ಬ್ರೇಕಿಂಗ್ ನ್ಯೂಸ್
05-05-24 02:44 pm HK News Desk ಕ್ರೈಂ
ಕಾರವಾರ, ಮೇ.5: ತಾಯಿಯೊಬ್ಬಳು ಕೋಪದಲ್ಲಿ ತನ್ನ ಮಗುವನ್ನೇ ಕಾಲುವೆಗೆ ಎಸೆದಿದ್ದಾಳೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಹಾಲಮಡ್ಡಿಯಲ್ಲಿ ಘಟನೆ ನಡೆದಿದೆ. ಸಾವಿತ್ರಿ ಎಂಬಾಕೆ ತನ್ನ ಆರು ವರ್ಷದ ಮಗನನ್ನು ನಾಲೆಗೆ ಎಸೆದಿದ್ದಾಳೆ. ವಿನೋದ್ (6) ಮೃತ ದುರ್ದೈವಿ.
ಮಗುವು ಮೂಕನಾಗಿದ್ದರಿಂದ ಸಾವಿತ್ರಿ ಹಾಗೂ ರವಿಕುಮಾರ್ ದಂಪತಿ ನಡುವೆ ಗಲಾಟೆ ನಡೆಯುತ್ತಿತ್ತು. ರವಿಕುಮಾರ್ ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಪ್ರತೀ ಬಾರಿ ಗಲಾಟೆಯಾದಾಗಲೂ ಮಗು ಸಾಯಲಿ ಎಂದು ಸಾವಿತ್ರಿಗೆ ಬೈಯ್ಯುತ್ತಿದ್ದ.

ನಿನ್ನೆ ಶನಿವಾರ ರಾತ್ರಿಯೂ ಸಹ ಸಾವಿತ್ರಿ ಹಾಗೂ ಪತಿ ರವಿಕುಮಾರ್ ಜತೆಗೆ ಜಗಳ ನಡೆದಿದೆ. ಪತಿ ಜತೆಗೆ ಗಲಾಟೆ ಆದಾಗ ಸಾವಿತ್ರಿ ಕೋಪದಲ್ಲಿ ಮಗುವನ್ನು ಎತ್ತಿಕೊಂಡು ಹೋಗಿ ನಾಲೆಗೆ ಎಸೆದಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಮಗುವನ್ನು ಹುಡುಕಾಡಲು ಮುಂದಾಗಿದ್ದಾರೆ.
ಆದರೆ ಮಗು ಸಿಗದಿದ್ದಾಗ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಹಾಲಮಡ್ಡಿಯಲ್ಲಿ ನಡೆದ ಶೋಧ ಕಾರ್ಯಾಚರಣೆ ವೇಳೆ ಮೃತದೇಹವು ಪತ್ತೆಯಾಗಿದೆ. ನಾಲೆಗೆ ಎಸೆಯಲ್ಪಟ್ಟಾಗ ಮೊಸಳೆಯೊಂದು ಮಗುವಿನ ಬಲಗೈ ಕಚ್ಚಿ ಎಳೆದು ಹೋಗಿತ್ತು. ಆರು ವರ್ಷದ ಗಂಡು ಮಗುವಿಗಾಗಿ ನಿನ್ನೆ ಶನಿವಾರ ರಾತ್ರಿಯಿಂದ ಶೋಧ ಕಾರ್ಯಾಚರಣೆ ಮುಂದುವರಿದಿತ್ತು.
ಭಾನುವಾರ ಬೆಳಗ್ಗೆ ಕಾರ್ಯಾಚರಣೆ ವೇಳೆ ಮಗುವಿನ ಜತೆ ಆಗಾಗ ಮೊಸಳೆಯು ಕಾಣಿಸಿಕೊಂಡಿತ್ತು. ದಾಂಡೇಲಿಯ ಗ್ರಾಮೀಣ ಠಾಣಾ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮುಳುಗು ತಜ್ಞರ ಸಹಕಾರದಲ್ಲಿ ಮಗುವಿನ ಮೃತದೇಹ ಪತ್ತೆ ಮಾಡಲಾಗಿದೆ. ಮುಳುಗು ತಜ್ಞರು ಮೊಸಳೆಯ ಬಾಯಿಯಿಂದ ಮಗುವಿನ ಮೃತದೇಹ ಬಿಡಿಸಿಕೊಂಡು ಬಂದಿದ್ದಾರೆ.
ಇನ್ನೂ ಆರೋಪಿಗಳಾದ ರವಿ ಕುಮಾರ್ ಹಾಗೂ ಸಾವಿತ್ರಿ ದಂಪತಿಯನ್ನು ದಾಂಡೇಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ದಾಂಡೇಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ. ಅಪ್ಪ-ಅಮ್ಮನ ಜಗಳದಲ್ಲಿ ಏನು ತಿಳಿಯದ ಮಗುವೊಂದು ಪ್ರಾಣವನ್ನೇ ಕಳೆದುಕೊಂಡಿದೆ.
Karwar Dandeli Wife throws 6 year old baby to water canal, body found. She was angry and frustrated by husbands behaviour, the baby was said to be mute.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm