ಬ್ರೇಕಿಂಗ್ ನ್ಯೂಸ್
22-05-24 04:36 pm HK News Desk ಕ್ರೈಂ
ಹಾಸನ, ಮೇ 22: ಸಿನಿಮೀಯ ರೀತಿಯಲ್ಲಿ ಹಾಸನದ ಡಿವೈಎಸ್ಪಿ ಅವರ ಬ್ಯಾಂಕ್ ಖಾತೆಗೆ ಕನ್ನ ಹಾಕಿದ ಸೈಬರ್ ಕಳ್ಳರು 15 ಲಕ್ಷಕ್ಕೂ ಅಧಿಕ ಹಣ ಎಗರಿಸಿರುವ ಘಟನೆ ನಡೆದಿದೆ.
ಹಾಸನ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪಿ.ಕೆ.ಮುರಳೀಧರ್ ಅವರ ಖಾತೆಯಿಂದಲೇ 15,98,761 ಲಕ್ಷ ರೂ. ಹಣ ವರ್ಗಾವಣೆ ಮಾಡಿಕೊಂಡು ಸೈಬರ್ ಖದೀಮರು ವಂಚನೆ ಮಾಡಿದ್ದಾರೆ. ಈ ಸಂಬಂಧ ಹಾಸನ ನಗರದ ಸಿಇಎನ್ ಪೊಲೀಸ್ ಠಾಣೆಗೆ ಮುರಳೀಧರ್ ಅವರು ದೂರು ನೀಡಿದ್ದಾರೆ.
ಮಡಿಕೇರಿಯ ಕೆನರಾ ಬ್ಯಾಂಕ್ ಬ್ರಾಂಚ್ ಹಾಗೂ ಭಾಗಮಂಡಲದ ಕೆನರಾಬ್ಯಾಂಕ್ನ ಬ್ಯಾಂಕ್ ಗಳಲ್ಲಿ ಮುರಳೀಧರ್ ಅಕೌಂಟ್ ಗಳನ್ನು ಹೊಂದಿದ್ದಾರೆ. ಮೇ 20 ರಂದು ಮಧ್ಯಾಹ್ನ 1:30ರ ವೇಳೆಗೆ ಡಿವೈಎಸ್ಪಿ ಅವರ ಮೊಬೈಲ್ ಸಂಖ್ಯೆಗೆ ಖಾಲಿ ಮೆಸೇಜ್ಗಳು ಬಂದಿವೆ. ಇದಾದ ನಂತರ ತಮ್ಮ ಗಮನಕ್ಕೇ ಬಾರದೇ ಬೇರೆ ಬೇರೆ ಬ್ಯಾಂಕ್ ಖಾತೆಗಳಿಂದ ಹಣ ವರ್ಗಾವಣೆ ಆಗಿರುವುದು ಬೆಳಕಿಗೆ ಬಂದಿದೆ.
ಮಡಿಕೇರಿ ಅಕೌಂಟ್ ನಿಂದ 12,10,711 ರೂ. ಹಾಗೂ ಭಾಗಮಂಡಲದ ಅಕೌಂಟ್ ನಿಂದ 3,88,050 ರೂ. ಸೇರಿದಂತೆ ಒಟ್ಟು 15,98,761 ರೂ. ಅನ್ನು ಅಪರಿಚಿತ ಬ್ಯಾಂಕ್ ಖಾತೆಗಳಿಗೆ ಟ್ರಾನ್ಸ್ಫರ್ ಮಾಡಲಾಗಿದೆ.
ಸದ್ಯ ಖದೀಮರನ್ನು ಪತ್ತೆ ಮಾಡಿ ತಮ್ಮ ಹಣ ವಾಪಸ್ ಕೊಡಿಸುವಂತೆ ಸೆನ್ ಪೊಲೀಸ್ ಠಾಣೆಗೆ ಡಿವೈಎಸ್ಪಿ ಮುರುಳಿಧರ್ ದೂರು ನೀಡಿದ್ದಾರೆ. ಏನೋ ಸಾಹೇಬ್ರು ಸ್ಟೇಷನ್ ವಿಸಿಟ್ ಗೆ ಬಂದಿರಬಹುದು ಅನ್ಕೊಂಡ ಸೈಬರ್ ಸಿಬ್ಬಂದಿಗಳು ಅಧಿಕಾರಿಯೇ ಸ್ವತಃ ಹಣ ಕಳ್ಕೊಂಡ ವಿಷಯ ಕೇಳಿ ಬೆಚ್ಚಿಬಿದ್ದಿದ್ದಾರೆ.
Hassan Miscreants allegedly hacked bank accounts of Hassan DySP P K Muralidhar. Miscreants allegedly hacked the bank accounts of Hassan sub-division DySP P K Muralidhar and transferred Rs 15.98 lakh to various accounts.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
24-01-26 11:18 pm
Mangaluru Staffer
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm