇ.03: ವಿವಾಹಿತ ಮಹಿಳೆಯನ್ನು ಮದುವೆಯಾಗುವಂತೆ ಪೀಡಿಸಿದಲ್ಲದೆ, ಅದನ್ನು ನಿರಾಕರಿಸಿದಕ್ಕೆ ಆಕೆಯ ಮನೆಗೆ ಬೆಂಕಿ ಇಟ್ಟ ಆರೋಪಿಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೆ.ಜಿ.ಹಳ್ಳಿ ನಿವಾಸಿ ಅಬಾರ್ಜ್ (24) ಬಂಧಿತ ಆರೋಪಿ. ಕೆ.ಜಿ.ಹಳ್ಳಿಯಲ್ಲಿ ಸಣ್ಣ- ಪುಟ್ಟ ಕೆಲಸ ಮಾಡಿಕೊಂಡಿದ್ದ ಆರೋಪಿ ಹಾಗೂ ದೂರುದಾರ ವಿವಾಹಿತ ಮಹಿಳೆ ದೂರದ ಸಂಬಂಧಿಗಳಾಗಿದ್ದಾರೆ. ಮಹಿಳೆಗೆ ಈಗಾಗಲೇ ಮದುವೆಯಾಗಿದ್ದು, ಟೈಲರಿಂಗ್ ಕೆಲಸ ಮಾಡುತ್ತಿರುವ ಪತಿ ಹಾಗೂ ಮೂವರು ಮಕ್ಕಳ ಜತೆ ಸಾರಾಯಿಪಾಳ್ಯದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ.
ಈ ಮಧ್ಯೆ ಆರೋಪಿ, ಕೆಲ ತಿಂಗಳಿಂದ ದೂರುದಾರ ಮಹಿಳೆಗೆ ಪತಿಯಿಂದ ವಿಚ್ಛೇದನ ಪಡೆದುಕೊಂಡು ತನ್ನೊಂದಿಗೆ ಮದುವೆಯಾಗುವಂತೆ ಪೀಡಿಸುತ್ತಿದ್ದ. ಈ ವಿಚಾರವನ್ನು ತನ್ನ ಗಂಡನಿಗೂ ತಿಳಿಸಿದ್ದರು. ಹೀಗಾಗಿ ಹಿರಿಯರ ಸಮ್ಮುಖದಲ್ಲಿ ಮಹಿಳೆಗೆ ಮತ್ತೂಮ್ಮೆ ತೊಂದರೆ ಕೊಡದಂತೆ ಎಚ್ಚರಿಕೆ ನೀಡಿ ಸಂಧಾನ ಮಾಡಲಾಗಿತ್ತು. ಹಳೇ ಚಾಳಿ ಮುಂದುವರಿಸಿದ್ದ ಆರೋಪಿ, ಮಹಿಳೆಯನ್ನು ಹಿಂಬಾಲಿಸಲಾರಂಭಿಸಿದ್ದ. ಮದುವೆಯಾಗುವಂತೆ ಪುನಃ ಪೀಡಿಸಲಾರಂಭಿಸಿದ್ದ. ದೂರುದಾರ ಮಹಿಳೆ ಹಾಗೂ ಕುಟುಂಬದವರು, ಏಪ್ರಿಲ್ 10ರಂದು ರಾತ್ರಿ ಸಂಬಂಧಿಕರ ಮನೆಗೆ ಹೋಗಿದ್ದರು. ಮನೆಯಲ್ಲಿ ಯಾರೂ ಇರಲಿಲ್ಲ. ಏಪ್ರಿಲ್ 11ರಂದು ನಸುಕಿನಲ್ಲಿ ಮನೆಗೆ ಬಂದಿದ್ದ ಆರೋಪಿ, ಬೆಂಕಿ ಹಚ್ಚಿ ಪರಾರಿಯಾಗಿದ್ದ. ಬೆಂಕಿ ನೋಡಿದ್ದ ಅಕ್ಕ–ಪಕ್ಕದ ಮನೆಯವರು ದೂರುದಾರ ಮಹಿಳೆಗೆ ವಿಷಯ ತಿಳಿಸಿದ್ದರು. ಅವರು ಮನೆಗೆ ಬರುವಷ್ಟರಲ್ಲಿ ಎಲೆಕ್ಟ್ರಾನಿಕ್ ವಸ್ತುಗಳು ಹಾಗೂ ಪೀಠೋಪಕರಣ ಸುಟ್ಟುಹೋಗಿದ್ದವು.
The Sampigehalli police have arrested a 25-year-old man for allegedly burning down a woman’s house after she spurned his wedding proposal.The fire, which occurred on April 11 when no one was at home near Saraipalya in northeast Bengaluru, was initially suspected to have been caused by a short circuit. Later, a fire report was filed at the Sampigehalli police station.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 09:30 pm
HK News Staffer
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am