ಬ್ರೇಕಿಂಗ್ ನ್ಯೂಸ್
24-05-24 01:10 pm Mangalore Correspondent ಕ್ರೈಂ
ಮಂಗಳೂರು, ಮೇ 24: ಇತ್ತೀಚಿನ ದಿನಗಳಲ್ಲಿ ಮನೆ ಕಳ್ಳತನ ಪ್ರಕರಣಗಳು ತೀವ್ರ ಮಟ್ಟದಲ್ಲಿ ಹೆಚ್ಚುತ್ತಿದ್ದು ಮೇ ತಿಂಗಳಲ್ಲಿ ಮಂಗಳೂರು ನಗರ ಸೇರಿದಂತೆ ಇಡೀ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಕಳ್ಳತನ ಪ್ರಕರಣ ವರದಿಯಾಗಿವೆ. ಮಂಗಳೂರು ನಗರದಲ್ಲಿ ಒಂದೇ ವಾರದಲ್ಲಿ ಇತ್ತೀಚೆಗೆ ನಾಲ್ಕು ಕಡೆ ಮನೆ ಕಳ್ಳತನ ಪ್ರಕರಣ ನಡೆದಿತ್ತು.
ಮನೆಯವರು ಮಲಗಿದ್ದಾಗಲೇ ಚಿನ್ನಾಭರಣ ಕಳವು
ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರಿನಲ್ಲಿ ಶೈಲೇಶ್ (21) ಎಂಬವರು ನೀಡಿದ ದೂರಿನ ಪ್ರಕಾರ, ಮೇ 22 ರಂದು ಮನೆಯಲ್ಲಿ ಅವರ ತಾಯಿ ಹಾಗೂ ಅಜ್ಜಿ ಮಲಗಿದ್ದಾಗಲೇ ಹಿಂಬಾಗಿಲು ಮುರಿದು ಕಳ್ಳರು ನುಗ್ಗಿ ಚಿನ್ನಾಭರಣ ದೋಚಿದ್ದಾರೆ. ಬೆಳಗಿನ ಜಾವ ತಾಯಿ ನಿದ್ದೆಯಿಂದ ಎದ್ದು ನೋಡಿದಾಗ, ಮನೆಯ ಹಿಂಬದಿಯ ಬಾಗಿಲು ತೆರೆದಿದ್ದು ಒಳಗಿನ ಚೀಲಕ ಕಿತ್ತು ಹೋಗಿತ್ತು. ಪರಿಶೀಲನೆ ನಡೆಸಿದಾಗ ಕೊಠಡಿಯಲ್ಲಿದ್ದ ಬೀರುವಿನ ಬಾಗಿಲು ತೆಗೆದಿರುವುದು ಕಂಡುಬಂದಿರುತ್ತದೆ. ಅದರಲ್ಲಿದ್ದ ಸುಮಾರು 18 ಪವನ್ ತೂಕದ ಅಂದಾಜು ರೂ 8,64,000/- ಮೌಲ್ಯದ ಚಿನ್ನದ ಆಭರಣಗಳು, 3000/- ರೂ. ನಗದು ಹಣ ಹಾಗೂ ಆಧಾರ್ ಕಾರ್ಡ್, ಜೀವ ವಿಮಾ ಪಾಲಿಸಿ, ಚುನಾವಣೆ ಗುರುತಿನ ಚೀಟಿಗಳಿದ್ದ ವ್ಯಾನಿಟಿ ಬ್ಯಾಗನ್ನು ಯಾರೋ ಕಳ್ಳರು ಕಳವು ಮಾಡಿರುತ್ತಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರಿಗೆ ತೆರಳಿದ್ದಾಗ ಮನೆ ಬೀಗ ಒಡೆದು ಕಳವು
ಇನ್ನೊಂದು ಪ್ರಕರಣದಲ್ಲಿ ಪುತ್ತೂರಿನ ಬನ್ನೂರು ಪಡೀಲ್ ನಿವಾಸಿ ವಿಜಯಶ್ರೀ ಐ. ಭಟ್ (53) ನೀಡಿದ ದೂರಿನಂತೆ, ಮೇ 10 ರಂದು, ತನ್ನ ಮಗಳು ಹಾಗೂ ಗಂಡನೊಂದಿಗೆ, ಮಗನ ಮನೆಗೆ ಹೋಗಿ, ಅಲ್ಲಿಂದ ಮರುದಿನ ಮೈಸೂರಿಗೆ ತೆರಳಿದ್ದರು. ಮಗನ ಬಳಿ ಮನೆಯ ಇನ್ನೊಂದು ಕೀ ಇದ್ದು, ಮೇ 17ರಂದು ಮನೆಗೆ ಬಂದು ವಾಸವಿದ್ದು, ಮರುದಿನ 18 ರಂದು ಬೆಳಗ್ಗೆ ಮನೆಗೆ ಮತ್ತು ಗೇಟಿಗೆ ಬೀಗ ಹಾಕಿ ಹೋಗಿರುತ್ತಾನೆ. ಮೇ 23ರಂದು ಬೆಳಗ್ಗೆ ನೆರೆಮನೆಯ ಮಹಿಳೆ ಕರೆಮಾಡಿ, ಮನೆಯ ಬಾಗಿಲು ತೆರೆದುಕೊಂಡಿರುವ ಬಗ್ಗೆ ಮಾಹಿತಿ ನೀಡಿರುತ್ತಾರೆ. ಕೂಡಲೇ ತನ್ನ ಮಗನಿಗೆ ಮಾಹಿತಿ ನೀಡಿದ್ದು ಆತ ಮನೆಗೆ ಬಂದು ಪರಿಶೀಲಿಸಿದಾಗ ಮುಖ್ಯದ್ವಾರದ ಲಾಕ್ ಅನ್ನು ಯಾರೋ ಕಳ್ಳರು ಒಡೆದಿರುವುದು ಕಂಡುಬಂದಿತ್ತು. ಮನೆಯೊಳಗಿದ್ದ ರೂ.62,700/-ಮೌಲ್ಯದ
ಬೆಳ್ಳಿಯ ಆಭರಣಗಳು ಹಾಗೂ ರೂ.3,17,400 ಮೌಲ್ಯದ ಚಿನ್ನದ ಆಭರಣಗಳು ಹಾಗು ನಗದು ಹಣ ರೂ.8000/- ಕಳವಾಗಿರುವುದು ಕಂಡುಬಂದಿದೆ. ಕಳುವಾದ ಸೊತ್ತುಗಳ ಒಟ್ಟು ಮೌಲ್ಯ ಅಂದಾಜು ರೂ. 3,88,100/- ಆಗಬಹುದು ಎಂಬುದಾಗಿ ದೂರು ನೀಡಿದ್ದಾರೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಸಿ ರೋಡ್ ಬಸ್ ನಿಲ್ದಾಣದಲ್ಲಿ ಚಿನ್ನಾಭರಣ ಕಳವು
ಬೆಳ್ತಂಗಡಿ ಕಲ್ಮಂಜ ಗ್ರಾಮದ ಶಶಿಕಲ (38) ನೀಡಿದ ದೂರಿನಂತೆ, ಮೇ 23ರಂದು ಮಧ್ಯಾಹ್ನ ಬಿಸಿ ರೋಡ್ ಬಸ್ ನಿಲ್ದಾಣದಲ್ಲಿ ಬಸ್ಸಿಗೆ ಕಾಯುತ್ತಿದ್ದಾಗಲೇ ಬ್ಯಾಗಿನಿಂದ 45 ಗ್ರಾಮ್ ಚಿನ್ನಾಭರಣ ಕಳವು ಮಾಡಲಾಗಿದೆ. ಶಶಿಕಲಾ ಅವರು ಅಂದು ಬೆಳಗ್ಗೆ ತನ್ನ ಬ್ಯಾಗ್ನಲ್ಲಿ ತವರು ಮನೆಯವರು ಹಾಗೂ ಗಂಡನ ಮನೆಯವರು ಉಡುಗೊರೆಯಾಗಿ ನೀಡಿದ್ದ ವಿವಿಧ ಶೈಲಿಯ ಒಟ್ಟು 45 ಗ್ರಾಂ ಚಿನ್ನಾಭರಣಗಳನ್ನು ಇರಿಸಿಕೊಂಡು, ಗಂಡ ಮತ್ತು ಚಿಕ್ಕ ಮಗುವಿನ ಜೊತೆಯಲ್ಲಿ ಕಲ್ಲಡ್ಕದಿಂದ ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಬಂದಿದ್ದು ಬಿ ಸಿ ರೋಡ್ ಬಸ್ಸಿನಿಂದ ಇಳಿದಿದ್ದರು. ಬಳಿಕ ರಸ್ತೆ ದಾಟಿ ಬಿಸಿ ರೋಡ್ ಖಾಸಗಿ ಬಸ್ ನಿಲ್ದಾಣದ ಸಮೀಪದ ಸ್ವೀಟ್ಸ್ ಅಂಗಡಿಗೆ ತೆರಳಿದ್ದು, ಈ ವೇಳೆ ಬ್ಯಾಗಲ್ಲಿ ಸದ್ರಿ ಚಿನ್ನಾಭರಣಗಳಿತ್ತು ಎನ್ನಲಾಗಿದೆ. ಸ್ವಲ್ಪ ಸಮಯದ ಬಳಿಕ ಬಿ.ಸಿ.ರೋಡ್ ಖಾಸಗಿ ಬಸ್ ನಿಲ್ದಾಣದ ಬಳಿ ಬಸ್ಸಿಗಾಗಿ ಕಾಯುತ್ತಿದ್ದಾಗ, ಸದ್ರಿ ಬ್ಯಾಗಲ್ಲಿದ್ದ 45 ಗ್ರಾಂ ಚಿನ್ನಾಭರಣಗಳು ಕಾಣೆಯಾಗಿರುತ್ತದೆ. ಅವುಗಳ ಅಂದಾಜು ಮೌಲ್ಯ 2 ಲಕ್ಷ ರೂ. ಆಗಬಹುದು ಎಂಬುದಾಗಿ ನೀಡಿದ ದೂರಿನ ಮೇರೆಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ತೆಂಕಕಾರಂದೂರಿನಲ್ಲಿ ಒಂದೇ ದಿನ ಎರಡು ಕಡೆ ಕಳವು
ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದ ವಿಶ್ವನಾಥ ಶೆಟ್ಟಿ (52) ನೀಡಿದ ದೂರಿನಂತೆ, ಮೇ 22 ರಂದು ರಾತ್ರಿಯಿಂದ ಮರುದಿನ ಬೆಳಗ್ಗಿನ ಅವಧಿಯಲ್ಲಿ ತನ್ನ ಮನೆಯಲ್ಲಿ ಯಾರೂ ಇಲ್ಲದ ಸಮಯ ಮನೆಯ ಬೀಗವನ್ನು ಮುರಿದು ಮನೆಯೊಳಗೆ ನುಗ್ಗಿ ಗೋದ್ರೆಜ್ ಕಪಾಟಿನ ಬಾಗಿಲನ್ನು ತೆರೆದು, ಸುಮಾರು 14 ½ ಗ್ರಾಂ ಚಿನ್ನಾಭರಣ ಮತ್ತು ನಗದು 3000 ಸಾವಿರ ರೂ/- ಗಳನ್ನು ಕಳವು ಮಾಡಿದ್ದಾರೆ. ಕಳವಾದ ಚಿನ್ನಾಭರಣಗಳ ಹಾಗೂ ನಗದು ಸೇರಿ ಅಂದಾಜು ಮೌಲ್ಯ ಸುಮಾರು 75,500 ಆಗಬಹುದು ಎಂಬುದಾಗಿ ನೀಡಿದ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Rise of robbery in Dakshina kannada and mangalore, 18 pounds of gold stolen in totally from many houses.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
09-06-25 11:03 pm
Mangalore Correspondent
Mangalore BY Vijayendra, BJP: ಕಾಂಗ್ರೆಸ್ ಆಡಳಿತ...
09-06-25 09:56 pm
Suhas Shetty Murder, NIA, Mangalore: ಸುಹಾಸ್ ಶ...
08-06-25 10:51 pm
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
09-06-25 09:20 pm
HK News Desk
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm