ಬ್ರೇಕಿಂಗ್ ನ್ಯೂಸ್
05-05-24 02:44 pm HK News Desk ಕ್ರೈಂ
ಕಾರವಾರ, ಮೇ.5: ತಾಯಿಯೊಬ್ಬಳು ಕೋಪದಲ್ಲಿ ತನ್ನ ಮಗುವನ್ನೇ ಕಾಲುವೆಗೆ ಎಸೆದಿದ್ದಾಳೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಹಾಲಮಡ್ಡಿಯಲ್ಲಿ ಘಟನೆ ನಡೆದಿದೆ. ಸಾವಿತ್ರಿ ಎಂಬಾಕೆ ತನ್ನ ಆರು ವರ್ಷದ ಮಗನನ್ನು ನಾಲೆಗೆ ಎಸೆದಿದ್ದಾಳೆ. ವಿನೋದ್ (6) ಮೃತ ದುರ್ದೈವಿ.
ಮಗುವು ಮೂಕನಾಗಿದ್ದರಿಂದ ಸಾವಿತ್ರಿ ಹಾಗೂ ರವಿಕುಮಾರ್ ದಂಪತಿ ನಡುವೆ ಗಲಾಟೆ ನಡೆಯುತ್ತಿತ್ತು. ರವಿಕುಮಾರ್ ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಪ್ರತೀ ಬಾರಿ ಗಲಾಟೆಯಾದಾಗಲೂ ಮಗು ಸಾಯಲಿ ಎಂದು ಸಾವಿತ್ರಿಗೆ ಬೈಯ್ಯುತ್ತಿದ್ದ.

ನಿನ್ನೆ ಶನಿವಾರ ರಾತ್ರಿಯೂ ಸಹ ಸಾವಿತ್ರಿ ಹಾಗೂ ಪತಿ ರವಿಕುಮಾರ್ ಜತೆಗೆ ಜಗಳ ನಡೆದಿದೆ. ಪತಿ ಜತೆಗೆ ಗಲಾಟೆ ಆದಾಗ ಸಾವಿತ್ರಿ ಕೋಪದಲ್ಲಿ ಮಗುವನ್ನು ಎತ್ತಿಕೊಂಡು ಹೋಗಿ ನಾಲೆಗೆ ಎಸೆದಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಮಗುವನ್ನು ಹುಡುಕಾಡಲು ಮುಂದಾಗಿದ್ದಾರೆ.
ಆದರೆ ಮಗು ಸಿಗದಿದ್ದಾಗ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಹಾಲಮಡ್ಡಿಯಲ್ಲಿ ನಡೆದ ಶೋಧ ಕಾರ್ಯಾಚರಣೆ ವೇಳೆ ಮೃತದೇಹವು ಪತ್ತೆಯಾಗಿದೆ. ನಾಲೆಗೆ ಎಸೆಯಲ್ಪಟ್ಟಾಗ ಮೊಸಳೆಯೊಂದು ಮಗುವಿನ ಬಲಗೈ ಕಚ್ಚಿ ಎಳೆದು ಹೋಗಿತ್ತು. ಆರು ವರ್ಷದ ಗಂಡು ಮಗುವಿಗಾಗಿ ನಿನ್ನೆ ಶನಿವಾರ ರಾತ್ರಿಯಿಂದ ಶೋಧ ಕಾರ್ಯಾಚರಣೆ ಮುಂದುವರಿದಿತ್ತು.
ಭಾನುವಾರ ಬೆಳಗ್ಗೆ ಕಾರ್ಯಾಚರಣೆ ವೇಳೆ ಮಗುವಿನ ಜತೆ ಆಗಾಗ ಮೊಸಳೆಯು ಕಾಣಿಸಿಕೊಂಡಿತ್ತು. ದಾಂಡೇಲಿಯ ಗ್ರಾಮೀಣ ಠಾಣಾ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮುಳುಗು ತಜ್ಞರ ಸಹಕಾರದಲ್ಲಿ ಮಗುವಿನ ಮೃತದೇಹ ಪತ್ತೆ ಮಾಡಲಾಗಿದೆ. ಮುಳುಗು ತಜ್ಞರು ಮೊಸಳೆಯ ಬಾಯಿಯಿಂದ ಮಗುವಿನ ಮೃತದೇಹ ಬಿಡಿಸಿಕೊಂಡು ಬಂದಿದ್ದಾರೆ.
ಇನ್ನೂ ಆರೋಪಿಗಳಾದ ರವಿ ಕುಮಾರ್ ಹಾಗೂ ಸಾವಿತ್ರಿ ದಂಪತಿಯನ್ನು ದಾಂಡೇಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ದಾಂಡೇಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ. ಅಪ್ಪ-ಅಮ್ಮನ ಜಗಳದಲ್ಲಿ ಏನು ತಿಳಿಯದ ಮಗುವೊಂದು ಪ್ರಾಣವನ್ನೇ ಕಳೆದುಕೊಂಡಿದೆ.
Karwar Dandeli Wife throws 6 year old baby to water canal, body found. She was angry and frustrated by husbands behaviour, the baby was said to be mute.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am