ಬ್ರೇಕಿಂಗ್ ನ್ಯೂಸ್
21-05-24 01:28 pm HK News Desk ಕ್ರೈಂ
ಮೈಸೂರು, ಮೇ 21: ಪತಿಯೇ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಟಿ. ನರಸೀಪುರದ ತುರಗನೂರು ಗ್ರಾಮದಲ್ಲಿ ನಡೆದಿದೆ.
ಮೈಸೂರು ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿದ್ಯಾ ಕೊಲೆಯಾದ ದುರ್ದೈವಿಯಾಗಿದ್ದು, ಕೌಟುಂಬಿಕ ಕಲಹ ಹಿನ್ನೆಲೆ ಗಂಡನೇ ವಿದ್ಯಾಳ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.
ಮೃತ ವಿದ್ಯಾ ಅವರು ಭಜರಂಗಿ, ವಜ್ರಕಾಯ ಸಿನಿಮಾದಲ್ಲಿ ನಟಿಸಿದ್ದರು. ಅಲ್ಲದೇ ಕಾಂಗ್ರೆಸ್ ಪಕ್ಷದಲ್ಲೂ ಸಕ್ರೀಯವಾಗಿದ್ದರು. ಸೋಮವಾರ ರಾತ್ರಿ ಗಂಡ ಹಾಗೂ ಪತ್ನಿ ನಡುವೆ ಜಗಳ ನಡೆದಿದ್ದು, ಈ ವೇಳೆ ಮಾತಿಗೆ ಮಾತು ಬೆಳೆದು ಹಲ್ಲೆ ಮಾಡಿ ಪತಿ ನಂದೀಶ್ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಬನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ವಿದ್ಯಾ ಅವರ ಶವವನ್ನು ಗಮನಿಸಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರಂತೆ. ಕೊಲೆ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು, ಕೊಲೆಗೆ ನಿಖರ ಕಾರಣ ಎಂದು ತಿಳಿದು ಬೇಕಿದ್ದು, ಈ ಬಗ್ಗೆ ಪೊಲೀಸರು ಕುಟುಂಬಸ್ಥರು ಹಾಗೂ ನೆರೆಹೊರೆಯವರಿಂದ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಘಟನೆ ಬಳಿಕ ಆರೋಪಿ ನಂದೀಶ್ ಸ್ಥಳದಿಂದ ಎಸ್ಕೇಪ್ ಆಗಿದ್ದಾನಂತೆ. ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಹೆಚ್ಚುವರಿ ಎಸ್ಪಿ ಡಾ.ನಂದಿನಿ, ನಂಜನಗೂಡು ಡಿವೈಎಸ್ಪಿ ಗೋವಿಂದರಾಜು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಬಂಧನಕ್ಕೆ ಪೊಲೀಸರು ಕಾರ್ಯಾಚರನೆ ಶುರು ಮಾಡಿದ್ದು, ಮೃತದೇಹ ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
Mysuru Congress leader cum actress murdered by husband over family issue. The deceased has been identified as Vidhya. Husband who killed her has fleed away from the spot and police are now investigating the case.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm