ಬ್ರೇಕಿಂಗ್ ನ್ಯೂಸ್
10-05-24 11:53 am Mangalore Correspondent ಕ್ರೈಂ
ಮಂಗಳೂರು, ಮೇ.10: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ನನ್ನು ಎನ್ಐಎ ಅಧಿಕಾರಿಗಳು ಕಡೆಗೂ ಸಕಲೇಶಪುರದಲ್ಲಿ ಪತ್ತೆ ಮಾಡಿದ್ದಾರೆ. ಸಕಲೇಶಪುರ ಬಳಿಯ ಆನೆಮಹಲ್ ಎಂಬಲ್ಲಿನ ಕಾಫಿ ಎಸ್ಟೇಟಿನಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ಮುಸ್ತಫಾ ಪೈಚಾರ್ ನನ್ನು ಎತ್ತೊಯ್ದಿದ್ದಾರೆ.
ಆನೆಮಹಲ್ ಸಿರಾಜ್ ಎಂಬಾತನ ಜೊತೆಗೆ ಕಾಫಿ ಎಸ್ಟೇಟ್ ನಲ್ಲಿ ಕೆಲಸ ಮಾಡಿಕೊಂಡಿದ್ದ. ಈ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ಬುಧವಾರ ರಾತ್ರಿ ಕಾರ್ಯಾಚರಣೆ ನಡೆಸಿ ಸಿರಾಜ್, ಮುಸ್ತಫಾ ಪೈಚಾರ್ ಮತ್ತು ಇವರ ಜೊತೆಗಿದ್ದ ಸೋಮವಾರ ಪೇಟೆ ಮೂಲದ ಇಲಿಯಾಸ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.
ಮುಸ್ತಫಾ ಪೈಚಾರ್ ಸುಳ್ಯದ ಶಾಂತಿನಗರ ನಿವಾಸಿಯಾಗಿದ್ದು, ಪ್ರವೀಣ್ ನೆಟ್ಟಾರು ಕೊಲೆಯ ಬಳಿಕ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಆನಂತರ, ಇದೇ ಜಾಗದಲ್ಲಿ ಕಾರ್ಮಿಕನಾಗಿ ಕೆಲಸ ಮಾಡಿಕೊಂಡಿದ್ದ ಎನ್ನುವ ಮಾಹಿತಿ ತಿಳಿದುಬಂದಿದೆ. ಆರೋಪಿಗೆ ಆಶ್ರಯ ನೀಡಿದ್ದಕ್ಕಾಗಿ ಸಿರಾಜ್ ಮತ್ತು ಇಲಿಯಾಸ್ ನನ್ನು ವಶಕ್ಕೆ ಪಡೆಯಲಾಗಿದೆ. ಮುಸ್ತಫಾ ಪೈಚಾರ್ ಪಿಎಫ್ಐ ಸಂಘಟನೆಯ ಮುಖಂಡನಾಗಿದ್ದು, ಪ್ರವೀಣ್ ನೆಟ್ಟಾರು ಕೊಲೆಗೆ ಸಂಚು ನಡೆಸಿದವರಲ್ಲಿ ಪ್ರಮುಖನಾಗಿದ್ದ. ಈತನ ಪತ್ತೆಗಾಗಿ ಎನ್ಐಎ 5 ಲಕ್ಷ ಬಹುಮಾನ ಘೋಷಣೆ ಮಾಡಿತ್ತು. ಪ್ರಕರಣ ಸಂಬಂಧಿಸಿ ಹತ್ತಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿತ್ತು.
NIA arrests Mustafa Paichar, key accused in BJP activist Praveen Nettaru sullia murder. The accused, Mustafa Paichar was arrested by NIA officials from his hideout in Karnataka, said sources. Praveen Nettaru was hacked to death by two bike-borne attackers on July 26, 2022, in Bellare village of Dakshina Kannada district in Karnataka
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm