ಬ್ರೇಕಿಂಗ್ ನ್ಯೂಸ್
04-05-24 12:23 pm HK News Desk ಕ್ರೈಂ
ಹುಬ್ಬಳ್ಳಿ , ಮೇ 04: ಅಪ್ರಾಪ್ತೆಯನ್ನು ನಂಬಿಸಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಗರ್ಭಿಣಿಯನ್ನಾಗಿ ಮಾಡಿದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.
19 ವರ್ಷದ ಯುವಕ ಸದ್ದಾಂಹುಸೇನ ಲಿಂಬುವಾಲೆ ಬಂಧಿತ ಆರೋಪಿ. ನವನಗರ ಠಾಣಾ ವ್ಯಾಪ್ತಿಯ 17 ವರ್ಷದ ಯುವತಿಗೆ ಮೋಸ ಮಾಡಿದ್ದಾನೆಂದು ಸಂತ್ರಸ್ತೆಯ ಪೋಷಕರು ಆರೋಪಿಸಿದ್ದಾರೆ.ಅಪ್ರಾಪ್ತೆ ಇಂದು ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಹಿನ್ನಲೆಯಲ್ಲಿ ಪೋಷಕರು, ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದ ತಪಾಸಣೆ ಮಾಡಿಸಿದ್ದಾರೆ. ಈ ವೇಳೆ, ಗರ್ಭಿಣಿಯಾಗಿರುವ ಸಂಗತಿ ಗೊತ್ತಾಗಿದೆ ಎನ್ನಲಾಗಿದೆ. ಈ ಕುರಿತು ಬಲವಂತವಾಗಿ ಲೈಂಗಿಕ ದೌರ್ಜನ್ಯ, ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಾಗಿದೆ.

ಇದಕ್ಕೂ ಮೊದಲು ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ಕಾರ್ಯಕರ್ತರು ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು. ಕಾನೂನಿನ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಎಪಿಎಂಸಿ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ತನಿಖೆ ಕೈಗೊಂಡ ಪೊಲೀಸರು ಆರೋಪಿ ಸದ್ದಾಂಹುಸೇನ ಲಿಂಬುವಾಲೆ ನನ್ನ ತಕ್ಷಣ ವಶಕ್ಕೆ ಪಡೆದಿದ್ದರು. ಬಂಧನ ಪ್ರಕ್ರಿಯೆಗೆ ಶುಕ್ರವಾರ ರಾತ್ರಿ ಸುತಗಟ್ಟಿ ಗ್ರಾಮಕ್ಕೆ ತೆರಳಿದಾಗ, ಆರೋಪಿ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಆ ವೇಳೆ ಪೊಲೀಸರು ಅವನ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ವಿದ್ಯಾಗಿರಿ ಪೊಲೀಸ್ ಠಾಣೆ ಸಿಬ್ಬಂದಿ ಅರುಣ್ ಹಾಗೂ ಇನ್ಸ್ಪೆಕ್ಟರ್ ಅವರ ಕಾಲಿಗೆ ಗಾಯವಾಗಿದೆ. ತಕ್ಷಣ ಇನ್ಸ್ಪೆಕ್ಟರ್ ಸಂಗಮೇಶ ಡಿಂಗಿನಾಳ ಆತ್ಮರಕ್ಷಣೆಗಾಗಿ ಗಾಳಿಯಲ್ಲಿ ಒಂದು ಗುಂಡು ಹಾರಿಸಿ, ಮತ್ತೊಂದು ಗುಂಡನ್ನು ಆರೋಪಿಯ ಎಡಗಾಲಿಗೆ ಹೊಡೆದಿದ್ದಾರೆ. ಆರೋಪಿಯನ್ನ ಧಾರವಾಡ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಕಿಮ್ಸ್ಗೆ ರವಾನಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ತಿಳಿಸಿದ್ದಾರೆ.
Hubballi 19 year old youth arrested over rape charges of minor girl after she turns pregnant, Hindi activist held protest in hubballi against the safety of Hindu girls. Accused Saddam Hussain Limbuwale was shot to his leg as we tried to escape.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm