ಬ್ರೇಕಿಂಗ್ ನ್ಯೂಸ್
10-05-24 12:44 pm HK News Desk ಕ್ರೈಂ
ಮಡಿಕೇರಿ, ಮೇ.10: ಸೈಬರ್ ವಂಚಕರ ಜಾಲದ ಬೆನ್ನತ್ತಿದ ಕೇರಳದ ಮಲಪ್ಪುರಂ ಪೊಲೀಸರು ಕೊಡಗಿನ ಮಡಿಕೇರಿಯಲ್ಲಿ ದೆಹಲಿ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದು, ಆತನಿಂದ 40 ಸಾವಿರ ಸಿಮ್ ಕಾರ್ಡ್ ಮತ್ತು 180 ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ಮಡಿಕೇರಿಯ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಅಬ್ದುಲ್ ರೋಷನ್ (46) ಬಂಧಿತ ವ್ಯಕ್ತಿ. ಮಲಪ್ಪುರಂ ಜಿಲ್ಲೆಯ ವ್ಯಕ್ತಿಯೊಬ್ಬರು 1.8 ಕೋಟಿ ವಂಚನೆಯಾದ ಬಗ್ಗೆ ದೂರು ದಾಖಲು ಮಾಡಿದ್ದರು. ಫೇಸ್ಬುಕ್ ನಲ್ಲಿ ಸ್ಟಾಕ್ ಮಾರ್ಕೆಟ್ ಹೂಡಿಕೆ ಬಗ್ಗೆ ತಿಳಿದು ಅದರಲ್ಲಿದ್ದ ಲಿಂಕ್ ಮೇಲೆ ಒತ್ತಿದ ಆ ವ್ಯಕ್ತಿ, ವಂಚಕರ ಸೂಚನೆಯಂತೆ ಸ್ಟಾಕ್ ಮಾರ್ಕೆಟ್ ಏಪ್ ಡೌನ್ಲೋಡ್ ಮಾಡಿ 1.8 ಕೋಟಿ ಹೂಡಿಕೆ ಮಾಡಿದ್ದರು. ಆದರೆ ಹಣವನ್ನು ಹಿಂಪಡೆಯುವುದು ಸಾಧ್ಯವಾಗದೆ ಮೋಸಗೊಂಡಿದ್ದನ್ನು ತಿಳಿದು ಪೊಲೀಸ್ ದೂರು ನೀಡಿದ್ದರು.
ಆನ್ಲೈಲ್ ಸ್ಟಾಕ್ ಮಾರ್ಕೆಟ್ ವೆಬ್ ಸೈಟ್ ಹೆಸರಲ್ಲಿ ಗ್ಯಾಂಗ್ ಒಂದು ಸಕ್ರಿಯವಾಗಿರುವುದನ್ನು ಪತ್ತೆ ಮಾಡಿದ ಮಲಪ್ಪುರಂ ಪೊಲೀಸರು ವಂಚಕರು ಉಪಯೋಗಿಸುತ್ತಿದ್ದ ಸಿಮ್ ಕಾರ್ಡ್ ಬೆನ್ನತ್ತಿ ಕಾರ್ಯಾಚರಣೆ ನಡೆಸಿದ್ದರು. ಮಡಿಕೇರಿಯಲ್ಲಿ ನೆಲೆಸಿದ್ದ ಅಬ್ದುಲ್ ರೋಷನ್, ಬೇರೆ ಬೇರೆ ಟೆಲಿಫೋನ್ ಕಂಪನಿಗಳ ಹೆಸರಲ್ಲಿ ನಕಲಿ ಸಿಮ್ ಕಾರ್ಡ್ ಗಳನ್ನು ಮಾಡಿಸಿ ಸೈಬರ್ ವಂಚಕರಿಗೆ ಪೂರೈಸುತ್ತಿದ್ದುದನ್ನು ಪತ್ತೆ ಮಾಡಿದ್ದಾರೆ. ಆತನ ಬಳಿಯಿದ್ದ 40 ಸಾವಿರ ಸಿಮ್ ಕಾರ್ಡ್, 180 ಮೊಬೈಲ್ ಫೋನ್ ಮತ್ತು ಆರು ಬಯೋಮೆಟ್ರಿಕ್ ಸ್ಕ್ಯಾನರ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಬ್ದುಲ್ ರೋಷನ್ ಮಡಿಕೇರಿಯಲ್ಲಿದ್ದು ಟೆಲಿಫೋನ್ ಕಂಪನಿಯೊಂದರ ಡಿಸ್ಟ್ರಿಬ್ಯೂಟರ್ ಆಗಿ ಕೆಲಸ ಮಾಡಿಕೊಂಡಿದ್ದ. ಇದರ ಜೊತೆಗೆ ನಕಲಿ ಸಿಮ್ ಗಳನ್ನು ತಯಾರಿಸಿ, ಸೈಬರ್ ವಂಚಕರಿಗೆ ಪೂರೈಸುವ ಕೆಲಸ ಮಾಡುತ್ತಿದ್ದ. ಸೈಬರ್ ವಂಚಕರು ಈ ಸಿಮ್ ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ಖಾತೆಗಳನ್ನ ತೆರೆಯಲು ಬಳಸುತ್ತಿದ್ದರು. ಸಿಮ್ ಮೂಲಕ ಓಟಿಪಿ ಪಡೆಯುವುದು ಬಿಟ್ಟರೆ ಬೇರ ಉದ್ದೇಶಕ್ಕೆ ಬಳಸುತ್ತಿರಲಿಲ್ಲ. ಅಬ್ದುಲ್ ರೋಷನ್ ಮಡಿಕೇರಿಯಲ್ಲಿ ಮೊಬೈಲ್ ಅಂಗಡಿ ಹೊಂದಿದ್ದು, ಅಲ್ಲಿಗೆ ಬರುತ್ತಿದ್ದ ಗ್ರಾಹಕರ ಬೆರಳಚ್ಚು ಪಡೆದು ಅವರಿಗೆ ತಿಳಿಯದಂತೆ ಸಿಮ್ ಕಾರ್ಡ್ ಗಳನ್ನು ಚಾಲ್ತಿಗೊಳಿಸುತ್ತಿದ್ದ. ಆ ಸಿಮ್ ಕಾರ್ಡ್ ಗಳನ್ನು ಸೈಬರ್ ವಂಚಕರಿಗೆ ಮಾರಾಟ ಮಾಡುತ್ತಿದ್ದ.
ನಕಲಿ ಸಿಮ್ ಕಾರ್ಡ್ ಮಾರಾಟದ ಅತಿ ದೊಡ್ಡ ಜಾಲ ಈ ಮೂಲಕ ಬೆಳಕಿಗೆ ಬಂದಿದ್ದು, ನಾವಿನ್ನೂ ಸೈಬರ್ ವಂಚಕರ ಜಾಲವನ್ನು ತಿಳಿದುಕೊಂಡಿಲ್ಲ. ಅಬ್ದುಲ್ ರೋಷನ್ ಮೂಲಕ ಕೆಲವು ಮಾಹಿತಿಗಳನ್ನು ಪಡೆದಿದ್ದು, ತನಿಖೆ ಮುಂದುವರಿಸುತ್ತೇವೆ. ಸೈಬರ್ ವಂಚನೆ ಜಾಲದಲ್ಲಿ ದೇಶದ ಹಲವಾರು ಕಡೆಯಲ್ಲಿ ನೆಟ್ವರ್ಕ್ ಇದ್ದು, ಹಲವು ಮಂದಿ ದೇಶ ಮತ್ತು ವಿದೇಶದಲ್ಲಿದ್ದು ಸಕ್ರಿಯರಾಗಿದ್ದಾರೆ ಎಂದು ಮಲಪ್ಪುರಂ ಎಸ್ಪಿ ಶಶಿಧರನ್ ಹೇಳಿದ್ದಾರೆ. ಸೈಬರ್ ವಂಚನೆ ಜಾಲದ ಬಗ್ಗೆ ಮಲಪ್ಪುರಂ ಎಸ್ಪಿ, ಡಿಸಿಆರ್ ಬಿ ಡಿವೈಎಸ್ಪಿ ವಿ.ಎಸ್.ಶೈಜು ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿದ್ದರು. ಮಾರ್ಚ್ 10ರಂದು ಮಲಪ್ಪುರಂ ಜಿಲ್ಲೆಯ ವೆಂಗರ ನಿವಾಸಿ 1.8 ಕೋಟಿ ವಂಚನೆಯಾದ ಬಗ್ಗೆ ನೀಡಿದ ದೂರನ್ನು ಆಧರಿಸಿ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
The Cyber Crime unit of Malappuram Police seized over 40,000 SIM cards, 180 mobile phones and six biometric readers from a Karnataka native understood to be a key accused in an online racket. Abdul Roshan (46) was taken into custody Wednesday night from his house at Madikeri by a special team led by DCRB (District Crime Records Bureau) DySP V S Shaju.
20-05-24 07:03 pm
Bangalore Correspondent
Zip line accident at Jungle Trailz Bangalore:...
20-05-24 05:53 pm
Bangalore rave party raid, drugs, actors: ಇಲೆ...
20-05-24 01:44 pm
Charmadi Ghat, Blocked: ಚಾರ್ಮಾಡಿ ಘಾಟಿಯಲ್ಲಿ ಕೆ...
20-05-24 12:38 pm
ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬೆಂಕಿ ; ಬ...
19-05-24 11:54 am
20-05-24 08:15 pm
HK News Desk
Ebrahim Raisi dead in helicopter crash: ಹೆಲಿಕ...
20-05-24 11:35 am
ಬ್ಯಾಂಕ್ ಖಾತೆಗೆ ಬರೋಬ್ಬರಿ 9900 ಕೋಟಿ ಹಣ ಜಮೆ ; ಮ...
19-05-24 04:30 pm
Priyanka Gandhi, Rahul Gandhi: ರಾಹುಲ್ ಗೆ ದೇಶದ...
18-05-24 10:18 pm
Pavithra Jayaram, Chandrakanth suicide: ಸೀರಿಯ...
18-05-24 09:15 pm
20-05-24 10:43 pm
Mangalore Correspondent
Mangalore Rain News: ಮಂಗಳೂರಿನಲ್ಲಿ ದಿಢೀರ್ ಬಿರು...
20-05-24 10:34 pm
Mangalore crime, CCB Police, Talapady: ಗಡಿಭಾಗ...
20-05-24 10:17 pm
Mangalore News, Rain, Harekala girl death: ಹ...
20-05-24 09:56 pm
Dr Dhananjaya Sarji campaigns in Bantwal, Man...
20-05-24 09:39 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm