ಬ್ರೇಕಿಂಗ್ ನ್ಯೂಸ್
07-05-24 09:48 pm Bangalore Correspondent ಕ್ರೈಂ
ಬೆಂಗಳೂರು, ಮೇ.7: ಖಾಸಗಿ ಕಂಪನಿಯಲ್ಲಿ ಡೈರೆಕ್ಟರ್ ಹುದ್ದೆಯಲ್ಲಿರುವ ಬೆಂಗಳೂರಿನ ಜಯನಗರ ನಿವಾಸಿ 52 ವರ್ಷದ ವ್ಯಕ್ತಿಯೊಬ್ಬರು ಷೇರು ಮಾರ್ಕೆಟಲ್ಲಿ ಹಣ ಹೂಡಿಕೆ ಮಾಡಿ, ಡಬಲ್ ಲಾಭ ಆಗುತ್ತೆ ಎಂಬ ವಂಚಕರ ಮಾತು ಕೇಳಿ ಬರೋಬ್ಬರಿ 5.2 ಕೋಟಿ ರೂಪಾಯಿ ಹಣವನ್ನು ಕಳಕೊಂಡಿದ್ದಾರೆ.
ಹಣ ಕಳಕೊಂಡ ವ್ಯಕ್ತಿ ಎಪ್ರಿಲ್ 8ರಂದು ಬೆಂಗಳೂರು ಸಿಇಎನ್ ಠಾಣೆಗೆ ದೂರು ನೀಡಿ, ತನಗಾದ ವಂಚನೆಯನ್ನು ಹೇಳಿಕೊಂಡಿದ್ದಾರೆ. ಮಾರ್ಚ್ 11ರಂದು ಇವರಿಗೆ ವಾಟ್ಸಪ್ ಮೆಸೇಜ್ ಒಂದು ಬಂದಿತ್ತು. ಸ್ಟಾಕ್ ಮಾರ್ಕೆಟ್ ಹೂಡಿಕೆ ಬಗ್ಗೆ ಇದ್ದ ಮೆಸೇಜ್ ನಲ್ಲಿ bys.app.com ಎನ್ನುವ ವೆಬ್ ಸೈಟ್ ಲಿಂಕ್ ಕೂಡ ಇತ್ತು. ಅದಕ್ಕೆ ಕ್ಲಿಕ್ ಮಾಡಿದ ಕೂಡಲೇ ಇವರ ನಂಬರ್ Y-5 Ever Core Financial Leader ಎಂಬ ಹೆಸರಿನಲ್ಲಿದ್ದ ವಾಟ್ಸಪ್ ಗ್ರೂಪ್ ಒಂದಕ್ಕೆ ಸೇರ್ಪಡೆಯಾಗಿತ್ತು. ಅದರಲ್ಲಿ ಅಂದಾಜು 160 ಮಂದಿ ಸದಸ್ಯರಿದ್ದರು.
ಇದೇ ವೇಳೆ, ಅಪರಿಚಿತ ವ್ಯಕ್ತಿಗಳು ಕರೆ ಮಾಡಿ ನೀವು ಅದರಲ್ಲಿ ಕೊಟ್ಟಿರುವ ಲಿಂಕ್ ಒತ್ತಿ ಸ್ಟಾಕ್ ಮಾರ್ಕೆಟ್ ಏಪ್ ಡೌನ್ಲೋಡ್ ಮಾಡಿಕೊಳ್ಳುವಂತೆ ಹೇಳಿದ್ದರು. ಏಪ್ ಡೌನ್ಲೋಡ್ ಮಾಡಿಕೊಂಡಿದ್ದ ವ್ಯಕ್ತಿ, ಬಳಿಕ ಅವರು ಹೇಳಿದಂತೆ ಸ್ಟಾಕ್ ಮಾರ್ಕೆಟ್ ಹೆಸರಲ್ಲಿ ಹೂಡಿಕೆ ಮಾಡಲು ಮುಂದಾಗಿದ್ದರು. ಕೆಲವೇ ವಾರಗಳಲ್ಲಿ 5.2 ಕೋಟಿಯಷ್ಟು ರೂಪಾಯಿ ಹಣವನ್ನು ತನ್ನ ವಿವಿಧ ಐದು ಬ್ಯಾಂಕ್ ಖಾತೆಗಳಿಂದ ಹೂಡಿಕೆ ಮಾಡಿದ್ದರು. ಮತ್ತಷ್ಟು ಹಣವನ್ನು ಅದರಲ್ಲಿ ಹೂಡಿಕೆ ಮಾಡಲು ಮುಂದಾಗಿದ್ದರು. ಮಾರ್ಕೆಟ್ ಅಪ್ ಆಗಿರುವುದನ್ನು ತಿಳಿದ ಈ ವ್ಯಕ್ತಿ ಎಪ್ರಿಲ್ 2ರಂದು ಒಂದಷ್ಟು ಹಣವನ್ನು ಮರಳಿ ಹಿಂಪಡೆಯಲು ಯತ್ನಿಸಿದ್ದು, ಆದರೆ ಹಣ ಹಿಂಪಡೆಯುವುದು ಸಾಧ್ಯವಾಗಲಿಲ್ಲ. ಬೇರೆಯವರಲ್ಲಿ ಈ ಬಗ್ಗೆ ಕೇಳಿದಾಗ, ಅದೇನೋ ಮೋಸದ ಆಟ ಎನ್ನುವ ವಿಚಾರ ಗೊತ್ತಾಗಿದೆ. ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿ ಮೋಸ ಹೋಗಿದ್ದೇನೆಂದು ತಿಳಿದು ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ.
ಕೋಟ್ಯಂತರ ರೂಪಾಯಿ ಹಣ ಕಳಕೊಂಡಿದ್ದರಿಂದ ಇಡಿ ಮತ್ತು ಐಟಿ ಅಧಿಕಾರಿಗಳು ಇದರ ಬಗ್ಗೆ ತನಿಖೆಗೆ ಮುಂದಾಗುವ ಸಾಧ್ಯತೆಯಿದೆ. ಅಲ್ಲದೆ, ಮೋಸಗಾರರ ಬ್ಯಾಂಕ್ ಖಾತೆಗಳನ್ನು ಜಪ್ತಿ ಮಾಡಿ ಹಣವನ್ನು ಮುಟ್ಟುಗೋಲು ಹಾಕಲು ಪೊಲೀಸರು ಚಿಂತನೆ ನಡೆಸಿದ್ದಾರೆ. ಸ್ಟಾಕ್ ಮಾರ್ಕೆಟ್ ಹೂಡಿಕೆ ಎಂಬ ಹೆಸರಲ್ಲಿ ವಾಟ್ಸಪ್ ನಲ್ಲಿ ಮೆಸೇಜ್ ಕಳುಹಿಸುವುದು, ಕರೆ ಮಾಡಿ ಒತ್ತಾಯ ಪಡಿಸುವ ಕೃತ್ಯಗಳು ಹೆಚ್ಚಿದ್ದು, ವಿದ್ಯಾವಂತರೇ ಈ ಮೋಸದ ಜಾಲಕ್ಕೆ ಬಲಿ ಬೀಳುತ್ತಿದ್ದಾರೆ.
In a recent case of cyber fraud, a 52-year-old Bengaluru businessman, identified as Sharath (name changed), residing in Jayanagar, Bengaluru fell victim to a scam involving the stock market, resulting in a loss of Rs 5.2 crore, according to a report.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm