ಬ್ರೇಕಿಂಗ್ ನ್ಯೂಸ್
18-05-24 04:05 pm HK News Desk ಕ್ರೈಂ
ವಿಜಯಪುರ, ಮೇ.18: ಹತ್ತಿ ಮಾರಾಟ ಮಾಡಿದ ಹಣದೊಂದಿಗೆ ವ್ಯಾಪಾರಿಯ ನೌಕರರು ಕ್ಯಾಂಟರ್ ನಲ್ಲಿ ಮರಳುತ್ತಿದ್ದಾಗ ಕ್ಯಾಂಟರ್ ಅಡ್ಡಗಟ್ಟಿ, ಅದರಲ್ಲಿದ್ದ ಇಬ್ಬರ ಕಣ್ಣಿಗೆ ಖಾರದ ಪುಡಿ ಎರಚಿ, ಹಲ್ಲೆ ನಡೆಸಿ 32 ಲಕ್ಷ ರೂ. ಹಣ ದೋಚಿರುವ ದರೋಡೆ ಕೃತ್ಯ ಜಿಲ್ಲೆಯಲ್ಲಿ ನಡೆದಿದೆ.
ಕಲಬುರಗಿ ಜಿಲ್ಲೆಯ ಜೀವರ್ಗಿ ಮೂಲದ ವ್ಯಾಪಾರಿ ಚಂದ್ರಕಾಂತ ಕುಂಬಾರ ಎಂಬವರಿಗೆ ಸೇರಿದ ಹಣ. 32 ಲಕ್ಷ ರೂ. ಹಣ ತರುತ್ತಿದ್ದ ಚಾಲಕ ಮಹಾಂತೇಶ ಕುಂಬಾರ ಹಾಗೂ ಸಹಾಯಕ ಮಲ್ಲಿ ಕೊಡಚಿ ದರೋಡೆಕೋರರಿಂದ ಹಲ್ಲೆಗೊಳಗಾಗಿ ಹಣ ಕಳೆದುಕೊಂಡವರು.
ಧಾರವಾಡ ಬಳಿಯ ಅಮ್ಮೀನಭಾವಿ ಗ್ರಾಮದಲ್ಲಿರುವ ಅರಳೆ ಕಾರ್ಖಾನೆಗೆ ಚಂದ್ರಕಾಂತ ಹತ್ತಿ ಮಾರಾಟ ಮಾಡಿದ್ದರು. ಹತ್ತಿ ಮಾರಾಟದಿಂದ ಬಂದಿದ್ದ 32 ಲಕ್ಷ ರೂ. ಹಣದೊಂದಿಗೆ ಹತ್ತಿ ಸಾಗಿಸಿದ್ದ ಕ್ಯಾಂಟರ್ ನಲ್ಲೇ ಚಾಲಕ ಮಹಾಂತೇಶ, ಸಹಾಯಕ ಮಲ್ಲು ಜೀವರ್ಗಿಗೆ ಮರಳುತ್ತಿದ್ದರು.
ಈ ಹಂತದಲ್ಲಿ ವಿಜಯಪುರ ಜಿಲ್ಲೆಯ ಕೊಲ್ಹಾರ ಬಳಿ ಬುಲೆರೋ ವಾಹನದಲ್ಲಿ ಬಂದ ದರೋಡೆಕೋರರು, ಕ್ಯಾಂಟರ್ ಅಡ್ಡಗಟ್ಟಿ, ಕಬ್ಬಿಣದ ರಾಡ್ ಹಾಗೂ ಕಲ್ಲುಗಳಿಂದ ಕ್ಯಾಂಟರ್ ಗಾಜು ಒಡೆದು ವಾಹನ ನಿಲ್ಲಿಸಿದ್ದಾರೆ. ಬಳಿಕ ಮಹಾಂತೇಶ ಹಾಗೂ ಮಲ್ಲು ಅವರ ಕಣ್ಣಿಗೆ ಖಾರದ ಪುಡಿ ಎರಚಿ, ಹಲ್ಲೆ ನಡೆಸಿದ್ದಾರೆ.
ಬಳಿಕ 32 ಲಕ್ಷ ರೂ. ಹಣ ದರೋಡೆ ಮಾಡಿ ಪರಾರಿಯಾಗಿದ್ದಾರೆ. ದರೋಡೆಕೋರರಿಂದ ಹಲ್ಲೆಗೊಳಗಾದ ಮಹಾಂತೇಶ, ಮಲ್ಲು ಇಬ್ಬರೂ ತೀವ್ರವಾಗಿ ಗಾಯಗೊಂಡಿದ್ದು, ಕೊಲ್ಹಾರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿಯುತ್ತಿದ್ದಾರೆ.
ಸುದ್ದಿ ತಿಳಿಯುತ್ತಲೇ ವಿಜಯಪುರ ಜಿಲ್ಲೆಯ ಎಸ್ಪಿ ರಿಷಿಕೇಶ ಭಗವಾನ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಕೊಲ್ಹಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಿ, ಪರಾರಿಯಾಗಿರುವ ದರೋಡೆಕೋರರ ಬಂಧನಕ್ಕೆ ಜಾಲ ಬೀಸಿದ್ದಾರೆ.
Thieves stop truck attack driver with chilly power and flee with 38 lakhs cash at Vijayapura. Both driver and clear were tharashed using iron rod. Miscreants who came in bolero car flee from spot. They were carrying cash that came for selling cotton.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 07:20 pm
HK News Staffer
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am