ಬ್ರೇಕಿಂಗ್ ನ್ಯೂಸ್
30-05-24 04:00 pm HK News Desk ಕ್ರೈಂ
ಶಿವಮೊಗ್ಗ, ಮೇ 30: ಶಿವಮೊಗ್ಗದಲ್ಲಿ ಮತ್ತೆ ಪುಂಡರು ಅಟ್ಟಹಾಸ ಮೆರೆದಿದ್ದು, ಮನೆಯಮುಂದೆ ನಿಲ್ಲಿಸಿದ್ದ ವಾಹನಗಳ ಗಾಜುಗಳನ್ನು ದುಷ್ಕರ್ಮಿಗಳು ಗಾಂಜಾ ಮತ್ತಿನಲ್ಲಿ ಪುಡಿಗೈದಿದ್ದಾರೆ.
ದೊಡ್ಡಪೇಟೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಮನೆಯ ಮುಂದೆ ನಿಲ್ಲಿಸಿದ್ದ ನಾಲ್ಕು ಕಾರು, ನಾಲ್ಕು ದ್ವಿಚಕ್ರ ವಾಹನ ಹಾಗೂ ಎರಡು ಆಟೋಗಳ ಗಾಜುಗಳನ್ನು ರಾತ್ರೋ ರಾತ್ರಿ ಪುಂಡರ ತಂಡ ಹಾನಿ ಮಾಡಿದೆ.



ಅಷ್ಟು ಮಾತ್ರವಲ್ಲದೆ ಜಗದೀಶ್ ಅವರಿಗೆ ಸೇರಿದ ಅಂಗಡಿ ಬೀಗ ಮಚ್ಚಿನಿಂದ ಹಾನಿಗೊಳಿಸಲಾಗಿದೆ. ಸಂದೇಶ್ ಅವರಿಗೆ ಸೇರಿದ ಹುಂಡೈ ಸ್ಯಾಂಟ್ರೋ ಕಾರು ಜಖಂಗೊಂಡಿದೆ. ಮಂಜು, ಲಿಂಗರಾಜು ಅವರಿಗೆ ಸೇರಿದ ಎರಡು ಆಟೋಗಳೂ ಕೂಡ ಜಖಂಗೊಂಡಿದೆ. ಅಲ್ಲದೆ ಸಿದ್ದಪ್ಪ, ಜಗದೀಶ್, ಚಂದ್ರಪ್ಪ ಸೇರಿದಂತೆ ನಾಲ್ವರ ಬೈಕ್ ಜಖಂಗೊಂಡಿದೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪುಂಡರ ಪತ್ತೆಗೆ ಬಲೆ ಬಿಸಿದ್ದಾರೆ.
ವಾಹನಗಳನ್ನು ಜಖಂಗೊಳಿಸಲಾದ ಸ್ಥಳಕ್ಕೆ ಶಾಸಕ ಚನ್ನಬಸಪ್ಪ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯರು ಪೊಲೀಸ್ ಇಲಾಖೆಯ ವಿರುದ್ಧ ಆಕ್ರೋಶ ಹೊರಹಾಕಿದರು.
ಹೊಸಮನೆ ಬಡಾವಣೆಯಲ್ಲಿ ಈ ರೀತಿಯ ಘಟನೆ ನಡೆದಿರುವುದು ಇದೇ ಮೊದಲಲ್ಲ. ಕಳೆದ ಒಂದು ವರ್ಷದಲ್ಲಿ ಇದು ಎರಡನೇ ಘಟನೆ. ಗಾಂಜಾ ಸೇವಿಸುವ ಪುಂಡರ ಗುಂಪು ಈ ಭಾಗದಲ್ಲಿ ಪದೇ ಪದೇ ಇಂತಹ ದುಷ್ಕೃತ್ಯಗಳನ್ನು ಎಸಗುತ್ತಿದೆ. ನಶೆಯಲ್ಲಿ ಮನಸೋಇಚ್ಛೆ ಬೈಕ್ನಲ್ಲಿ ಸುತ್ತುವುದು, ಬೆದರಿಸುವುದು, ಸಿಕ್ಕ ಸಿಕ್ಕ ವಾಹನಗಳನ್ನು ಜಖಂಗೊಳಿಸುವುದನ್ನು ಅಭ್ಯಾಸ ಮಾಡಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
Miscreants vandalise car bike auto glass in Shivamogga after being intoxicated with drugs. MLA channabasappa visiting the spot slam the police officers for showing negligence in arresting such miscreants
28-05-26 05:31 pm
HK News Desk
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm