ಬ್ರೇಕಿಂಗ್ ನ್ಯೂಸ್
28-05-24 05:01 pm HK News Desk ಕ್ರೈಂ
ಕಲಬುರಗಿ, ಮೇ 28: ಮುಂಬೈ ಕ್ರೈಂ ಬ್ರಾಂಚ್ ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ಹಿರಿಯ ವೈದ್ಯ ಡಾ.ಪಿ.ಎಸ್. ಶಂಕರ್ ಅವರಿಗೆ ಫೋನ್ ಕರೆ ಮಾಡಿದ ವಂಚಕ, ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಾಗಿದೆ ಎಂದು ಬೆದರಿಸಿ 76.65 ಲಕ್ಷ ವಂಚಿಸಿದ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇ 13ರಂದು ಶಂಕರ್ ಅವರಿಗೆ ಕರೆ ಬಂದಿತ್ತು. ಮಾತನಾಡಿದ ವ್ಯಕ್ತಿ ತನ್ನ ಹೆಸರು ವಿಜಯಕುಮಾರ ಚೌಬೆ, ಮುಂಬೈ ಕ್ರೈಂ ಬ್ರಾಂಚ್ ಪೊಲೀಸ್ ಇನ್ಸ್ಪೆಕ್ಟರ್ ಎಂದು ಹೇಳಿಕೊಂಡಿದ್ದ. ನಿಮ್ಮ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಾಗಿದೆ. ಜೆಟ್ ಏರ್ವೇಸ್ ಮಾಲೀಕ 256 ಬ್ಯಾಂಕ್ಗಳು ಖಾತೆಗಳನ್ನು ತೆರೆದಿದ್ದಾರೆ. ಅವುಗಳಲ್ಲಿ ನಿಮ್ಮ ಹೆಸರಿನ ಬ್ಯಾಂಕ್ ಖಾತೆಯಿಂದ ಹಣ ಅಕ್ರಮ ವರ್ಗಾವಣೆ ಮಾಡಿಕೊಂಡಿದ್ದಾರೆ. ನೀವು ಅಪರಾಧ ಮಾಡಿಲ್ಲ. ಆದರೆ, ನಿಮ್ಮ ವಿಚಾರಣೆ ಮಾಡಬೇಕಾಗುತ್ತದೆ ಎಂದ ವಂಚಕ, ವಿವಿಧ ಬ್ಯಾಂಕ್ಗಳಲ್ಲಿ ಶಂಕರ್ ಅವರು ಇರಿಸಿದ ಠೇವಣಿಯ ಮಾಹಿತಿ ಕೇಳಿದ ಎಂದು ಪೊಲೀಸರು ತಿಳಿಸಿದ್ದಾರೆ.
ವಂಚಕನ ಮಾತು ನಂಬಿದ ಶಂಕರ್ , ಟಿಎಂಬಿ ಬ್ಯಾಂಕ್ನಲ್ಲಿ ₹ 45 ಲಕ್ಷ, ಎಸ್ಬಿಐ ಬ್ಯಾಂಕ್ನಲ್ಲಿ ₹ 49 ಲಕ್ಷ ಹಾಗೂ ಕೆನರಾ ಬ್ಯಾಂಕ್ನಲ್ಲಿ ₹ 10 ಲಕ್ಷ ಇರಿಸಿದ್ದಾಗಿ ಮಾಹಿತಿ ಹಂಚಿಕೊಂಡರು. ಈ ಬಗ್ಗೆ ಯಾರೊಂದಿಗೂ ಮಾಹಿತಿ ಹಂಚಿಕೊಳ್ಳದೆ, 15 ದಿನ ಎಲ್ಲಿಗೂ ಹೋಗದಂತೆ ವಂಚಕ ಹೆದರಿಸಿದ್ದ ಎಂದಿದ್ದಾರೆ.
Kalaburagi doctor looses 76 lakhs from online fraudters posing as CBI officers. Doctor was threatened of illegal money transfer and later was looted by fraudters. A case has been registered at the cyber police station.
17-07-25 07:45 pm
Bangalore Correspondent
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 06:30 pm
Mangalore Correspondent
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
17-07-25 10:42 pm
Mangalore Correspondent
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm
Cyber Crime Tumkur, Facebook, Mangalore Polic...
16-07-25 11:04 pm
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm