ಬ್ರೇಕಿಂಗ್ ನ್ಯೂಸ್
07-05-24 02:57 pm Bangalore Correspondent ಕ್ರೈಂ
ಬೆಂಗಳೂರು, ಮೇ.07: ತನ್ನ ಅಕ್ಕನ ಮನೆಯಲ್ಲೇ ಹಣ ಹಾಗೂ ಚಿನ್ನಾಭರಣ ಕದ್ದಿದ್ದ ಆರೋಪಿ ತಂಗಿಯನ್ನ ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಉಮಾ ಎಂದು ಗುರುತಿಸಲಾಗಿದೆ. ಆರೋಪಿ ತನ್ನ ಅಕ್ಕ ಊರಿಗೆ ತೆರಳಿದ್ದ ವೇಳೆ ನಕಲಿ ಕೀ ಬಳಸಿ 52 ಲಕ್ಷ ರೂ. ಕ್ಯಾಶ್ ಹಾಗೂ 180 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದಳು. ಬಂಧಿತ ಆರೋಪಿಯಿಂದ 65 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಲಕ್ಷಾಂತರ ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ.
ಚೌಡೇಶ್ವರಿ ದೇವರ ಹಬ್ಬ ಎಂದು ಉಮಾಳ ಅಕ್ಕ ಊರಿಗೆ ಹೋಗಿದ್ದರು. ಹೋಗುವ ಮುನ್ನ ಸಂಬಂಧಿಗೆ ಮನೆಯ ಕೀ ಕೊಟ್ಟು ಹೋಗಿದ್ದರು. ನಂತರ ಕಳೆದ ಏ. 24ರ ರಾತ್ರಿ ಆಕೆಯ ಸಂಬಂಧಿ ಮನೆಗೆ ಮಲಗಲು ಹೋಗಿದ್ದಾಗ ನಕಲಿ ಕೀ ಬಳಸಿ ಕಳ್ಳತನ ಮಾಡಿದ್ದಳು. ಉಮಾ 182 ಗ್ರಾಂ ಚಿನ್ನಾಭರಣ ಹಾಗು 52 ಲಕ್ಷ ನಗದು ಕಳ್ಳತನ ಮಾಡಿದ್ದಳು.
ಮಂಡ್ಯ ಮೂಲದ ಆರೋಪಿ ಉಮಾ ಲಗ್ಗೆರೆಯಲ್ಲಿ ವಾಸವಾಗಿದ್ದಳು. ಬೆಂಗಳೂರಿನ ನಾಗವಾರದಲ್ಲಿ ಆಕೆಯ ಅಕ್ಕ ಹಾಗೂ ಬಾವ ವಾಸವಾಗಿದ್ದರು. ಉಮಾ ಸ್ತ್ರಿ ಶಕ್ತಿ ಸೇರಿದಂತೆ ಹಲವು ಕಡೆ ಸಾಲ ಮಾಡಿಕೊಂಡಿದ್ದಳು. ಇತ್ತೀಚೆಗೆ ಬಾವನ ಜತೆ ಕೂಡ ಹಣ ಕೇಳಿದ್ದಳು, ಆದರೆ ಆತ ಕೊಟ್ಟಿರಲಿಲ್ಲ.
ಇದೇ ಕಾರಣಕ್ಕೆ ಅಕ್ಕನ ಮನೆಯವರು ಊರಿಗೆ ಹೋದಾಗ, ನಕಲಿ ಕೀ ಬಳಸಿ ಚಿನ್ನ-ನಗದು ಎಗರಿಸಿದ್ದಾಳೆ. ಇತ್ತ ಕಳ್ಳತನ ಮಾಡಿದ ಬಳಿಕ ಖಾರದಪುಡಿ ಚೆಲ್ಲಿ ಸಾಕ್ಷಿ ನಾಶ ಮಾಡಿ ಕಾಲ್ಕಿತ್ತಿದ್ದಳು. ನಂತರ ಕಳ್ಳತನ ಕೇಸ್ನ ತನಿಖೆಗಿಳಿದ ಕೆಂಗೇರಿ ಪೊಲೀಸರು ಆರೋಪಿತೆಯನ್ನು ಬಂಧಿಸಿ ಆರು ದಿನಗಳ ಕಾಲ ಕಸ್ಟಿಡಿಗೆ ಪಡೆದಿದ್ದಾರೆ.
Crime Bangalore, younger sister robs cash and gold from of 52 lakhs from elder sisters house at kengeri has been arrested. The arrested has been identified as Uma
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
09-06-25 11:03 pm
Mangalore Correspondent
Mangalore BY Vijayendra, BJP: ಕಾಂಗ್ರೆಸ್ ಆಡಳಿತ...
09-06-25 09:56 pm
Suhas Shetty Murder, NIA, Mangalore: ಸುಹಾಸ್ ಶ...
08-06-25 10:51 pm
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
09-06-25 09:20 pm
HK News Desk
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm