ಬ್ರೇಕಿಂಗ್ ನ್ಯೂಸ್
21-05-24 01:28 pm HK News Desk ಕ್ರೈಂ
ಮೈಸೂರು, ಮೇ 21: ಪತಿಯೇ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಟಿ. ನರಸೀಪುರದ ತುರಗನೂರು ಗ್ರಾಮದಲ್ಲಿ ನಡೆದಿದೆ.
ಮೈಸೂರು ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿದ್ಯಾ ಕೊಲೆಯಾದ ದುರ್ದೈವಿಯಾಗಿದ್ದು, ಕೌಟುಂಬಿಕ ಕಲಹ ಹಿನ್ನೆಲೆ ಗಂಡನೇ ವಿದ್ಯಾಳ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.
ಮೃತ ವಿದ್ಯಾ ಅವರು ಭಜರಂಗಿ, ವಜ್ರಕಾಯ ಸಿನಿಮಾದಲ್ಲಿ ನಟಿಸಿದ್ದರು. ಅಲ್ಲದೇ ಕಾಂಗ್ರೆಸ್ ಪಕ್ಷದಲ್ಲೂ ಸಕ್ರೀಯವಾಗಿದ್ದರು. ಸೋಮವಾರ ರಾತ್ರಿ ಗಂಡ ಹಾಗೂ ಪತ್ನಿ ನಡುವೆ ಜಗಳ ನಡೆದಿದ್ದು, ಈ ವೇಳೆ ಮಾತಿಗೆ ಮಾತು ಬೆಳೆದು ಹಲ್ಲೆ ಮಾಡಿ ಪತಿ ನಂದೀಶ್ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಬನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ವಿದ್ಯಾ ಅವರ ಶವವನ್ನು ಗಮನಿಸಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರಂತೆ. ಕೊಲೆ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು, ಕೊಲೆಗೆ ನಿಖರ ಕಾರಣ ಎಂದು ತಿಳಿದು ಬೇಕಿದ್ದು, ಈ ಬಗ್ಗೆ ಪೊಲೀಸರು ಕುಟುಂಬಸ್ಥರು ಹಾಗೂ ನೆರೆಹೊರೆಯವರಿಂದ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಘಟನೆ ಬಳಿಕ ಆರೋಪಿ ನಂದೀಶ್ ಸ್ಥಳದಿಂದ ಎಸ್ಕೇಪ್ ಆಗಿದ್ದಾನಂತೆ. ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಹೆಚ್ಚುವರಿ ಎಸ್ಪಿ ಡಾ.ನಂದಿನಿ, ನಂಜನಗೂಡು ಡಿವೈಎಸ್ಪಿ ಗೋವಿಂದರಾಜು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಬಂಧನಕ್ಕೆ ಪೊಲೀಸರು ಕಾರ್ಯಾಚರನೆ ಶುರು ಮಾಡಿದ್ದು, ಮೃತದೇಹ ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
Mysuru Congress leader cum actress murdered by husband over family issue. The deceased has been identified as Vidhya. Husband who killed her has fleed away from the spot and police are now investigating the case.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 07:20 pm
HK News Staffer
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am