ಬ್ರೇಕಿಂಗ್ ನ್ಯೂಸ್
10-05-24 11:53 am Mangalore Correspondent ಕ್ರೈಂ
ಮಂಗಳೂರು, ಮೇ.10: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ನನ್ನು ಎನ್ಐಎ ಅಧಿಕಾರಿಗಳು ಕಡೆಗೂ ಸಕಲೇಶಪುರದಲ್ಲಿ ಪತ್ತೆ ಮಾಡಿದ್ದಾರೆ. ಸಕಲೇಶಪುರ ಬಳಿಯ ಆನೆಮಹಲ್ ಎಂಬಲ್ಲಿನ ಕಾಫಿ ಎಸ್ಟೇಟಿನಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ಮುಸ್ತಫಾ ಪೈಚಾರ್ ನನ್ನು ಎತ್ತೊಯ್ದಿದ್ದಾರೆ.
ಆನೆಮಹಲ್ ಸಿರಾಜ್ ಎಂಬಾತನ ಜೊತೆಗೆ ಕಾಫಿ ಎಸ್ಟೇಟ್ ನಲ್ಲಿ ಕೆಲಸ ಮಾಡಿಕೊಂಡಿದ್ದ. ಈ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ಬುಧವಾರ ರಾತ್ರಿ ಕಾರ್ಯಾಚರಣೆ ನಡೆಸಿ ಸಿರಾಜ್, ಮುಸ್ತಫಾ ಪೈಚಾರ್ ಮತ್ತು ಇವರ ಜೊತೆಗಿದ್ದ ಸೋಮವಾರ ಪೇಟೆ ಮೂಲದ ಇಲಿಯಾಸ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.
ಮುಸ್ತಫಾ ಪೈಚಾರ್ ಸುಳ್ಯದ ಶಾಂತಿನಗರ ನಿವಾಸಿಯಾಗಿದ್ದು, ಪ್ರವೀಣ್ ನೆಟ್ಟಾರು ಕೊಲೆಯ ಬಳಿಕ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಆನಂತರ, ಇದೇ ಜಾಗದಲ್ಲಿ ಕಾರ್ಮಿಕನಾಗಿ ಕೆಲಸ ಮಾಡಿಕೊಂಡಿದ್ದ ಎನ್ನುವ ಮಾಹಿತಿ ತಿಳಿದುಬಂದಿದೆ. ಆರೋಪಿಗೆ ಆಶ್ರಯ ನೀಡಿದ್ದಕ್ಕಾಗಿ ಸಿರಾಜ್ ಮತ್ತು ಇಲಿಯಾಸ್ ನನ್ನು ವಶಕ್ಕೆ ಪಡೆಯಲಾಗಿದೆ. ಮುಸ್ತಫಾ ಪೈಚಾರ್ ಪಿಎಫ್ಐ ಸಂಘಟನೆಯ ಮುಖಂಡನಾಗಿದ್ದು, ಪ್ರವೀಣ್ ನೆಟ್ಟಾರು ಕೊಲೆಗೆ ಸಂಚು ನಡೆಸಿದವರಲ್ಲಿ ಪ್ರಮುಖನಾಗಿದ್ದ. ಈತನ ಪತ್ತೆಗಾಗಿ ಎನ್ಐಎ 5 ಲಕ್ಷ ಬಹುಮಾನ ಘೋಷಣೆ ಮಾಡಿತ್ತು. ಪ್ರಕರಣ ಸಂಬಂಧಿಸಿ ಹತ್ತಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿತ್ತು.
NIA arrests Mustafa Paichar, key accused in BJP activist Praveen Nettaru sullia murder. The accused, Mustafa Paichar was arrested by NIA officials from his hideout in Karnataka, said sources. Praveen Nettaru was hacked to death by two bike-borne attackers on July 26, 2022, in Bellare village of Dakshina Kannada district in Karnataka
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm