ಬ್ರೇಕಿಂಗ್ ನ್ಯೂಸ್
05-05-24 02:44 pm HK News Desk ಕ್ರೈಂ
ಕಾರವಾರ, ಮೇ.5: ತಾಯಿಯೊಬ್ಬಳು ಕೋಪದಲ್ಲಿ ತನ್ನ ಮಗುವನ್ನೇ ಕಾಲುವೆಗೆ ಎಸೆದಿದ್ದಾಳೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಹಾಲಮಡ್ಡಿಯಲ್ಲಿ ಘಟನೆ ನಡೆದಿದೆ. ಸಾವಿತ್ರಿ ಎಂಬಾಕೆ ತನ್ನ ಆರು ವರ್ಷದ ಮಗನನ್ನು ನಾಲೆಗೆ ಎಸೆದಿದ್ದಾಳೆ. ವಿನೋದ್ (6) ಮೃತ ದುರ್ದೈವಿ.
ಮಗುವು ಮೂಕನಾಗಿದ್ದರಿಂದ ಸಾವಿತ್ರಿ ಹಾಗೂ ರವಿಕುಮಾರ್ ದಂಪತಿ ನಡುವೆ ಗಲಾಟೆ ನಡೆಯುತ್ತಿತ್ತು. ರವಿಕುಮಾರ್ ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಪ್ರತೀ ಬಾರಿ ಗಲಾಟೆಯಾದಾಗಲೂ ಮಗು ಸಾಯಲಿ ಎಂದು ಸಾವಿತ್ರಿಗೆ ಬೈಯ್ಯುತ್ತಿದ್ದ.

ನಿನ್ನೆ ಶನಿವಾರ ರಾತ್ರಿಯೂ ಸಹ ಸಾವಿತ್ರಿ ಹಾಗೂ ಪತಿ ರವಿಕುಮಾರ್ ಜತೆಗೆ ಜಗಳ ನಡೆದಿದೆ. ಪತಿ ಜತೆಗೆ ಗಲಾಟೆ ಆದಾಗ ಸಾವಿತ್ರಿ ಕೋಪದಲ್ಲಿ ಮಗುವನ್ನು ಎತ್ತಿಕೊಂಡು ಹೋಗಿ ನಾಲೆಗೆ ಎಸೆದಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಮಗುವನ್ನು ಹುಡುಕಾಡಲು ಮುಂದಾಗಿದ್ದಾರೆ.
ಆದರೆ ಮಗು ಸಿಗದಿದ್ದಾಗ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಹಾಲಮಡ್ಡಿಯಲ್ಲಿ ನಡೆದ ಶೋಧ ಕಾರ್ಯಾಚರಣೆ ವೇಳೆ ಮೃತದೇಹವು ಪತ್ತೆಯಾಗಿದೆ. ನಾಲೆಗೆ ಎಸೆಯಲ್ಪಟ್ಟಾಗ ಮೊಸಳೆಯೊಂದು ಮಗುವಿನ ಬಲಗೈ ಕಚ್ಚಿ ಎಳೆದು ಹೋಗಿತ್ತು. ಆರು ವರ್ಷದ ಗಂಡು ಮಗುವಿಗಾಗಿ ನಿನ್ನೆ ಶನಿವಾರ ರಾತ್ರಿಯಿಂದ ಶೋಧ ಕಾರ್ಯಾಚರಣೆ ಮುಂದುವರಿದಿತ್ತು.
ಭಾನುವಾರ ಬೆಳಗ್ಗೆ ಕಾರ್ಯಾಚರಣೆ ವೇಳೆ ಮಗುವಿನ ಜತೆ ಆಗಾಗ ಮೊಸಳೆಯು ಕಾಣಿಸಿಕೊಂಡಿತ್ತು. ದಾಂಡೇಲಿಯ ಗ್ರಾಮೀಣ ಠಾಣಾ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮುಳುಗು ತಜ್ಞರ ಸಹಕಾರದಲ್ಲಿ ಮಗುವಿನ ಮೃತದೇಹ ಪತ್ತೆ ಮಾಡಲಾಗಿದೆ. ಮುಳುಗು ತಜ್ಞರು ಮೊಸಳೆಯ ಬಾಯಿಯಿಂದ ಮಗುವಿನ ಮೃತದೇಹ ಬಿಡಿಸಿಕೊಂಡು ಬಂದಿದ್ದಾರೆ.
ಇನ್ನೂ ಆರೋಪಿಗಳಾದ ರವಿ ಕುಮಾರ್ ಹಾಗೂ ಸಾವಿತ್ರಿ ದಂಪತಿಯನ್ನು ದಾಂಡೇಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ದಾಂಡೇಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ. ಅಪ್ಪ-ಅಮ್ಮನ ಜಗಳದಲ್ಲಿ ಏನು ತಿಳಿಯದ ಮಗುವೊಂದು ಪ್ರಾಣವನ್ನೇ ಕಳೆದುಕೊಂಡಿದೆ.
Karwar Dandeli Wife throws 6 year old baby to water canal, body found. She was angry and frustrated by husbands behaviour, the baby was said to be mute.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm