ಬ್ರೇಕಿಂಗ್ ನ್ಯೂಸ್
04-05-24 12:23 pm HK News Desk ಕ್ರೈಂ
ಹುಬ್ಬಳ್ಳಿ , ಮೇ 04: ಅಪ್ರಾಪ್ತೆಯನ್ನು ನಂಬಿಸಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಗರ್ಭಿಣಿಯನ್ನಾಗಿ ಮಾಡಿದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.
19 ವರ್ಷದ ಯುವಕ ಸದ್ದಾಂಹುಸೇನ ಲಿಂಬುವಾಲೆ ಬಂಧಿತ ಆರೋಪಿ. ನವನಗರ ಠಾಣಾ ವ್ಯಾಪ್ತಿಯ 17 ವರ್ಷದ ಯುವತಿಗೆ ಮೋಸ ಮಾಡಿದ್ದಾನೆಂದು ಸಂತ್ರಸ್ತೆಯ ಪೋಷಕರು ಆರೋಪಿಸಿದ್ದಾರೆ.ಅಪ್ರಾಪ್ತೆ ಇಂದು ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಹಿನ್ನಲೆಯಲ್ಲಿ ಪೋಷಕರು, ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದ ತಪಾಸಣೆ ಮಾಡಿಸಿದ್ದಾರೆ. ಈ ವೇಳೆ, ಗರ್ಭಿಣಿಯಾಗಿರುವ ಸಂಗತಿ ಗೊತ್ತಾಗಿದೆ ಎನ್ನಲಾಗಿದೆ. ಈ ಕುರಿತು ಬಲವಂತವಾಗಿ ಲೈಂಗಿಕ ದೌರ್ಜನ್ಯ, ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಾಗಿದೆ.

ಇದಕ್ಕೂ ಮೊದಲು ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ಕಾರ್ಯಕರ್ತರು ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು. ಕಾನೂನಿನ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಎಪಿಎಂಸಿ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ತನಿಖೆ ಕೈಗೊಂಡ ಪೊಲೀಸರು ಆರೋಪಿ ಸದ್ದಾಂಹುಸೇನ ಲಿಂಬುವಾಲೆ ನನ್ನ ತಕ್ಷಣ ವಶಕ್ಕೆ ಪಡೆದಿದ್ದರು. ಬಂಧನ ಪ್ರಕ್ರಿಯೆಗೆ ಶುಕ್ರವಾರ ರಾತ್ರಿ ಸುತಗಟ್ಟಿ ಗ್ರಾಮಕ್ಕೆ ತೆರಳಿದಾಗ, ಆರೋಪಿ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಆ ವೇಳೆ ಪೊಲೀಸರು ಅವನ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ವಿದ್ಯಾಗಿರಿ ಪೊಲೀಸ್ ಠಾಣೆ ಸಿಬ್ಬಂದಿ ಅರುಣ್ ಹಾಗೂ ಇನ್ಸ್ಪೆಕ್ಟರ್ ಅವರ ಕಾಲಿಗೆ ಗಾಯವಾಗಿದೆ. ತಕ್ಷಣ ಇನ್ಸ್ಪೆಕ್ಟರ್ ಸಂಗಮೇಶ ಡಿಂಗಿನಾಳ ಆತ್ಮರಕ್ಷಣೆಗಾಗಿ ಗಾಳಿಯಲ್ಲಿ ಒಂದು ಗುಂಡು ಹಾರಿಸಿ, ಮತ್ತೊಂದು ಗುಂಡನ್ನು ಆರೋಪಿಯ ಎಡಗಾಲಿಗೆ ಹೊಡೆದಿದ್ದಾರೆ. ಆರೋಪಿಯನ್ನ ಧಾರವಾಡ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಕಿಮ್ಸ್ಗೆ ರವಾನಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ತಿಳಿಸಿದ್ದಾರೆ.
Hubballi 19 year old youth arrested over rape charges of minor girl after she turns pregnant, Hindi activist held protest in hubballi against the safety of Hindu girls. Accused Saddam Hussain Limbuwale was shot to his leg as we tried to escape.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
24-01-26 11:18 pm
Mangaluru Staffer
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm