ಬ್ರೇಕಿಂಗ್ ನ್ಯೂಸ್
07-05-24 02:57 pm Bangalore Correspondent ಕ್ರೈಂ
ಬೆಂಗಳೂರು, ಮೇ.07: ತನ್ನ ಅಕ್ಕನ ಮನೆಯಲ್ಲೇ ಹಣ ಹಾಗೂ ಚಿನ್ನಾಭರಣ ಕದ್ದಿದ್ದ ಆರೋಪಿ ತಂಗಿಯನ್ನ ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಉಮಾ ಎಂದು ಗುರುತಿಸಲಾಗಿದೆ. ಆರೋಪಿ ತನ್ನ ಅಕ್ಕ ಊರಿಗೆ ತೆರಳಿದ್ದ ವೇಳೆ ನಕಲಿ ಕೀ ಬಳಸಿ 52 ಲಕ್ಷ ರೂ. ಕ್ಯಾಶ್ ಹಾಗೂ 180 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದಳು. ಬಂಧಿತ ಆರೋಪಿಯಿಂದ 65 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಲಕ್ಷಾಂತರ ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ.
ಚೌಡೇಶ್ವರಿ ದೇವರ ಹಬ್ಬ ಎಂದು ಉಮಾಳ ಅಕ್ಕ ಊರಿಗೆ ಹೋಗಿದ್ದರು. ಹೋಗುವ ಮುನ್ನ ಸಂಬಂಧಿಗೆ ಮನೆಯ ಕೀ ಕೊಟ್ಟು ಹೋಗಿದ್ದರು. ನಂತರ ಕಳೆದ ಏ. 24ರ ರಾತ್ರಿ ಆಕೆಯ ಸಂಬಂಧಿ ಮನೆಗೆ ಮಲಗಲು ಹೋಗಿದ್ದಾಗ ನಕಲಿ ಕೀ ಬಳಸಿ ಕಳ್ಳತನ ಮಾಡಿದ್ದಳು. ಉಮಾ 182 ಗ್ರಾಂ ಚಿನ್ನಾಭರಣ ಹಾಗು 52 ಲಕ್ಷ ನಗದು ಕಳ್ಳತನ ಮಾಡಿದ್ದಳು.
ಮಂಡ್ಯ ಮೂಲದ ಆರೋಪಿ ಉಮಾ ಲಗ್ಗೆರೆಯಲ್ಲಿ ವಾಸವಾಗಿದ್ದಳು. ಬೆಂಗಳೂರಿನ ನಾಗವಾರದಲ್ಲಿ ಆಕೆಯ ಅಕ್ಕ ಹಾಗೂ ಬಾವ ವಾಸವಾಗಿದ್ದರು. ಉಮಾ ಸ್ತ್ರಿ ಶಕ್ತಿ ಸೇರಿದಂತೆ ಹಲವು ಕಡೆ ಸಾಲ ಮಾಡಿಕೊಂಡಿದ್ದಳು. ಇತ್ತೀಚೆಗೆ ಬಾವನ ಜತೆ ಕೂಡ ಹಣ ಕೇಳಿದ್ದಳು, ಆದರೆ ಆತ ಕೊಟ್ಟಿರಲಿಲ್ಲ.
ಇದೇ ಕಾರಣಕ್ಕೆ ಅಕ್ಕನ ಮನೆಯವರು ಊರಿಗೆ ಹೋದಾಗ, ನಕಲಿ ಕೀ ಬಳಸಿ ಚಿನ್ನ-ನಗದು ಎಗರಿಸಿದ್ದಾಳೆ. ಇತ್ತ ಕಳ್ಳತನ ಮಾಡಿದ ಬಳಿಕ ಖಾರದಪುಡಿ ಚೆಲ್ಲಿ ಸಾಕ್ಷಿ ನಾಶ ಮಾಡಿ ಕಾಲ್ಕಿತ್ತಿದ್ದಳು. ನಂತರ ಕಳ್ಳತನ ಕೇಸ್ನ ತನಿಖೆಗಿಳಿದ ಕೆಂಗೇರಿ ಪೊಲೀಸರು ಆರೋಪಿತೆಯನ್ನು ಬಂಧಿಸಿ ಆರು ದಿನಗಳ ಕಾಲ ಕಸ್ಟಿಡಿಗೆ ಪಡೆದಿದ್ದಾರೆ.
Crime Bangalore, younger sister robs cash and gold from of 52 lakhs from elder sisters house at kengeri has been arrested. The arrested has been identified as Uma
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm