ಬ್ರೇಕಿಂಗ್ ನ್ಯೂಸ್
08-05-24 04:35 pm Bengaluru Correspondent ಕ್ರೈಂ
ಬೆಂಗಳೂರು, ಮೇ 8: ಪೆನ್ ಡ್ರೈವ್ ಕೇಸಿಗೆ ಸಂಬಂಧಿಸಿ ಸಂತ್ರಸ್ತ ಮಹಿಳೆಯ ಅಪಹರಿಸಿದ ಆರೋಪದಲ್ಲಿ ಬಂಧಿತರಾಗಿರುವ ಜೆಡಿಎಸ್ ಮುಖಂಡ ಹಾಗೂ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರಿಗೆ ನ್ಯಾಯಾಲಯ ಮೇ 14ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದು ಪರಪ್ಪನ ಅಗ್ರಹಾರ ಸೇರುವುದು ಖಚಿತವಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ರೇವಣ್ಣರನ್ನು ಎರಡು ದಿನಗಳ ಹಿಂದೆ ಬಂಧಿಸಿದ್ದ ಎಸ್ಐಟಿ ಪೊಲೀಸರು ಮೇ 8ರ ವರೆಗೆ ಕಸ್ಟಡಿಗೆ ಪಡೆದಿದ್ದರು. ಇಂದು ಮತ್ತೆ ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ರವೀಂದ್ರಕುಮಾರ್ ಬಿ. ಕಟ್ಟಿಮನಿ ಮುಂದೆ ಹಾಜರುಪಡಿಸಿದರು. ರೇವಣ್ಣ ತನಿಖೆಗೆ ಸಹಕರಿಸುತ್ತಿಲ್ಲ. ಹೀಗಾಗಿ, ಅವರನ್ನು ಮತ್ತೆ ಎಸ್ಐಟಿ ವಶಕ್ಕೆ ನೀಡಬೇಕು ಎಂದು ವಿಶೇಷ ಸರ್ಕಾರಿ ಅಭಿಯೋಜಕ ಬಿ.ಎನ್ ಜಗದೀಶ್ ಎಸ್ಐಟಿ ಪರವಾಗಿ ಅಹವಾಲು ಸಲ್ಲಿಸಿದರು. ಇದಕ್ಕೆ ಒಪ್ಪದ ನ್ಯಾಯಾಧೀಶರು ರೇವಣ್ಣರನ್ನು ಮೇ 14ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಜೈಲಿಗೆ ಕಳಿಸಿಕೊಟ್ಟರು.
ರೇವಣ್ಣ ಪರ ವಕೀಲ ಮೂರ್ತಿ ಡಿ. ನಾಯ್ಕ್ ವಾದಕ್ಕೆ ಪುರಸ್ಕಾರ ಸಿಗಲಿಲ್ಲ. ನ್ಯಾಯಾಂಗ ಬಂಧನ ವಿಧಿಸಿರುವ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು, ಪರಪ್ಪನ ಅಗ್ರಹಾರ ಜೈಲಿಗೆ ಹಾಕಲಿದ್ದಾರೆ ಎಂದು ತಿಳಿದುಬಂದಿದೆ.
ಇದೇ ವೇಳೆ, ಎಚ್.ಡಿ ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿ ನ್ಯಾಯಾಲಯ ಮೇ 9ರಂದು ವಿಚಾರಣೆ ನಡೆಸಲಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಜಾಮೀನು ಅರ್ಜಿಯ ವಿಚಾರಣೆಯನ್ನು 9ಕ್ಕೆ ಮುಂದೂಡಿದ್ದಾರೆ.
In more trouble for Karnataka MLA HD Revanna, he has been sent to judicial custody till May 14 after the Special Investigation Team's custody in the case of allegedly kidnapping a woman ended on Wednesday.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm