ಬ್ರೇಕಿಂಗ್ ನ್ಯೂಸ್
30-05-24 04:00 pm HK News Desk ಕ್ರೈಂ
ಶಿವಮೊಗ್ಗ, ಮೇ 30: ಶಿವಮೊಗ್ಗದಲ್ಲಿ ಮತ್ತೆ ಪುಂಡರು ಅಟ್ಟಹಾಸ ಮೆರೆದಿದ್ದು, ಮನೆಯಮುಂದೆ ನಿಲ್ಲಿಸಿದ್ದ ವಾಹನಗಳ ಗಾಜುಗಳನ್ನು ದುಷ್ಕರ್ಮಿಗಳು ಗಾಂಜಾ ಮತ್ತಿನಲ್ಲಿ ಪುಡಿಗೈದಿದ್ದಾರೆ.
ದೊಡ್ಡಪೇಟೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಮನೆಯ ಮುಂದೆ ನಿಲ್ಲಿಸಿದ್ದ ನಾಲ್ಕು ಕಾರು, ನಾಲ್ಕು ದ್ವಿಚಕ್ರ ವಾಹನ ಹಾಗೂ ಎರಡು ಆಟೋಗಳ ಗಾಜುಗಳನ್ನು ರಾತ್ರೋ ರಾತ್ರಿ ಪುಂಡರ ತಂಡ ಹಾನಿ ಮಾಡಿದೆ.



ಅಷ್ಟು ಮಾತ್ರವಲ್ಲದೆ ಜಗದೀಶ್ ಅವರಿಗೆ ಸೇರಿದ ಅಂಗಡಿ ಬೀಗ ಮಚ್ಚಿನಿಂದ ಹಾನಿಗೊಳಿಸಲಾಗಿದೆ. ಸಂದೇಶ್ ಅವರಿಗೆ ಸೇರಿದ ಹುಂಡೈ ಸ್ಯಾಂಟ್ರೋ ಕಾರು ಜಖಂಗೊಂಡಿದೆ. ಮಂಜು, ಲಿಂಗರಾಜು ಅವರಿಗೆ ಸೇರಿದ ಎರಡು ಆಟೋಗಳೂ ಕೂಡ ಜಖಂಗೊಂಡಿದೆ. ಅಲ್ಲದೆ ಸಿದ್ದಪ್ಪ, ಜಗದೀಶ್, ಚಂದ್ರಪ್ಪ ಸೇರಿದಂತೆ ನಾಲ್ವರ ಬೈಕ್ ಜಖಂಗೊಂಡಿದೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪುಂಡರ ಪತ್ತೆಗೆ ಬಲೆ ಬಿಸಿದ್ದಾರೆ.
ವಾಹನಗಳನ್ನು ಜಖಂಗೊಳಿಸಲಾದ ಸ್ಥಳಕ್ಕೆ ಶಾಸಕ ಚನ್ನಬಸಪ್ಪ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯರು ಪೊಲೀಸ್ ಇಲಾಖೆಯ ವಿರುದ್ಧ ಆಕ್ರೋಶ ಹೊರಹಾಕಿದರು.
ಹೊಸಮನೆ ಬಡಾವಣೆಯಲ್ಲಿ ಈ ರೀತಿಯ ಘಟನೆ ನಡೆದಿರುವುದು ಇದೇ ಮೊದಲಲ್ಲ. ಕಳೆದ ಒಂದು ವರ್ಷದಲ್ಲಿ ಇದು ಎರಡನೇ ಘಟನೆ. ಗಾಂಜಾ ಸೇವಿಸುವ ಪುಂಡರ ಗುಂಪು ಈ ಭಾಗದಲ್ಲಿ ಪದೇ ಪದೇ ಇಂತಹ ದುಷ್ಕೃತ್ಯಗಳನ್ನು ಎಸಗುತ್ತಿದೆ. ನಶೆಯಲ್ಲಿ ಮನಸೋಇಚ್ಛೆ ಬೈಕ್ನಲ್ಲಿ ಸುತ್ತುವುದು, ಬೆದರಿಸುವುದು, ಸಿಕ್ಕ ಸಿಕ್ಕ ವಾಹನಗಳನ್ನು ಜಖಂಗೊಳಿಸುವುದನ್ನು ಅಭ್ಯಾಸ ಮಾಡಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
Miscreants vandalise car bike auto glass in Shivamogga after being intoxicated with drugs. MLA channabasappa visiting the spot slam the police officers for showing negligence in arresting such miscreants
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 11:41 am
Udupi Correspondent
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm