ಬ್ರೇಕಿಂಗ್ ನ್ಯೂಸ್
03-05-24 03:21 pm Bangalore Correspondent ಕ್ರೈಂ
ಬೆಂಗಳೂರು, ಮೇ.03: ವಿವಾಹಿತ ಮಹಿಳೆಯನ್ನು ಮದುವೆಯಾಗುವಂತೆ ಪೀಡಿಸಿದಲ್ಲದೆ, ಅದನ್ನು ನಿರಾಕರಿಸಿದಕ್ಕೆ ಆಕೆಯ ಮನೆಗೆ ಬೆಂಕಿ ಇಟ್ಟ ಆರೋಪಿಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೆ.ಜಿ.ಹಳ್ಳಿ ನಿವಾಸಿ ಅಬಾರ್ಜ್ (24) ಬಂಧಿತ ಆರೋಪಿ. ಕೆ.ಜಿ.ಹಳ್ಳಿಯಲ್ಲಿ ಸಣ್ಣ- ಪುಟ್ಟ ಕೆಲಸ ಮಾಡಿಕೊಂಡಿದ್ದ ಆರೋಪಿ ಹಾಗೂ ದೂರುದಾರ ವಿವಾಹಿತ ಮಹಿಳೆ ದೂರದ ಸಂಬಂಧಿಗಳಾಗಿದ್ದಾರೆ. ಮಹಿಳೆಗೆ ಈಗಾಗಲೇ ಮದುವೆಯಾಗಿದ್ದು, ಟೈಲರಿಂಗ್ ಕೆಲಸ ಮಾಡುತ್ತಿರುವ ಪತಿ ಹಾಗೂ ಮೂವರು ಮಕ್ಕಳ ಜತೆ ಸಾರಾಯಿಪಾಳ್ಯದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ.
ಈ ಮಧ್ಯೆ ಆರೋಪಿ, ಕೆಲ ತಿಂಗಳಿಂದ ದೂರುದಾರ ಮಹಿಳೆಗೆ ಪತಿಯಿಂದ ವಿಚ್ಛೇದನ ಪಡೆದುಕೊಂಡು ತನ್ನೊಂದಿಗೆ ಮದುವೆಯಾಗುವಂತೆ ಪೀಡಿಸುತ್ತಿದ್ದ. ಈ ವಿಚಾರವನ್ನು ತನ್ನ ಗಂಡನಿಗೂ ತಿಳಿಸಿದ್ದರು. ಹೀಗಾಗಿ ಹಿರಿಯರ ಸಮ್ಮುಖದಲ್ಲಿ ಮಹಿಳೆಗೆ ಮತ್ತೂಮ್ಮೆ ತೊಂದರೆ ಕೊಡದಂತೆ ಎಚ್ಚರಿಕೆ ನೀಡಿ ಸಂಧಾನ ಮಾಡಲಾಗಿತ್ತು. ಹಳೇ ಚಾಳಿ ಮುಂದುವರಿಸಿದ್ದ ಆರೋಪಿ, ಮಹಿಳೆಯನ್ನು ಹಿಂಬಾಲಿಸಲಾರಂಭಿಸಿದ್ದ. ಮದುವೆಯಾಗುವಂತೆ ಪುನಃ ಪೀಡಿಸಲಾರಂಭಿಸಿದ್ದ. ದೂರುದಾರ ಮಹಿಳೆ ಹಾಗೂ ಕುಟುಂಬದವರು, ಏಪ್ರಿಲ್ 10ರಂದು ರಾತ್ರಿ ಸಂಬಂಧಿಕರ ಮನೆಗೆ ಹೋಗಿದ್ದರು. ಮನೆಯಲ್ಲಿ ಯಾರೂ ಇರಲಿಲ್ಲ. ಏಪ್ರಿಲ್ 11ರಂದು ನಸುಕಿನಲ್ಲಿ ಮನೆಗೆ ಬಂದಿದ್ದ ಆರೋಪಿ, ಬೆಂಕಿ ಹಚ್ಚಿ ಪರಾರಿಯಾಗಿದ್ದ. ಬೆಂಕಿ ನೋಡಿದ್ದ ಅಕ್ಕ–ಪಕ್ಕದ ಮನೆಯವರು ದೂರುದಾರ ಮಹಿಳೆಗೆ ವಿಷಯ ತಿಳಿಸಿದ್ದರು. ಅವರು ಮನೆಗೆ ಬರುವಷ್ಟರಲ್ಲಿ ಎಲೆಕ್ಟ್ರಾನಿಕ್ ವಸ್ತುಗಳು ಹಾಗೂ ಪೀಠೋಪಕರಣ ಸುಟ್ಟುಹೋಗಿದ್ದವು.
The Sampigehalli police have arrested a 25-year-old man for allegedly burning down a woman’s house after she spurned his wedding proposal.The fire, which occurred on April 11 when no one was at home near Saraipalya in northeast Bengaluru, was initially suspected to have been caused by a short circuit. Later, a fire report was filed at the Sampigehalli police station.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm