ಬ್ರೇಕಿಂಗ್ ನ್ಯೂಸ್
04-05-24 11:03 pm HK News Desk ಕ್ರೈಂ
ಚೆನ್ನೈ, ಮೇ.4: ದಕ್ಷಿಣ ತಮಿಳುನಾಡಿನ ತಿರುನಲ್ವೇಲಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಬರ್ಬರವಾಗಿ ಕೊಲೆಗೈದ ಶಂಕೆ ವ್ಯಕ್ತವಾಗಿದ್ದು, ಸುಟ್ಟು ಹಾಕಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ತಿರುನಲ್ವೇಲಿ ಪೂರ್ವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆಬಿಕೆ ಜಯಕುಮಾರ್ ಧನಸಿಂಗ್ ಕೊಲೆಯಾದವರು.
ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಧನಸಿಂಗ್ ಮನೆ ಸಮೀಪದ ತೋಟದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಉವಾರಿ ಪೊಲೀಸ್ ಠಾಣೆಯ ಕರೈಚಿತ್ತುಪುದೂರು ಎಂಬಲ್ಲಿನ ತೋಟದಲ್ಲಿ ಪೂರ್ತಿ ಸುಟ್ಟು ಹಾಕಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಗುರುವಾರ ಸಂಜೆಯಿಂದ ಮಿಸ್ಸಿಂಗ್ ಆಗಿದ್ದ ಜಯಕುಮಾರ್ ಬಗ್ಗೆ ಮಗ ಕರುತ್ತಯ್ಯ ಜೆಫ್ರಿನ್ ಪೊಲೀಸ್ ದೂರು ನೀಡಿದ್ದರು. ಕೈಕಾಲುಗಳನ್ನು ಇಲೆಕ್ಟ್ರಿಕ್ ವಯರ್ ನಲ್ಲಿ ಕಟ್ಟಿ ಹಾಕಿದ್ದು, ಅವು ಬೆಂಕಿಯಲ್ಲಿ ಸುಟ್ಟು ಹೋಗಿದೆ. ತಾಮ್ರದ ವಯರಿನಲ್ಲಿ ಶವವನ್ನು ಕಟ್ಟಿದ ರೀತಿ ಕಂಡುಬಂದಿದೆ.
ಯಾರೋ ದುಷ್ಕರ್ಮಿಗಳು ಕೊಲೆಗೈದು ಕುರುಹು ನಾಶಪಡಿಸುವ ಉದ್ದೇಶದಲ್ಲಿ ಸುಟ್ಟು ಹಾಕಿದ್ದಾರೆ ಎನ್ನುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಎಪ್ರಿಲ್ 30ರಂದು ಜೀವ ಬೆದರಿಕೆ ಇರುವ ಬಗ್ಗೆ ಜಯಕುಮಾರ್ ಪೊಲೀಸ್ ದೂರು ನೀಡಿದ್ದರು. ಹಾಲಿ ಶಾಸಕ ಸೇರಿದಂತೆ ಎಂಟು ಮಂದಿ ಕಾಂಗ್ರೆಸ್ ಮುಖಂಡರ ಬಗ್ಗೆ ದೂರು ನೀಡಿದ್ದರು. ಹಣಕಾಸು ವಿಚಾರದಲ್ಲಿ ವಿವಾದ ಇರುವ ಬಗ್ಗೆ ಹೇಳಿಕೊಂಡಿದ್ದರು. ಮನೆಯ ಆವರಣದಲ್ಲಿ ರಾತ್ರಿ ವೇಳೆ ದುಷ್ಕರ್ಮಿಗಳು ಅಡ್ಡಾಡುತ್ತಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದರು.
The half burnt body of K P K Jeyakumar Dhanasingh, the head of Congress’ Tirunelveli (East) unit, was found on Saturday at his farm in Karaichuthupudur near Thisayanvilai, with police suspecting foul play in his death.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 10:27 pm
Mangalore Correspondent
Siddaramaiah, Cm Mangalore, BJP black flag: ಸ...
16-05-25 06:05 pm
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
16-05-25 11:06 pm
Mangalore Correspondent
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm