ಬ್ರೇಕಿಂಗ್ ನ್ಯೂಸ್
10-05-24 12:44 pm HK News Desk ಕ್ರೈಂ
ಮಡಿಕೇರಿ, ಮೇ.10: ಸೈಬರ್ ವಂಚಕರ ಜಾಲದ ಬೆನ್ನತ್ತಿದ ಕೇರಳದ ಮಲಪ್ಪುರಂ ಪೊಲೀಸರು ಕೊಡಗಿನ ಮಡಿಕೇರಿಯಲ್ಲಿ ದೆಹಲಿ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದು, ಆತನಿಂದ 40 ಸಾವಿರ ಸಿಮ್ ಕಾರ್ಡ್ ಮತ್ತು 180 ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ಮಡಿಕೇರಿಯ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಅಬ್ದುಲ್ ರೋಷನ್ (46) ಬಂಧಿತ ವ್ಯಕ್ತಿ. ಮಲಪ್ಪುರಂ ಜಿಲ್ಲೆಯ ವ್ಯಕ್ತಿಯೊಬ್ಬರು 1.8 ಕೋಟಿ ವಂಚನೆಯಾದ ಬಗ್ಗೆ ದೂರು ದಾಖಲು ಮಾಡಿದ್ದರು. ಫೇಸ್ಬುಕ್ ನಲ್ಲಿ ಸ್ಟಾಕ್ ಮಾರ್ಕೆಟ್ ಹೂಡಿಕೆ ಬಗ್ಗೆ ತಿಳಿದು ಅದರಲ್ಲಿದ್ದ ಲಿಂಕ್ ಮೇಲೆ ಒತ್ತಿದ ಆ ವ್ಯಕ್ತಿ, ವಂಚಕರ ಸೂಚನೆಯಂತೆ ಸ್ಟಾಕ್ ಮಾರ್ಕೆಟ್ ಏಪ್ ಡೌನ್ಲೋಡ್ ಮಾಡಿ 1.8 ಕೋಟಿ ಹೂಡಿಕೆ ಮಾಡಿದ್ದರು. ಆದರೆ ಹಣವನ್ನು ಹಿಂಪಡೆಯುವುದು ಸಾಧ್ಯವಾಗದೆ ಮೋಸಗೊಂಡಿದ್ದನ್ನು ತಿಳಿದು ಪೊಲೀಸ್ ದೂರು ನೀಡಿದ್ದರು.
ಆನ್ಲೈಲ್ ಸ್ಟಾಕ್ ಮಾರ್ಕೆಟ್ ವೆಬ್ ಸೈಟ್ ಹೆಸರಲ್ಲಿ ಗ್ಯಾಂಗ್ ಒಂದು ಸಕ್ರಿಯವಾಗಿರುವುದನ್ನು ಪತ್ತೆ ಮಾಡಿದ ಮಲಪ್ಪುರಂ ಪೊಲೀಸರು ವಂಚಕರು ಉಪಯೋಗಿಸುತ್ತಿದ್ದ ಸಿಮ್ ಕಾರ್ಡ್ ಬೆನ್ನತ್ತಿ ಕಾರ್ಯಾಚರಣೆ ನಡೆಸಿದ್ದರು. ಮಡಿಕೇರಿಯಲ್ಲಿ ನೆಲೆಸಿದ್ದ ಅಬ್ದುಲ್ ರೋಷನ್, ಬೇರೆ ಬೇರೆ ಟೆಲಿಫೋನ್ ಕಂಪನಿಗಳ ಹೆಸರಲ್ಲಿ ನಕಲಿ ಸಿಮ್ ಕಾರ್ಡ್ ಗಳನ್ನು ಮಾಡಿಸಿ ಸೈಬರ್ ವಂಚಕರಿಗೆ ಪೂರೈಸುತ್ತಿದ್ದುದನ್ನು ಪತ್ತೆ ಮಾಡಿದ್ದಾರೆ. ಆತನ ಬಳಿಯಿದ್ದ 40 ಸಾವಿರ ಸಿಮ್ ಕಾರ್ಡ್, 180 ಮೊಬೈಲ್ ಫೋನ್ ಮತ್ತು ಆರು ಬಯೋಮೆಟ್ರಿಕ್ ಸ್ಕ್ಯಾನರ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಬ್ದುಲ್ ರೋಷನ್ ಮಡಿಕೇರಿಯಲ್ಲಿದ್ದು ಟೆಲಿಫೋನ್ ಕಂಪನಿಯೊಂದರ ಡಿಸ್ಟ್ರಿಬ್ಯೂಟರ್ ಆಗಿ ಕೆಲಸ ಮಾಡಿಕೊಂಡಿದ್ದ. ಇದರ ಜೊತೆಗೆ ನಕಲಿ ಸಿಮ್ ಗಳನ್ನು ತಯಾರಿಸಿ, ಸೈಬರ್ ವಂಚಕರಿಗೆ ಪೂರೈಸುವ ಕೆಲಸ ಮಾಡುತ್ತಿದ್ದ. ಸೈಬರ್ ವಂಚಕರು ಈ ಸಿಮ್ ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ಖಾತೆಗಳನ್ನ ತೆರೆಯಲು ಬಳಸುತ್ತಿದ್ದರು. ಸಿಮ್ ಮೂಲಕ ಓಟಿಪಿ ಪಡೆಯುವುದು ಬಿಟ್ಟರೆ ಬೇರ ಉದ್ದೇಶಕ್ಕೆ ಬಳಸುತ್ತಿರಲಿಲ್ಲ. ಅಬ್ದುಲ್ ರೋಷನ್ ಮಡಿಕೇರಿಯಲ್ಲಿ ಮೊಬೈಲ್ ಅಂಗಡಿ ಹೊಂದಿದ್ದು, ಅಲ್ಲಿಗೆ ಬರುತ್ತಿದ್ದ ಗ್ರಾಹಕರ ಬೆರಳಚ್ಚು ಪಡೆದು ಅವರಿಗೆ ತಿಳಿಯದಂತೆ ಸಿಮ್ ಕಾರ್ಡ್ ಗಳನ್ನು ಚಾಲ್ತಿಗೊಳಿಸುತ್ತಿದ್ದ. ಆ ಸಿಮ್ ಕಾರ್ಡ್ ಗಳನ್ನು ಸೈಬರ್ ವಂಚಕರಿಗೆ ಮಾರಾಟ ಮಾಡುತ್ತಿದ್ದ.
ನಕಲಿ ಸಿಮ್ ಕಾರ್ಡ್ ಮಾರಾಟದ ಅತಿ ದೊಡ್ಡ ಜಾಲ ಈ ಮೂಲಕ ಬೆಳಕಿಗೆ ಬಂದಿದ್ದು, ನಾವಿನ್ನೂ ಸೈಬರ್ ವಂಚಕರ ಜಾಲವನ್ನು ತಿಳಿದುಕೊಂಡಿಲ್ಲ. ಅಬ್ದುಲ್ ರೋಷನ್ ಮೂಲಕ ಕೆಲವು ಮಾಹಿತಿಗಳನ್ನು ಪಡೆದಿದ್ದು, ತನಿಖೆ ಮುಂದುವರಿಸುತ್ತೇವೆ. ಸೈಬರ್ ವಂಚನೆ ಜಾಲದಲ್ಲಿ ದೇಶದ ಹಲವಾರು ಕಡೆಯಲ್ಲಿ ನೆಟ್ವರ್ಕ್ ಇದ್ದು, ಹಲವು ಮಂದಿ ದೇಶ ಮತ್ತು ವಿದೇಶದಲ್ಲಿದ್ದು ಸಕ್ರಿಯರಾಗಿದ್ದಾರೆ ಎಂದು ಮಲಪ್ಪುರಂ ಎಸ್ಪಿ ಶಶಿಧರನ್ ಹೇಳಿದ್ದಾರೆ. ಸೈಬರ್ ವಂಚನೆ ಜಾಲದ ಬಗ್ಗೆ ಮಲಪ್ಪುರಂ ಎಸ್ಪಿ, ಡಿಸಿಆರ್ ಬಿ ಡಿವೈಎಸ್ಪಿ ವಿ.ಎಸ್.ಶೈಜು ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿದ್ದರು. ಮಾರ್ಚ್ 10ರಂದು ಮಲಪ್ಪುರಂ ಜಿಲ್ಲೆಯ ವೆಂಗರ ನಿವಾಸಿ 1.8 ಕೋಟಿ ವಂಚನೆಯಾದ ಬಗ್ಗೆ ನೀಡಿದ ದೂರನ್ನು ಆಧರಿಸಿ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
The Cyber Crime unit of Malappuram Police seized over 40,000 SIM cards, 180 mobile phones and six biometric readers from a Karnataka native understood to be a key accused in an online racket. Abdul Roshan (46) was taken into custody Wednesday night from his house at Madikeri by a special team led by DCRB (District Crime Records Bureau) DySP V S Shaju.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm