ಬ್ರೇಕಿಂಗ್ ನ್ಯೂಸ್
18-05-24 04:05 pm HK News Desk ಕ್ರೈಂ
ವಿಜಯಪುರ, ಮೇ.18: ಹತ್ತಿ ಮಾರಾಟ ಮಾಡಿದ ಹಣದೊಂದಿಗೆ ವ್ಯಾಪಾರಿಯ ನೌಕರರು ಕ್ಯಾಂಟರ್ ನಲ್ಲಿ ಮರಳುತ್ತಿದ್ದಾಗ ಕ್ಯಾಂಟರ್ ಅಡ್ಡಗಟ್ಟಿ, ಅದರಲ್ಲಿದ್ದ ಇಬ್ಬರ ಕಣ್ಣಿಗೆ ಖಾರದ ಪುಡಿ ಎರಚಿ, ಹಲ್ಲೆ ನಡೆಸಿ 32 ಲಕ್ಷ ರೂ. ಹಣ ದೋಚಿರುವ ದರೋಡೆ ಕೃತ್ಯ ಜಿಲ್ಲೆಯಲ್ಲಿ ನಡೆದಿದೆ.
ಕಲಬುರಗಿ ಜಿಲ್ಲೆಯ ಜೀವರ್ಗಿ ಮೂಲದ ವ್ಯಾಪಾರಿ ಚಂದ್ರಕಾಂತ ಕುಂಬಾರ ಎಂಬವರಿಗೆ ಸೇರಿದ ಹಣ. 32 ಲಕ್ಷ ರೂ. ಹಣ ತರುತ್ತಿದ್ದ ಚಾಲಕ ಮಹಾಂತೇಶ ಕುಂಬಾರ ಹಾಗೂ ಸಹಾಯಕ ಮಲ್ಲಿ ಕೊಡಚಿ ದರೋಡೆಕೋರರಿಂದ ಹಲ್ಲೆಗೊಳಗಾಗಿ ಹಣ ಕಳೆದುಕೊಂಡವರು.
ಧಾರವಾಡ ಬಳಿಯ ಅಮ್ಮೀನಭಾವಿ ಗ್ರಾಮದಲ್ಲಿರುವ ಅರಳೆ ಕಾರ್ಖಾನೆಗೆ ಚಂದ್ರಕಾಂತ ಹತ್ತಿ ಮಾರಾಟ ಮಾಡಿದ್ದರು. ಹತ್ತಿ ಮಾರಾಟದಿಂದ ಬಂದಿದ್ದ 32 ಲಕ್ಷ ರೂ. ಹಣದೊಂದಿಗೆ ಹತ್ತಿ ಸಾಗಿಸಿದ್ದ ಕ್ಯಾಂಟರ್ ನಲ್ಲೇ ಚಾಲಕ ಮಹಾಂತೇಶ, ಸಹಾಯಕ ಮಲ್ಲು ಜೀವರ್ಗಿಗೆ ಮರಳುತ್ತಿದ್ದರು.
ಈ ಹಂತದಲ್ಲಿ ವಿಜಯಪುರ ಜಿಲ್ಲೆಯ ಕೊಲ್ಹಾರ ಬಳಿ ಬುಲೆರೋ ವಾಹನದಲ್ಲಿ ಬಂದ ದರೋಡೆಕೋರರು, ಕ್ಯಾಂಟರ್ ಅಡ್ಡಗಟ್ಟಿ, ಕಬ್ಬಿಣದ ರಾಡ್ ಹಾಗೂ ಕಲ್ಲುಗಳಿಂದ ಕ್ಯಾಂಟರ್ ಗಾಜು ಒಡೆದು ವಾಹನ ನಿಲ್ಲಿಸಿದ್ದಾರೆ. ಬಳಿಕ ಮಹಾಂತೇಶ ಹಾಗೂ ಮಲ್ಲು ಅವರ ಕಣ್ಣಿಗೆ ಖಾರದ ಪುಡಿ ಎರಚಿ, ಹಲ್ಲೆ ನಡೆಸಿದ್ದಾರೆ.
ಬಳಿಕ 32 ಲಕ್ಷ ರೂ. ಹಣ ದರೋಡೆ ಮಾಡಿ ಪರಾರಿಯಾಗಿದ್ದಾರೆ. ದರೋಡೆಕೋರರಿಂದ ಹಲ್ಲೆಗೊಳಗಾದ ಮಹಾಂತೇಶ, ಮಲ್ಲು ಇಬ್ಬರೂ ತೀವ್ರವಾಗಿ ಗಾಯಗೊಂಡಿದ್ದು, ಕೊಲ್ಹಾರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿಯುತ್ತಿದ್ದಾರೆ.
ಸುದ್ದಿ ತಿಳಿಯುತ್ತಲೇ ವಿಜಯಪುರ ಜಿಲ್ಲೆಯ ಎಸ್ಪಿ ರಿಷಿಕೇಶ ಭಗವಾನ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಕೊಲ್ಹಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಿ, ಪರಾರಿಯಾಗಿರುವ ದರೋಡೆಕೋರರ ಬಂಧನಕ್ಕೆ ಜಾಲ ಬೀಸಿದ್ದಾರೆ.
Thieves stop truck attack driver with chilly power and flee with 38 lakhs cash at Vijayapura. Both driver and clear were tharashed using iron rod. Miscreants who came in bolero car flee from spot. They were carrying cash that came for selling cotton.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 10:27 pm
Mangalore Correspondent
Siddaramaiah, Cm Mangalore, BJP black flag: ಸ...
16-05-25 06:05 pm
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
16-05-25 11:06 pm
Mangalore Correspondent
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm