ಬ್ರೇಕಿಂಗ್ ನ್ಯೂಸ್
03-12-20 12:09 pm Headline Karnataka News Network ಕ್ರೈಂ
ಚೆನ್ನೈ(ಡಿ.03): ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ವಿಡಿಯೋ ಪೋಸ್ಟ್ ಮಾಡಿದ ಆರೋಪದಡಿ ಕೊಲ್ಕತಾ ಹಾಗೂ ಮದ್ರಾಸ್ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಸಿ.ಎಸ್.ಕರ್ಣನ್ ಅವರನ್ನು ಚೆನ್ನೈನ ಸೈಬರ್ ಅಪರಾಧ ವಿಭಾಗದ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಸುಪ್ರೀಂಕೋರ್ಟ್ನ ಹಾಲಿ ಹಾಗೂ ನಿವೃತ್ತ ನ್ಯಾಯಮೂರ್ತಿಗಳು, ಅವರ ಪತ್ನಿಯರು ಹಾಗೂ ಮಹಿಳಾ ನ್ಯಾಯಮೂರ್ತಿಗಳ ಬಗ್ಗೆ ಅಶ್ಲೀಲವಾಗಿ ಮಾತನಾಡಿ ವಿಡಿಯೋವೊಂದನ್ನು ನ್ಯಾ| ಕರ್ಣನ್ ಪೋಸ್ಟ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ.


ಕರ್ಣನ್ ವಿರುದ್ಧ ಐಪಿಸಿ ಸೆಕ್ಷನ್ 509 (ಮಹಿಳೆಯ ಘನತೆಗೆ ಧಕ್ಕೆ ತರುವುದು, ಅಶ್ಲೀಲ ಮಾತನಾಡುವುದು ಅಥವಾ ಸನ್ನೆ ಮಾಡುವುದು) ಹಾಗೂ ಐಪಿಸಿ ಸೆಕ್ಷನ್ 153 (ದಂಗೆಗೆ ಪ್ರಚೋದನೆ ನೀಡುವುದು) ಅಡಿ ಪ್ರಕರಣ ದಾಖಲಿಸಲಾಗಿದೆ. ಅವರನ್ನು ಕೋರ್ಟ್ಗೆ ಹಾಜರುಪಡಿಸಿ ಪೊಲೀಸ್ ವಶಕ್ಕೆ ಪಡೆಯಲಾಗಿದೆ.
ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಆರ್.ಬಾನುಮತಿ ಅವರ ನಿವಾಸಕ್ಕೆ ಅಕ್ರಮವಾಗಿ ನುಗ್ಗಿದ ಆರೋಪದಡಿ ಕಳೆದ ತಿಂಗಳು ಕರ್ಣನ್ ಅವರ ಹೆಸರಿಲ್ಲದೆ ಐದು ಮಂದಿಯ ವಿರುದ್ಧ ತಿರುವಣ್ಮಿಯೂರ್ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಕರ್ಣನ್ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದಾಗಲೂ ಸುಪ್ರೀಂಕೋರ್ಟ್ನ ಜಡ್ಜ್ಗಳ ಬಂಧನಕ್ಕೆ ಆದೇಶ ನೀಡುವ ಮೂಲಕ ತೀವ್ರ ವಿವಾದ ಸೃಷ್ಟಿಸಿದ್ದರು. ನಿವೃತ್ತಿಯ ನಂತರ ಅವರು ನ್ಯಾಯಾಂಗದ ಘನತೆಗೆ ಧಕ್ಕೆ ತರುವ ಹಲವು ಪ್ರಕರಣಗಳಲ್ಲಿ ಅಪಖ್ಯಾತಿ ಪಡೆದಿದ್ದಾರೆ.
CS Karnan, a former judge of the Madras and Calcutta High Courts, was arrested in Chennai on Wednesday following a complaint against him for making vulgar comments against women and remarks against judges, police said. The arrest comes after a video clip surfaced recently in social media, in which, Karnan, allegedly made objectionable remarks against judges and their wives.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm