ಬ್ರೇಕಿಂಗ್ ನ್ಯೂಸ್
10-05-24 10:16 am HK News Desk ಕ್ರೈಂ
ಕೊಡಗು, ಮೇ.10: ಇಡೀ ಕರ್ನಾಟಕವನ್ನೇ ಬೆಚ್ಚಿಬೀಳಿಸೋ ಭೀಕರ ಕೊಲೆ ಕೊಡಗಿನ ಸೋಮವಾರಪೇಟೆಯ ಸೂರ್ಲಬ್ಬಿ ಗ್ರಾಮದಲ್ಲಿ ನಡೆದಿದೆ. ಇಡೀ ಎಸ್ ಎಸ್ ಎಲ್ಸಿ ಪರೀಕ್ಷೆಯಲ್ಲಿ ಶಾಲೆಗೆ 100% ಫಲಿತಾಂಶ ತಂದುಕೊಟ್ಟಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬಾಲಕಿಯ ತಲೆಯನ್ನೇ ಕತ್ತರಿಸಿ ರುಂಡ-ಮುಂಡ ಬೇರ್ಪಡಿಸಿ ಕೀಚಕ ವಿಕೃತಿ ಮೆರೆದಿದ್ದಾನೆ.
ಮೃತ ವಿದ್ಯಾರ್ಥಿನಿ ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯಲ್ಲಿ 2023-24 ನೇ ಸಾಲಿನಲ್ಲಿ ಎಸ್ ಎಸ್ ಎಲ್ಸಿ ವ್ಯಾಸಂಗ ಮಾಡುತ್ತಿದ್ದಳು. ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯಲ್ಲಿದ್ದ ಓರ್ವ ವಿದ್ಯಾರ್ಥಿನಿ ತೇರ್ಗಡೆ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಪಾಸ್ ಆಗಿದ್ದ ಪರಿಣಾಮ ಶೇಕಡಾ 100 ರಷ್ಟು ಫಲಿತಾಂಶ ಲಭ್ಯವಾಗಿತ್ತು. ಬೆಳಗ್ಗೆ SSLC ಪಾಸ್ ಆಗಿದ್ದ ಖುಷಿಯಲ್ಲಿದ್ದ ಸೂರ್ಲಬ್ಬಿ ಗ್ರಾಮದ ಬಾಲಕಿಯನ್ನು 35 ವರ್ಷದ ಓಂಕಾರಪ್ಪ ಎಂಬಾತ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.
ಇನ್ನು, ಎಸ್ ಎಸ್ ಎಲ್ಸಿ ಪಾಸ್ ಆಗಿದ್ದ ವಿದ್ಯಾರ್ಥಿನಿಗೆ ಆರೋಪಿಯೊಂದಿಗೆ ನಿನ್ನೆ ನಿಶ್ಚಿತಾರ್ಥ ಫಿಕ್ಸ್ ಮಾಡಿದ್ದರಂತೆ. ಆದರೆ ಪೊಲೀಸರು ಮಧ್ಯ ಪ್ರವೇಶ ಮಾಡಿ ಅಪ್ರಾಪ್ತ ಬಾಲಕಿ ಆಗಿರುವ ಕಾರಣ ನಿಶ್ಚಿತಾರ್ಥ ನಿಲ್ಲಿಸಿದ್ದಂತೆ. ಘಟನೆ ಬಳಿಕ ಬಾಲಕಿಯನ್ನು ಆಕೆಯ ಪೋಷಕರು ಮನೆಗೆ ವಾಪಸ್ ಕರೆ ತಂದಿದ್ದರಂತೆ. ಆರೋಪಿ ಕೂಡ ಮನೆಗೆ ವಾಪಸ್ ಆಗಿದ್ದನಂತೆ. ಇದೇ ಸಿಟ್ಟಿನಲ್ಲಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.
ಘಟನೆ ಬಳಿಕ ನಿನ್ನೆ ಸಂಜೆ ಮನೆಗೆ ಬಂದಿದ್ದ ಆರೋಪಿ ಬಾಲಕಿಯೊಂದಿಗೆ ಮಾತನಾಡಬೇಕು ಎಂದು ಪೋಷಕರಿಗೆ ಹೇಳಿ ಮನೆಯಿಂದ ಸ್ವಲ್ಪ ದೂರಕ್ಕೆ ಕರೆದುಕೊಂಡು ಹೋಗಿದ್ದನಂತೆ. ಈ ವೇಳೆ ನಿರ್ಜನ ಪ್ರದೇಶದಲ್ಲಿ ತಲೆ ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿರುವ ಆರೋಪ ಕೇಳಿ ಬಂದಿದೆ.
ವಿದ್ಯಾರ್ಥಿನಿ ತಲೆ ಕತ್ತರಿಸಿ ರುಂಡ ಮುಂಡ ಬೇರೆ ಮಾಡಿ ರುಂಡ ಒಂದು ಕಡೆ ಮುಂಡ ಒಂದು ಕಡೆ ಬಿಸಾಡಿ ಆರೋಪಿ ಎಸ್ಕೇಪ್ ಆಗಿದ್ದಾನಂತೆ. ಸದ್ಯ ಅಪ್ರಾಪ್ತ ಬಾಲಕಿ ಹತ್ಯೆ ಬಗ್ಗೆ ಕೊಡಗು ಪೋಲಿಸರು ಬಿರುಸಿನ ತನಿಖೆ ಕೈಗೊಂಡಿದ್ದಾರೆ. ಸ್ಥಳಕ್ಕೆ ಕೊಡಗು ಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಬಾಲಕಿಯ ಮೃತದೇಹ ಮಡಿಕೇರಿ ಜಿಲ್ಲಾಸ್ಪತ್ರೆಗೆ ಶವಾಗಾರಕ್ಕೆ ಶಿಫ್ಟ್ ಮಾಡಿದ್ದು, ಮರಣೋತ್ತರ ಬಳಿಕ ಮೃತದೇಹವನ್ನು ಪೋಷಕರಿಗೆ ಹಸ್ತಾಂತರ ಮಾಡುವ ಸಾಧ್ಯತೆ ಇದೆ.
A tenth grade girl was brutally murdered by a 30-year-old man in Kodagu. In the heinous incident, the man cut off the victim's head and threw away her body. The incident was reported at Surlabbi under Madikeri Taluk in Karnataka's Kodagu district.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
24-01-26 11:18 pm
Mangaluru Staffer
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm