ಬ್ರೇಕಿಂಗ್ ನ್ಯೂಸ್
16-05-24 06:32 pm Bangalore Correspondent ಕ್ರೈಂ
ಬೆಂಗಳೂರು, ಮೇ.16: ದೇಶದ ವಿರುದ್ಧ ಬೇಹುಗಾರಿಕೆ ನಡೆಸಿದ ಪ್ರಕರಣದಲ್ಲಿ ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ಎನ್ಐಎ ಅಧಿಕಾರಿಗಳು ಮೈಸೂರಿನಲ್ಲಿ ಬಂಧಿಸಿದ್ದಾರೆ.
ಮೈಸೂರಿನ ರಾಜೀವ್ ನಗರದ ನಿವಾಸಿ ನೂರುದ್ದೀನ್ ಅಲಿಯಾಸ್ ರಫಿ ಬಂಧಿತ ಆರೋಪಿ. ಭಾರತದಲ್ಲಿ ನಕಲಿ ನೋಟು ಪೂರೈಕೆ, ಪಾಕಿಸ್ತಾನದ ಪರ ಬೇಹುಗಾರಿಕೆ, ವಿದೇಶಿ ರಾಯಭಾರ ಕಚೇರಿಗಳ ಸ್ಫೋಟ ಸಂಚು ಮುಂತಾದ ಆರೋಪಗಳಿದ್ದ ಹಿನ್ನೆಲೆಯಲ್ಲಿ ಎನ್ ಐಎ ವಿಶೇಷ ನ್ಯಾಯಾಲಯ ಸರ್ಚ್ ವಾರಂಟ್ ಹೊರಡಿಸಿತ್ತು. ಆದರೆ ಹಾಜರಾಗದೆ ನೂರುದ್ದೀನ್ ಅಧಿಕಾರಿಗಳಿಗೆ ಸಿಗದೆ ತಲೆಮರೆಸಿಕೊಂಡಿದ್ದ.
ಬುಧವಾರ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಎನ್ಐಎ ಅಧಿಕಾರಿಗಳು ರಾಜೀವ್ ನಗರದ ಆರೋಪಿ ಮನೆಯಿಂದಲೇ ಹೆಡೆಮುರಿ ಕಟ್ಟಿದ್ದಾರೆ. ಮನೆಯಲ್ಲಿದ್ದ ಆತನ ಮೊಬೈಲ್ ಫೋನ್, ಪೆನ್ ಡ್ರೈವ್ ಸೇರಿದಂತೆ ಇನ್ನಿತರ ವಸ್ತುಗಳನ್ನು ವಶಪಡಿಸಿದ್ದಾರೆ. ಹತ್ತು ವರ್ಷಗಳ ಹಿಂದೆ ಬೆಂಗಳೂರಿನ ಇಸ್ರೇಲ್ ಹಾಗೂ ಚೆನ್ನೈನ ಅಮೆರಿಕಾ ರಾಯಭಾರ ಕಚೇರಿಗಳ ಮೇಲೆ ಸ್ಫೋಟಕ್ಕೆ ಸಂಚು ರೂಪಿಸಿದ್ದ ಆರೋಪ ಈತನ ಮೇಲಿದೆ. ಇದೇ ಆರೋಪದ ಮೇಲೆ ಶ್ರೀಲಂಕಾ ಪ್ರಜೆ ಮೊಹಮ್ಮದ್ ಶಕೀರ್ ಹುಸೇನ್ ಹಾಗೂ ಕೊಲಂಬೋದ ಪಾಕಿಸ್ತಾನದ ರಾಜತಾಂತ್ರಿಕ ಕಚೇರಿ ನೌಕರ, ಪಾಕಿಸ್ತಾನದ ಪ್ರಜೆ ಅಮೀರ್ ಜುಬೇರ್ ಸಿದ್ದಿಕಿಯನ್ನು ಎನ್ಐಎ ಅಧಿಕಾರಿಗಳು 2014ರಲ್ಲಿ ಬಂಧಿಸಿದ್ದರು.
The National Investigation Agency (NIA) on Wednesday arrested an accused, who had been absconding after jumping bail, in an espionage case involving a Sri Lankan and a Pakistani national. The accused, identified as Nuruddin alias Rafi, was carrying a cash reward of Rs five lakh, and was arrested from the Rajiv Nagar area of Karnataka's Mysuru, by an NIA team, an official statement by the agency said.
28-05-26 05:31 pm
HK News Desk
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm