ಬ್ರೇಕಿಂಗ್ ನ್ಯೂಸ್
04-05-24 11:03 pm HK News Desk ಕ್ರೈಂ
ಚೆನ್ನೈ, ಮೇ.4: ದಕ್ಷಿಣ ತಮಿಳುನಾಡಿನ ತಿರುನಲ್ವೇಲಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಬರ್ಬರವಾಗಿ ಕೊಲೆಗೈದ ಶಂಕೆ ವ್ಯಕ್ತವಾಗಿದ್ದು, ಸುಟ್ಟು ಹಾಕಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ತಿರುನಲ್ವೇಲಿ ಪೂರ್ವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆಬಿಕೆ ಜಯಕುಮಾರ್ ಧನಸಿಂಗ್ ಕೊಲೆಯಾದವರು.
ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಧನಸಿಂಗ್ ಮನೆ ಸಮೀಪದ ತೋಟದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಉವಾರಿ ಪೊಲೀಸ್ ಠಾಣೆಯ ಕರೈಚಿತ್ತುಪುದೂರು ಎಂಬಲ್ಲಿನ ತೋಟದಲ್ಲಿ ಪೂರ್ತಿ ಸುಟ್ಟು ಹಾಕಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಗುರುವಾರ ಸಂಜೆಯಿಂದ ಮಿಸ್ಸಿಂಗ್ ಆಗಿದ್ದ ಜಯಕುಮಾರ್ ಬಗ್ಗೆ ಮಗ ಕರುತ್ತಯ್ಯ ಜೆಫ್ರಿನ್ ಪೊಲೀಸ್ ದೂರು ನೀಡಿದ್ದರು. ಕೈಕಾಲುಗಳನ್ನು ಇಲೆಕ್ಟ್ರಿಕ್ ವಯರ್ ನಲ್ಲಿ ಕಟ್ಟಿ ಹಾಕಿದ್ದು, ಅವು ಬೆಂಕಿಯಲ್ಲಿ ಸುಟ್ಟು ಹೋಗಿದೆ. ತಾಮ್ರದ ವಯರಿನಲ್ಲಿ ಶವವನ್ನು ಕಟ್ಟಿದ ರೀತಿ ಕಂಡುಬಂದಿದೆ.
ಯಾರೋ ದುಷ್ಕರ್ಮಿಗಳು ಕೊಲೆಗೈದು ಕುರುಹು ನಾಶಪಡಿಸುವ ಉದ್ದೇಶದಲ್ಲಿ ಸುಟ್ಟು ಹಾಕಿದ್ದಾರೆ ಎನ್ನುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಎಪ್ರಿಲ್ 30ರಂದು ಜೀವ ಬೆದರಿಕೆ ಇರುವ ಬಗ್ಗೆ ಜಯಕುಮಾರ್ ಪೊಲೀಸ್ ದೂರು ನೀಡಿದ್ದರು. ಹಾಲಿ ಶಾಸಕ ಸೇರಿದಂತೆ ಎಂಟು ಮಂದಿ ಕಾಂಗ್ರೆಸ್ ಮುಖಂಡರ ಬಗ್ಗೆ ದೂರು ನೀಡಿದ್ದರು. ಹಣಕಾಸು ವಿಚಾರದಲ್ಲಿ ವಿವಾದ ಇರುವ ಬಗ್ಗೆ ಹೇಳಿಕೊಂಡಿದ್ದರು. ಮನೆಯ ಆವರಣದಲ್ಲಿ ರಾತ್ರಿ ವೇಳೆ ದುಷ್ಕರ್ಮಿಗಳು ಅಡ್ಡಾಡುತ್ತಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದರು.
The half burnt body of K P K Jeyakumar Dhanasingh, the head of Congress’ Tirunelveli (East) unit, was found on Saturday at his farm in Karaichuthupudur near Thisayanvilai, with police suspecting foul play in his death.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm