ಬ್ರೇಕಿಂಗ್ ನ್ಯೂಸ್
17-05-24 01:44 pm HK News Desk ಕ್ರೈಂ
ಬೆಳಗಾವಿ, ಮೇ.17: ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕನೊಬ್ಬ ಚಾಕುವಿನಿಂದ ನಡೆಸಿದ ದಾಳಿಯಲ್ಲಿ ರೈಲ್ವೆ ಸಿಬ್ಬಂದಿ ಮೃತಪಟ್ಟಿದ್ದು, ಟಿಟಿಇ ಸೇರಿ ಮೂವರು ಗಾಯಗೊಂಡಿದ್ದಾರೆ.
ಬೋಗಿ ಅಟೆಂಡರ್ ದೇವಋಷಿ ವರ್ಮಾ (23) ಮೃತಪಟ್ಟವರು. ಆರೋಪಿಯು ಹೃದಯಕ್ಕೇ ಚಾಕು ಇರಿದಿದ್ದರಿಂದ ವರ್ಮಾ ತೀವ್ರ ನಿತ್ರಾಣಗೊಂಡರು. ಅವರನ್ನ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು ಆದ್ರೆ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ.
ಪುದುಚೆರಿ- ಮುಂಬೈ ಚಾಲುಕ್ಯ ಎಕ್ಸ್ಪ್ರೆಸ್ ರೈಲಿನ ಎಸ್-8 ಬೋಗಿಯಲ್ಲಿ ಘಟನೆ ನಡೆದಿದೆ. ರೈಲುಧಾರವಾಡ ದಾಟಿ ಬೆಳಗಾವಿಯತ್ತ ಚಲಿಸುತ್ತಿತ್ತು. ಗುಂಜಿ-ಖಾನಾಪುರ ಮಧ್ಯದಲ್ಲಿ ಟಿಟಿ ಅಶ್ರಫ್ ಕಿತ್ತೂರ ಟಿಕೆಟ್ ಚೆಕ್ ಮಾಡುತ್ತಿದ್ದರು. ಬೋಗಿಯಲ್ಲಿ ಮುಸುಕು ಧರಿಸಿ ಕುಳಿತಿದ್ದ ವ್ಯಕ್ತಿಯಿಂದ ಟಿಕೆಟ್ ಕೇಳಿದರು. ಅವರಿಗೆ ಟಿಕೆಟ್ ತೋರಿಸಲು ನಿರಾಕರಿಸಿದಾಗ ಮಾತಿಗೆ ಮಾತು ಬೆಳೆಯಿತು. ತನ್ನ ಬಳಿ ಇದ್ದ ಚಾಕು ತೆಗೆದ ಮುಸುಕುಧಾರಿ ಟಿಟಿ ಮೇಲೆ ಹಲ್ಲೆ ನಡೆಸಿದ. ಗಾಯಗೊಂಡ ಟಿಟಿಇ ಅವರನ್ನು ರಕ್ಷಿಸಲು ಅಟೆಂಡರ್ ದೇವಋಷಿ ಧಾವಿಸಿದರು. ಆರೋಪಿ ಅವರ ಎದೆಗೂ ಚಾಕು ಇರಿದ. ಜಗಳ ಬಿಡಿಸಲು ಬಂದ ಇನ್ನಿಬ್ಬರು ಸಿಬ್ಬಂದಿ ಮೇಲೂ ಚಾಕುವಿನಿಂದ ದಾಳಿ ನಡೆಸಿದ್ದಾನೆ.
ರೈಲು ಸಂಜೆ 5ರ ಸುಮಾರಿಗೆ ಬೆಳಗಾವಿ ನಿಲ್ದಾಣ ತಲುಪಿತು. ಗಾಯಗೊಂಡ ನಾಲ್ವರನ್ನೂ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ತೀವ್ರ ರಕ್ತಸ್ರಾವವಾಗಿದ್ದರಿಂದ ದೇವಋಷಿ ಅಸುನೀಗಿದರು. ಟಿಟಿ ಸೇರಿ ಮೂವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಆರೋಪಿ ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪರಾರಿಯಾಗಿದ್ದಾನೆ.
ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಜಿಲ್ಲಾಸ್ಪತ್ರೆಗೆ ಹಾಗೂ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ದೇವಋಷಿ ಅವರ ಮರಣೋತ್ತರ ಪರೀಕ್ಷೆ ಮಾಡಿ, ಶವವನ್ನು ಇಲಾಖೆಯ ಸಿಬ್ಬಂದಿಗೆ ಹಸ್ತಾಂತರಿಸಲಾಗಿದೆ.
ದೇವಋಷಿ ಹೊರಗುತ್ತಿಗೆ ಆಧಾರದ ಮೇಲೆ ಬೋಗಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದರು.
Ticketless Passenger Murders Railway Staffer, attack Tc for asking ticket in belagavi and later jumps from moving train. According to Belagavi Police Commissioner Iada Martin Marbaniang, the passenger picked up an argument with the TTE when he was asked to show his ticket. The accused then pulled out a knife and attacked the staffer.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 07:20 pm
HK News Staffer
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am