ಬ್ರೇಕಿಂಗ್ ನ್ಯೂಸ್
22-05-24 04:36 pm HK News Desk ಕ್ರೈಂ
ಹಾಸನ, ಮೇ 22: ಸಿನಿಮೀಯ ರೀತಿಯಲ್ಲಿ ಹಾಸನದ ಡಿವೈಎಸ್ಪಿ ಅವರ ಬ್ಯಾಂಕ್ ಖಾತೆಗೆ ಕನ್ನ ಹಾಕಿದ ಸೈಬರ್ ಕಳ್ಳರು 15 ಲಕ್ಷಕ್ಕೂ ಅಧಿಕ ಹಣ ಎಗರಿಸಿರುವ ಘಟನೆ ನಡೆದಿದೆ.
ಹಾಸನ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪಿ.ಕೆ.ಮುರಳೀಧರ್ ಅವರ ಖಾತೆಯಿಂದಲೇ 15,98,761 ಲಕ್ಷ ರೂ. ಹಣ ವರ್ಗಾವಣೆ ಮಾಡಿಕೊಂಡು ಸೈಬರ್ ಖದೀಮರು ವಂಚನೆ ಮಾಡಿದ್ದಾರೆ. ಈ ಸಂಬಂಧ ಹಾಸನ ನಗರದ ಸಿಇಎನ್ ಪೊಲೀಸ್ ಠಾಣೆಗೆ ಮುರಳೀಧರ್ ಅವರು ದೂರು ನೀಡಿದ್ದಾರೆ.
ಮಡಿಕೇರಿಯ ಕೆನರಾ ಬ್ಯಾಂಕ್ ಬ್ರಾಂಚ್ ಹಾಗೂ ಭಾಗಮಂಡಲದ ಕೆನರಾಬ್ಯಾಂಕ್ನ ಬ್ಯಾಂಕ್ ಗಳಲ್ಲಿ ಮುರಳೀಧರ್ ಅಕೌಂಟ್ ಗಳನ್ನು ಹೊಂದಿದ್ದಾರೆ. ಮೇ 20 ರಂದು ಮಧ್ಯಾಹ್ನ 1:30ರ ವೇಳೆಗೆ ಡಿವೈಎಸ್ಪಿ ಅವರ ಮೊಬೈಲ್ ಸಂಖ್ಯೆಗೆ ಖಾಲಿ ಮೆಸೇಜ್ಗಳು ಬಂದಿವೆ. ಇದಾದ ನಂತರ ತಮ್ಮ ಗಮನಕ್ಕೇ ಬಾರದೇ ಬೇರೆ ಬೇರೆ ಬ್ಯಾಂಕ್ ಖಾತೆಗಳಿಂದ ಹಣ ವರ್ಗಾವಣೆ ಆಗಿರುವುದು ಬೆಳಕಿಗೆ ಬಂದಿದೆ.
ಮಡಿಕೇರಿ ಅಕೌಂಟ್ ನಿಂದ 12,10,711 ರೂ. ಹಾಗೂ ಭಾಗಮಂಡಲದ ಅಕೌಂಟ್ ನಿಂದ 3,88,050 ರೂ. ಸೇರಿದಂತೆ ಒಟ್ಟು 15,98,761 ರೂ. ಅನ್ನು ಅಪರಿಚಿತ ಬ್ಯಾಂಕ್ ಖಾತೆಗಳಿಗೆ ಟ್ರಾನ್ಸ್ಫರ್ ಮಾಡಲಾಗಿದೆ.
ಸದ್ಯ ಖದೀಮರನ್ನು ಪತ್ತೆ ಮಾಡಿ ತಮ್ಮ ಹಣ ವಾಪಸ್ ಕೊಡಿಸುವಂತೆ ಸೆನ್ ಪೊಲೀಸ್ ಠಾಣೆಗೆ ಡಿವೈಎಸ್ಪಿ ಮುರುಳಿಧರ್ ದೂರು ನೀಡಿದ್ದಾರೆ. ಏನೋ ಸಾಹೇಬ್ರು ಸ್ಟೇಷನ್ ವಿಸಿಟ್ ಗೆ ಬಂದಿರಬಹುದು ಅನ್ಕೊಂಡ ಸೈಬರ್ ಸಿಬ್ಬಂದಿಗಳು ಅಧಿಕಾರಿಯೇ ಸ್ವತಃ ಹಣ ಕಳ್ಕೊಂಡ ವಿಷಯ ಕೇಳಿ ಬೆಚ್ಚಿಬಿದ್ದಿದ್ದಾರೆ.
Hassan Miscreants allegedly hacked bank accounts of Hassan DySP P K Muralidhar. Miscreants allegedly hacked the bank accounts of Hassan sub-division DySP P K Muralidhar and transferred Rs 15.98 lakh to various accounts.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm