ಬ್ರೇಕಿಂಗ್ ನ್ಯೂಸ್
17-05-24 09:52 pm HK News Desk ಕ್ರೈಂ
ಕಾಸರಗೋಡು, ಮೇ 17: ತನ್ನ ಮನೆಯಲ್ಲಿ ಮಲಗಿದ್ದ ಹತ್ತು ವರ್ಷದ ಬಾಲಕಿಯನ್ನು ದುರುಳನೊಬ್ಬ ನಸುಕಿನಲ್ಲಿ ಹೊತ್ತೊಯ್ದು ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಆಕೆಯ ಕಿವಿಯಲ್ಲಿದ್ದ ಚಿನ್ನದ ಓಲೆಯನ್ನು ಕಿತ್ತುಕೊಂಡು ಪರಾರಿಯಾದ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಹೊಸದುರ್ಗದಲ್ಲಿ ನಡೆದಿದೆ.
ಮೇ 15ರಂದು ನಸುಕಿನ ಮೂರು ಗಂಟೆ ವೇಳೆಗೆ ಘಟನೆ ನಡೆದಿದ್ದು ಪೊಲೀಸರು ಆರೋಪಿಗೆ ತಲಾಶ್ ನಡೆಸಿದ್ದಾರೆ. ಬಾಲಕಿ ಪ್ರತಿ ದಿನ ತನ್ನ ಅಜ್ಜಿಯ ಜೊತೆಗೆ ಮಲಗುತ್ತಿದ್ದಳು. ಅಂದು ಅಜ್ಜಿ ಸಂಬಂಧಿಕರ ಮನೆಗೆ ತೆರಳಿದ್ದರಿಂದ ಅಜ್ಜನ ಜೊತೆಗೆ ಮಲಗಿದ್ದಳು. ನಸುಕಿನಲ್ಲಿ ಮೂರು ಗಂಟೆಗೆ ಎಂದಿನಂತೆ ಅಜ್ಜ ದನಗಳನ್ನು ಹಾಲು ಕರೆಯಲೆಂದು ತೆರಳಿದ್ದರು. ಕೋಣೆಯ ಬಾಗಿಲನ್ನು ಎಳೆದುಕೊಂಡು ಹೋಗಿದ್ದರು. ಇದೇ ಹೊತ್ತಿನಲ್ಲಿ ಬಾಲಕಿಯನ್ನು ಹೊತ್ತೊಯ್ಯಲಾಗಿತ್ತು. 3.30ಕ್ಕೆ ಅಜ್ಜ ಮರಳಿ ಬಂದು ನೋಡಿದಾಗ, ಬೆಡ್ ನಲ್ಲಿ ಬಾಲಕಿ ಇರಲಿಲ್ಲ.
ಬಾಲಕಿಯನ್ನು ದುರುಳ ಒಂದು ಕಿಮೀ ದೂರಕ್ಕೆ ಹೊತ್ತೊಯ್ದಿದ್ದು, ಬೊಬ್ಬೆ ಹಾಕದಂತೆ ಬಾಯಿಗೆ ಕೈಯನ್ನು ಗಟ್ಟಿ ಹಿಡಿದುಕೊಂಡಿದ್ದ. ಬೊಬ್ಬೆ ಹಾಕಿದರೆ ಕೊಂದು ಹಾಕುತ್ತೇನೆಂದು ಹೆದರಿಸಿ ರಸ್ತೆಯಲ್ಲೇ ಲೈಂಗಿಕ ದೌರ್ಜನ್ಯ ಎಸಗಿ, ಕಿವಿಯಲ್ಲಿದ್ದ ಚಿನ್ನದ ಓಲೆಗಳನ್ನು ಕಿತ್ತುಕೊಂಡು ಬಾಲಕಿಯನ್ನು ಬಿಟ್ಟು ಹೋಗಿದ್ದ. ಬೆಳಗ್ಗೆ 5 ಗಂಟೆ ವೇಳೆಗೆ ಬಾಲಕಿ ಅಲ್ಲಿನ ಪರಿಸರದ ಮನೆಯೊಂದಕ್ಕೆ ಹೋಗಿ ಬೆಲ್ ಹಾಕಿದ್ದಾಳೆ. ಬಾಗಿಲು ಬಡಿದರೂ ಎಚ್ಚರಗೊಳ್ಳದ ಕಾರಣ ಪಕ್ಕದ ಮನೆಗೂ ಹೋಗಿ ಬಾಗಿಲು ಬಡಿದಿದ್ದಾಳೆ. ಆ ಮನೆಯ ಬಾಗಿಲು ತೆರೆಯುತ್ತಿದ್ದಂತೆ ತನ್ನ ಮನೆಯವರನ್ನು ಕರೆಯುವಂತೆ ತಿಳಿಸಿ, ತಂದೆಯ ಮೊಬೈಲ್ ನಂಬರ್ ಹೇಳಿ ಬರಹೇಳಿದ್ದಾಳೆ.
ತಂದೆ, ತಾಯಿ ಮತ್ತು ಇನ್ನೊಬ್ಬಳು ಸಣ್ಣ ತಂಗಿ ಪಕ್ಕದ ಇನ್ನೊಂದು ಕೋಣೆಯಲ್ಲಿ ಮಲಗಿದ್ದರು. ಮನೆಯ ಹಿಂದಿನ ಬಾಗಿಲು ತೆರೆದುಕೊಂಡಿದ್ದರಿಂದ ಅಲ್ಲಿಂದಲೇ ಬಾಲಕಿಯನ್ನು ಹೊತ್ತೊಯ್ದಿದ್ದಾರೆ ಎನ್ನುವ ಸಂಶಯ ಉಂಟಾಗಿತ್ತು. ಪೊಲೀಸರು ಮೊದಲು ರಾಬರಿ ಕೇಸು ದಾಖಲಿಸಿದ್ದರು. ಬಾಲಕಿಯ ಮೆಡಿಕಲ್ ಚೆಕಪ್ ನಲ್ಲಿ ರೇಪ್ ಆಗಿರುವುದು ಕಂಡುಬಂದಿದ್ದರಿಂದ ಪೋಕ್ಸೋ ಕಾಯ್ದೆ ದಾಖಲು ಮಾಡಿದ್ದು ಆರೋಪಿಗೆ ಹುಡುಕಾಟ ನಡೆಸಿದ್ದಾರೆ. ಬಾಲಕಿಯ ಮುಖ, ಕುತ್ತಿಗೆಯಲ್ಲಿ ಪರಚಿದ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ. (ಮನೋರಮಾ ವರದಿ)
A10-year-old girl sleeping in her house at Padannakkad near Kanhangad in Kerala’s Kasargod district was abducted, sexually assaulted and abandoned one kilometre away in the early hours of Wednesday. The incident occurred when her grandfather briefly stepped out to milk the cow. The rest of the members of the family were asleep. It is suspected that the assailant entered the house when the grandfather went out after opening the front door.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm