ಬ್ರೇಕಿಂಗ್ ನ್ಯೂಸ್
03-12-20 04:38 pm Headline Karnataka News Network ಕ್ರೈಂ
ಮುಂಬೈ, ಡಿ.3: ಮಲೈಕಾ ಮಲ್ಟಿ ಸ್ಟೇಟ್ ಕೋ ಆಪರೇಟಿವ್ ಸೊಸೈಟಿ ಹಗರಣದ ರೂವಾರಿ, ಸಂಸ್ಥೆಯ ಅಧ್ಯಕ್ಷನಾಗಿದ್ದ ಗಿಲ್ಬರ್ಟ್ ಬ್ಯಾಪ್ಟಿಸ್ಟ್ ನನ್ನು ಮೀರಾ ರೋಡ್ ಪೊಲೀಸರು ಕೊನೆಗೂ ಬಂಧಿಸಿದ್ದಾರೆ.
ನಿರೀಕ್ಷಣಾ ಜಾಮೀನು ಕೋರಿ ಗಿಲ್ಬರ್ಟ್ ಬ್ಯಾಪ್ಟಿಸ್ಟ್ ಮತ್ತು ಸೊಸೈಟಿಯ ನಿರ್ದೇಶಕರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಆದರೆ, ಕೋರ್ಟ್ ಜಾಮೀನು ನಿರಾಕರಿಸಿ, ಗಿಲ್ಬರ್ಟ್ ಅರ್ಜಿಯನ್ನು ವಜಾ ಮಾಡಿತ್ತು. ಕೋರ್ಟ್ ಜಾಮೀನು ನಿರಾಕರಿಸಿದ ಬೆನ್ನಿಗೇ ಮುಂಬೈನ ಮೀರಾ ರೋಡ್ ಪೊಲೀಸರು ಗಿಲ್ಬರ್ಟ್ ಬ್ಯಾಪ್ಟಿಸ್ಟ್ ನನ್ನು ಬಂಧಿಸಿದ್ದಾರೆ.


ಇದಕ್ಕೂ ಮುನ್ನ ಕಳೆದ ತಿಂಗಳು ಥಾಣೆ ಕೋರ್ಟ್ ಗಿಲ್ಬರ್ಟ್ ಜಾಮೀನು ಅರ್ಜಿಯನ್ನು ವಜಾ ಮಾಡಿತ್ತು. ಆಬಳಿಕ ಗಿಲ್ಬರ್ಟ್ ಸುಪ್ರೀಂ ಮೆಟ್ಟಿಲೇರಿದ್ದು ಅಲ್ಲಿಯೂ ಜಾಮೀನು ಅರ್ಜಿ ನಿರಾಕರಿಸಲ್ಪಟ್ಟಿದೆ. ಈ ಹಿನ್ನೆಲೆಯಲ್ಲಿ ಗಿಲ್ಬರ್ಟ್ ಸೇರಿ ಸೊಸೈಟಿಯ ಮೂವರು ನಿರ್ದೇಶಕರಾದ ದೀಪಕ್ ಪೂಜಾರಿ, ಲೋಯಲ್ ಬ್ಯಾಪ್ಟಿಸ್ಟ್ ಮತ್ತು ಪ್ರಕಾಶ್ ಕೋಟ್ಯಾನ್ ಅವರನ್ನು ಬಂಧಿಸಿದ್ದಾರೆ. ಇವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಡಿ.8ರ ವರೆಗೆ ಕಸ್ಟಡಿ ಪಡೆದಿದ್ದಾರೆ.
ಮಲೈಕಾ ಸೊಸೈಟಿಯ ಕಚೇರಿಗಳು ಮುಂಬೈ, ಗೋವಾ, ಉಡುಪಿ, ಮಂಗಳೂರು ಸೇರಿ ಹಲವೆಡೆ ಇದ್ದು, 2 ಸಾವಿರಕ್ಕೂ ಹೆಚ್ಚು ಮಂದಿ ಹೂಡಿಕೆದಾರರಿಗೆ 350 ಕೋಟಿಗೂ ಹೆಚ್ಚು ಮೊತ್ತವನ್ನು ಪಂಗನಾಮ ಹಾಕಿದ್ದಾರೆ. ಮುಂಬೈನ ಮೀರಾ ರೋಡ್ ನಲ್ಲಿರುವ ಸೊಸೈಟಿ ಕಚೇರಿಯ ವಿರುದ್ಧ ಮೊದಲ ದೂರು ಕಳೆದ ಅಕ್ಟೋಬರ್ 2ರಂದು ಮೀರಾ ರೋಡ್ ಠಾಣೆಯಲ್ಲಿ ದಾಖಲಾಗಿತ್ತು.
ಐಪಿಸಿ ಸೆಕ್ಷನ್ ಗಳಾದ 420 (ಮೋಸ), 406 (ನಂಬಿಕೆ ದ್ರೋಹ), 34 (ಕಾಮನ್ ಇಂಟೆನ್ಷನ್) ಸೇರಿದಂತೆ ಮಹಾರಾಷ್ಟ್ರ ಹೂಡಿಕೆದಾರರ ಹಿತಾಸಕ್ತಿ ಪರ ಕಾಯ್ದೆ (ಎಂಪಿಐಡಿ) ಅಡಿ ಪ್ರಕರಣ ದಾಖಲಾಗಿತ್ತು.


ಮುಂಬೈನಲ್ಲಿ 50ಕ್ಕೂ ಹೆಚ್ಚು ಮಂದಿ ದೂರು ದಾಖಲಿಸಿದ್ದಾರೆ. ಮಂಗಳೂರಿನ ಪಾಂಡೇಶ್ವರ ಠಾಣೆಯಲ್ಲಿ 150ಕ್ಕೂ ಹೆಚ್ಚು ಮಂದಿ ತಮಗೆ ವಂಚನೆ ಆಗಿರುವ ಬಗ್ಗೆ ದೂರು ದಾಖಲಿಸಿದ್ದರು. ಮಂಗಳೂರು ಪೊಲೀಸರು ಸೊಸೈಟಿಯಲ್ಲಿ ಮ್ಯಾನೇಜರ್ ಆಗಿದ್ದ ರೀನಾ ಜೋಷ್ ಎಂಬವರನ್ನು ಈಗಾಗ್ಲೇ ಬಂಧಿಸಿದ್ದಾರೆ.
Malaika Credit Society owner Gilbert Baptist has been arrested by the Mumbai police for cheating investors of Rs 350 crores.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm