ಬ್ರೇಕಿಂಗ್ ನ್ಯೂಸ್
04-05-24 11:03 pm HK News Desk ಕ್ರೈಂ
ಚೆನ್ನೈ, ಮೇ.4: ದಕ್ಷಿಣ ತಮಿಳುನಾಡಿನ ತಿರುನಲ್ವೇಲಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಬರ್ಬರವಾಗಿ ಕೊಲೆಗೈದ ಶಂಕೆ ವ್ಯಕ್ತವಾಗಿದ್ದು, ಸುಟ್ಟು ಹಾಕಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ತಿರುನಲ್ವೇಲಿ ಪೂರ್ವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆಬಿಕೆ ಜಯಕುಮಾರ್ ಧನಸಿಂಗ್ ಕೊಲೆಯಾದವರು.
ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಧನಸಿಂಗ್ ಮನೆ ಸಮೀಪದ ತೋಟದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಉವಾರಿ ಪೊಲೀಸ್ ಠಾಣೆಯ ಕರೈಚಿತ್ತುಪುದೂರು ಎಂಬಲ್ಲಿನ ತೋಟದಲ್ಲಿ ಪೂರ್ತಿ ಸುಟ್ಟು ಹಾಕಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಗುರುವಾರ ಸಂಜೆಯಿಂದ ಮಿಸ್ಸಿಂಗ್ ಆಗಿದ್ದ ಜಯಕುಮಾರ್ ಬಗ್ಗೆ ಮಗ ಕರುತ್ತಯ್ಯ ಜೆಫ್ರಿನ್ ಪೊಲೀಸ್ ದೂರು ನೀಡಿದ್ದರು. ಕೈಕಾಲುಗಳನ್ನು ಇಲೆಕ್ಟ್ರಿಕ್ ವಯರ್ ನಲ್ಲಿ ಕಟ್ಟಿ ಹಾಕಿದ್ದು, ಅವು ಬೆಂಕಿಯಲ್ಲಿ ಸುಟ್ಟು ಹೋಗಿದೆ. ತಾಮ್ರದ ವಯರಿನಲ್ಲಿ ಶವವನ್ನು ಕಟ್ಟಿದ ರೀತಿ ಕಂಡುಬಂದಿದೆ.
ಯಾರೋ ದುಷ್ಕರ್ಮಿಗಳು ಕೊಲೆಗೈದು ಕುರುಹು ನಾಶಪಡಿಸುವ ಉದ್ದೇಶದಲ್ಲಿ ಸುಟ್ಟು ಹಾಕಿದ್ದಾರೆ ಎನ್ನುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಎಪ್ರಿಲ್ 30ರಂದು ಜೀವ ಬೆದರಿಕೆ ಇರುವ ಬಗ್ಗೆ ಜಯಕುಮಾರ್ ಪೊಲೀಸ್ ದೂರು ನೀಡಿದ್ದರು. ಹಾಲಿ ಶಾಸಕ ಸೇರಿದಂತೆ ಎಂಟು ಮಂದಿ ಕಾಂಗ್ರೆಸ್ ಮುಖಂಡರ ಬಗ್ಗೆ ದೂರು ನೀಡಿದ್ದರು. ಹಣಕಾಸು ವಿಚಾರದಲ್ಲಿ ವಿವಾದ ಇರುವ ಬಗ್ಗೆ ಹೇಳಿಕೊಂಡಿದ್ದರು. ಮನೆಯ ಆವರಣದಲ್ಲಿ ರಾತ್ರಿ ವೇಳೆ ದುಷ್ಕರ್ಮಿಗಳು ಅಡ್ಡಾಡುತ್ತಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದರು.
The half burnt body of K P K Jeyakumar Dhanasingh, the head of Congress’ Tirunelveli (East) unit, was found on Saturday at his farm in Karaichuthupudur near Thisayanvilai, with police suspecting foul play in his death.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
09-06-25 11:03 pm
Mangalore Correspondent
Mangalore BY Vijayendra, BJP: ಕಾಂಗ್ರೆಸ್ ಆಡಳಿತ...
09-06-25 09:56 pm
Suhas Shetty Murder, NIA, Mangalore: ಸುಹಾಸ್ ಶ...
08-06-25 10:51 pm
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
09-06-25 09:20 pm
HK News Desk
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm